KKRTC: ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿ ಲಂಚಾವತಾರಕ್ಕೆ ಬೇಸತ್ತು ಸ್ವಯಂ ನಿವೃತ್ತಿ ಪಡೆದ ಸಿಬ್ಬಂದಿ

- VRS ಪಡೆದರೂ ನೆಮ್ಮದಿಕಳೆದುಕೊಂಡು ಇನ್ನೂ ಡಿಸಿ ಕಿರುಕುಳದಲ್ಲೇ ಹೆಣಗಾಟ
- ಸಂಸ್ಥೆಯಿಂದ ಬರಬೇಕಾದ ಸೌಲಭ್ಯ ಕೊಡದೆ ಕಾಟ ಕೊಡುತ್ತಿರುವ ಡಿಸಿ ಸಿದ್ದಪ್ಪ ಗಂಗಾಧರ್
ಕಲಬುರಗಿ: ಕಲ್ಯಾಣ ಕರ್ನಾಕಟ ರಸ್ತೆ ಸಾರಿಗೆ ನಿಗಮದ ಕಲಬುರಗಿ 2ರ ವಿಭಾಗೀಯ ನಿಯಂತ್ರಣಾಧಿಕಾರಿಯ ಹಣ ದಾಹಕ್ಕೆ ನೌಕರನೊಬ್ಬ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ.
ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದಪ್ಪ ಗಂಗಾಧರ್ನ ಹಣ ದಾಹಕ್ಕೆ ವಿಭಾಗದ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಹಿಮಾನ್ ಮಸ್ಕಿ ಎಂಬುವರು ಬಲಿಯಾಗಿದ್ದಾರೆ.
ಇತ್ತ ಈ ಡಿಸಿಯ ಕಿರುಕುಳ, ಹಿಂಸೆಯನ್ನು ಸಹಿಸಲಾಗದೆ ರಹಿಮಾನ್ ಮಸ್ಕಿ 15 ಜನವರಿ 2025ಕ್ಕೆ ಅನ್ವಯವಾಗುವಂತೆ ಸ್ವಯಂ ನಿವೃತ್ತಿ (VRS) ಪಡೆದುಕೊಂಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು 2 ತಿಂಗಳ ಮೇಲಾದರೂ ಅವರಿಗೆ ನಿವೃತ್ತಿ ನಂತರ ಸಿಗಬೇಕಿರುವ ಪಿಎಫ್, ಗ್ರಾಚ್ಯುಟಿ, ಇಎಲ್ ಹಣ ಸೇರಿದಂತೆ ವಿವಿಧ ಸೌಲಭ್ಯಗಳ ಹಣವನ್ನು ಮಂಜೂರು ಮಾಡದೆ ಕಾಡುತ್ತಿದ್ದಾನೆ ಈ ಭ್ರಷ್ಟ ಅಧಿಕಾರಿ ಸಿದ್ದಪ್ಪ.
ಇದಕ್ಕೂ ಮುನ್ನಾ ಅಂದರೆ ರಹಿಮಾನ್ ಮಸ್ಕಿ ಅವರು ಸ್ವಯಂ ನಿವೃತ್ತ ಪಡೆಯುವುಕ್ಕೂ ಮುನ್ನಾ ಹಿರಿಯ ಸಹಾಯಕರಾಗಿ ಬಡ್ತಿ ಹೊಂದಬೇಕಿತ್ತು. ಆ ಬಡ್ತಿ ನೀಡುತ್ತೇನೆ, ಅದಕ್ಕಾಗಿ 2.25 ಲಕ್ಷ ರೂಪಾಯಿ ನೀನು ಕೊಡಬೇಕು ಎಂದು ಹೇಳಿ ಆ ಹಣವನ್ನೂ ಪಡೆದುಕೊಂಡಿದ್ದಾನೆ ಈ ಭ್ರಷ್ಟ.
ಭ್ರಷ್ಟ ಸಿದ್ದಪ್ಪನ ಜತೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರ ಪಿಎ ಪ್ರಭು ಕೂಡ ಕೈ ಜೋಡಿಸಿದ್ದಾನೆ. ಪ್ರಭು ಕೂಡ ಡಿಸಿಗೆ ಹಣ ಕೊಡು ನಿನಗೆ ಬಡ್ತಿ ಕೊಡುತ್ತಾರೆ ಈ ಬಗ್ಗೆ ನಾನು ಕೂಡ ಮಾತನಾಡುತ್ತೇನೆ ಎಂದು ರಹಿಮಾನ್ಗೆ ಹೇಳಿ ಲಂಚ ಕೊಡುವುದಕ್ಕೆ ಪ್ರಚೋದನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮೊದಲೇ ಲಂಚ ಪಡೆಯುವುದೇ ಅಪರಾಧ ಆ ಲಂಚ ಪಡೆದ ಮೇಲಾದರೂ ಆತನಿಗೆ ಬಡ್ತಿ ಕೊಡಬೇಕಿತ್ತು. ಆದರೆ, ಆ ಕೆಲಸ ಕೂಡ ಮಾಡದೆ ಮತ್ತೆ ಕಿರುಕುಳ ನೀಡಿದ್ದಾನೆ ಡಿಸಿ ಸಿದ್ದಪ್ಪ. ಜತೆಗೆ ರಹಿಮಾನ್ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಬರಬೇಕಿದ್ದ 1ತಿಂಗಳ ವೇತನವನ್ನು ಕೊಡದೆ ಗೈರುಹಾಜರಿ ತೋರಿಸಿ ಇವನ ಅಪ್ಪನ ಮನೆಯಿಂದ ಕೊಡುವ ರೀತಿಯಲ್ಲಿ ಕಿರುಕುಳ ನೀಡಿದ್ದಾನೆ.
ಇಷ್ಟೆಲ್ಲ ಆದ ಮೇಲೆ ನನಗೆ ಇವರ ಸಹವಾಸವೇ ಬೆಡ ಎಂದು ಸ್ವಯಂ ನಿವೃತ್ತಿಯನ್ನು 15ನೇ ಜನವರಿ 2025ರಿಂದ ಅನ್ವಯವಾಗುವಂತೆ ಪಡೆದುಕೊಂಡಿದ್ದರೂ ರಹಿಮಾನ್ಗೆ ನಿವೃತ್ತಿ ನಂತರ ಬರಬೇಕಿರುವ ಸೌಲಭ್ಯಗಳನ್ನು ಕೊಡದೆ ಈವರೆಗೂ ಕಾಡಿಸಿಕೊಂಡೆ ಬಂದಿದ್ದಾನೆ ಡಿಸಿ ಸಿದ್ದಪ್ಪ ಗಂಗಾಧರ್.
ಈ ಭ್ರಷ್ಟನಿಗೆ ಈತನ ಪಿಎ ರವಿ ಕುಲಕರಣಿ, ಎಂಡಿ ಪಿಎ ಪ್ರಭು ಸಾಥ್ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಒಂದು ಆಶ್ಚರ್ಯ ಎಂದರೆ ಇಷ್ಟೆಲ್ಲ ಭ್ರಷ್ಟಾಚಾರ, ನೌಕರರಿಗೆ ಕಿರುಕುಳ ಕೊಡುತ್ತಿರುವುದು ಈ ಎಂಡಿ ರಾಚಪ್ಪ ಅವರಿಗೆ ಗೊತ್ತಾಗುತ್ತಿಲ್ಲವೆ. ಒಂದು ವೇಳೆ ಗೊತ್ತಿದ್ದರು ಜಾಣ ಮೌನ ವಹಿಸಿದ್ದಾರೆಯೇ ಎಂಡಿ ಎಂಬ ಅನುಮಾನ ಮೂಡುತ್ತಿದೆ.
ಇಂಥ ಭ್ರಷ್ಟರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಇರುವಾಗ ಅಂದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಕಾಪಾಡುವವರು ಯಾರು ಎಂಬುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ. ಇಂಥ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟ ಎಂಡಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಭ್ರಷ್ಟರಿಗೆ ಕಾನೂನಿನ ಪ್ರಕಾರ ತಕ್ಕ ಶಿಕ್ಷೆಗೆ ಗುರಿಪಡಿಸಬೇಕಿದೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...