NEWSನಮ್ಮರಾಜ್ಯಶಿಕ್ಷಣ-

ನಮ್ಮ ನಡೆ ಬದುಕಿನ ಪ್ರತೀ ಪುಟಗಳನ್ನು ತಿರುವಿ ಹಾಕಿ ಮತ್ತೆ ಮತ್ತೆ ಓದುವಂತಿರಬೇಕು : ರಮೇಶ್‌ಗೌಡ

ಬನ್ನಿಕುಪ್ಪೆ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ನಮ್ಮ ಬದುಕೇ ಒಂದು ಪುಸ್ತಕ. ಅದು ಹೇಗಿರಬೇಕೆಂದರೆ ಬದುಕಿದ ಪ್ರತೀ ಪುಟಗಳನ್ನು ತಿರುವಿ ಹಾಕಿ ಮತ್ತೆ ಮತ್ತೆ ಓದುತ್ತ ಮನನ ಮಾಡಿಕೊಳ್ಳುವಂತಿರಬೇಕು ಎಂದು ರೋಟರಿ ಸಿಟಿ ಸೆಂಟರ್‌ನ ಅಧ್ಯಕ್ಷ ಡಿ.ಸಿ. ರಮೇಶ್‌ಗೌಡ ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಬೆಂಗಳೂರಿನ ರೋಟರಿ ಸಿಟಿ ಸೆಂಟರ್ ಹಾಗೂ ಹ್ಯುಮಾನಿಟಿ ಫಸ್ಟ್ ಫೌಂಡೇಷನ್ ಸಂಯುಕ್ತವಾಗಿ ಬನ್ನಿಕುಪ್ಪೆಯ ಕೆಂಗಲ್ ಆಂಜನೇಯಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ 226 ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಿ ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಮುಂದಿನ ಸಮಾಜ ನಿರ್ಮಾಣ ಹೇಗೆ ಮಾಡಬೇಕೆಂಬುದನ್ನು ರೂಢಿಸಿಕೊಳ್ಳಬೇಕು. ಪಾಠದ ಜತೆಗೆ ಆಟಗಳನ್ನೂ ರೂಢಿಸಿಕೊಳ್ಳುವುದರಿಂದ ಇಂದಿನ ಮಾರಕ ರೋಗಗಳಿಂದಲೂ ಮುಕ್ತರಾಗಬಹುದು, ಇದೇ ಆರೋಗ್ಯದ ಗುಟ್ಟು ಎಂದು ಸಲಹೆ ನೀಡಿದರು.

ಡಾ. ಎಂ. ಬೈರೇಗೌಡ ಮಾತನಾಡಿ, ಗ್ರಾಮೀಣ ಮಕ್ಕಳ ಆಲೋಚನೆ ಕನಿಷ್ಠ ನೂರು ವರ್ಷಗಳ ಮುಂದಿರುತ್ತದೆ. ಹಳ್ಳಿಗಮಾರ ಎಂದು ಅವರನ್ನು ಧಮನ ಮಾಡುವ ಜನರೇ ತುಂಬಿರುವ ಸಮಾಜದಲ್ಲಿ ಅವರ ಆಲೋಚನೆಗಳಿಗೆ ಕಿಮ್ಮತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ದೇಶ ಕಟ್ಟುವಲ್ಲಿ ಹಳ್ಳಿಗಾಡಿನ ಮಕ್ಕಳ ಪಾತ್ರ ದೊಡ್ಡದು. ಅದನ್ನು ಪರಿಗಣಿಸಿ ಸೂಕ್ತ ಅವಕಾಶಗಳನ್ನು ಕಲ್ಪಿಸಿಕೊಡಬೇಕಾದ ಅಗತ್ಯವಿದೆ. ಈ ಬಗ್ಗೆ ಸರ್ಕಾರ ಸಮಾಜ ತನ್ನ ಕಣ್ಣನ್ನು ತೆರೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.

ಹ್ಯುಮಾನಿಟಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಉದಯಕುಮಾರ್ ಮಾತನಾಡಿ, ಮಕ್ಕಳೇ ಸಮಾಜದ ಭವಿಷ್ಯ. ಸದೃಢ ದೇಶಕಟ್ಟುವ ಕೆಲಸ ನಿಮ್ಮಿಂದಾಗಬೇಕು. ಧರ್ಮ, ಜಾತಿ, ಭಾಷೆ, ವೇಶಗಳನ್ನೂ ಮೀರಿ ದೇಶ ಕಟ್ಟುವ ಕೆಲಸದಲ್ಲಿ ನಿರತರಾಗೋಣ ಎಂದು ಕರೆನೀಡಿದರು.

ಇಂದಿನ ಎಲ್ಲ ಸಮಸ್ಯೆಗಳಿಗೂ ಮಾನವೀಯ ಮೌಲ್ಯಗಳ ಕೊರತೆಯೇ ಕಾರಣ. ಹೀಗಾಗಿ ನಾವು ಮಾನವೀಯ ಮೌಲ್ಯಗಳನ್ನು ವೃದ್ಧಿಕೊಳ್ಳುವತ್ತ ಹೆಜ್ಜೆಯನಿಡಬೇಕು ಎಂದು ಸಮಸ್ತ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ರೋಟರಿ ಸಿಟಿ ಯೂತ್ ಪ್ರಸಿಡೆಂಟ್ ಅರುಣ್‌ಕುಮಾರ್, ರೊಟೆರಿಯನ್ ಅಶೋಗನ್ ಕಾರ್ಯಕ್ರಮದಲ್ಲಿ ಪಾಲ್ಗೊಮಡಿದ್ದರು. ಮುಖ್ಯ ಶಿಕ್ಷಕ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ