NEWSನಮ್ಮಜಿಲ್ಲೆರಾಜಕೀಯ

‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿ’ : ಪಾನಿಪುರಿ ಮಂಜನ ವಿಶಿಷ್ಟ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯಾದ್ಯಂತ ಬಿಜೆಪಿಗೆ ರೌಡಿಗಳು ಸೇರುತ್ತಿರು ಬಗ್ಗೆ ಭಾರಿ ವಿವಾದ ಎದ್ದಿರುವ ಬೆನ್ನಲೇ ಇಲ್ಲೊಬ್ಬ ರೌಡಿ ಶೀಟರ್‌ ಭೂಪ ಬಿಜೆಪಿಗೆ ಮನವಿವೊಂದನ್ನು ಮಾಡಿದ್ದಾನೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅದೇ ಎಂದು ಕುತೂಹಲವೇ ಅದೇ ರೀ ‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿ’ ಎಂದು ಬೋರ್ಡ್ ಹಿಡಿದು ಕುಳಿತಿದ್ದಾನೆ. ಈ ಘಟನೆ ಮೈಸೂರಿನ ನ್ಯಾಯಾಲಯದ ಬಳಿ ನಡೆದಿದೆ.

ಹೌದು! ಮೈಸೂರಿನ ನ್ಯಾಯಾಲಯದ ಮುಂದೆ ‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿ’ ಎಂದು ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆ ರೌಡಿ ಶೀಟರ್ ನನ್ನು ಸದ್ಯ ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಜು ಅಲಿಯಾಸ್ ಪಾನಿಪುರಿ ಮಂಜು ಎಂಬ ರೌಡಿ ಶೀಟರ್‌ ಬಿಜೆಪಿ ವಿರುದ್ಧ ಈ ವಿಶಿಷ್ಟ ಪ್ರತಿಭಟನೆ ನಡೆಸಿದವ. ಪಾನಿಪುರಿ ಮಂಜ ಕೆ.ಆರ್.ಠಾಣೆ ಪೊಲೀಸರು ವಶದಲ್ಲಿ ಇದ್ದಾನೆ. ಈತ 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ. ಆ ವೇಳೆ ಪಾನಿಪುರಿ ಮಂಜು ಬಗ್ಗೆ ಪೊಲೀಸರು ರೌಡಿ ಶೀಟರ್ ತೆರೆದಿದ್ದರು.

ಸದ್ಯ ಈಗ ಮಂಜು ಮೇಲೆ ಉದಯಗಿರಿ ಪೊಲೀಸರು ರೌಡಿ ಶೀಟರ್ ತೆರೆದಿದ್ದು ಹೆಚ್ಚಿನ ವಿಚಾರಣೆಗಾಗಿ ಕೆ.ಆರ್.ಠಾಣೆ ಪೊಲೀಸರು ಉದಯಗಿರಿ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ. ಈಗ ಪೊಲೀಸರ ಅತಿಥಿ ಆಗಿರುವ ಮಂಜು ನಾನು ಬಿಜೆಪಿಗೆ ಸೇರಲೇ ಬೇಕು ಎಂದು ಹಠಹಿಡಿದು ಕುಳಿತಿರುವುದಾಗಿ ತಿಳಿದು ಬಂದಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ