ವಿಶ್ವ ವಿಖ್ಯಾತ ಬೆಂಗಳೂರು “ಕರಗ ಶಕ್ತ್ಯೋತ್ಸವ” ಸಿದ್ದತೆ ಮಾಡಿಕೊಳ್ಳಿ: ಅವಿನಾಶ್ ಮೆನನ್ ರಾಜೇಂದ್ರನ್

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು “ಕರಗ ಶಕ್ತ್ಯೋತ್ಸವ” ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಸೂಚನೆ ನೀಡಿದ್ದಾರೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣ-01ರಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕರಗ ನಡೆಯುವ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಹತ್ತಿರದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಬಾಕಿ ಇರುವ ಕಾಮಗಾರಿಯನ್ನು ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್ ಮಾತನಾಡಿ, ಕರಗ ಶಕ್ತ್ಯೋತ್ಸವ ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಕರಗ ಉತ್ಸವ ನಡೆಯುವ ರಸ್ತೆಗಳಲ್ಲಿನ ಬೀದಿ ದೀಪಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ, ಎಲ್ಲಾ ಕಡೆ ವಿದ್ಯುತ್ ದೀಪಗಳ ಅಳವಡಿಕೆ ವ್ಯವಸ್ಥೆ ಮಾಡಬೇಕು. ವಿದ್ಯುತ್ ಸಂಪರ್ಕ ಕಡಿತಾಗೊಳ್ಳದಂತೆ ಬೆಸ್ಕಾಂ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಕರಗ ಮಹೋತ್ಸವವು 4ನೇ ಏಪ್ರಿಲ್ 2025 ರಿಂದ 14ನೇ ಏಪ್ರಿಲ್ 2025 ರವರೆಗೆ ನಡೆಯಲಿದ್ದು, ಈ ವೇಳೆ ಸ್ವಚ್ಛತಾ ನಿರ್ವಹಣೆ ದೃಷ್ಟಿಯಿಂದ ಘನತ್ಯಾಜ್ಯ ವಿಭಾಗದ ಅಧಿಕಾರಿ ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸೂಚಿಸಿದರು.
ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ: ಸಂಚಾರ ಪೊಲೀಸ್ ವಿಭಾಗವು ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟಣೆಯಾಗದಂತೆ ಮಾರ್ಗ ಬದಲಾವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸಬೇಕು. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಅವಕಾಶ ನೀಡದಂತೆ ಹಾಗೂ ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳುವುದು.
ಸಿಸಿ ಕ್ಯಾಮೆರಾ ಅಳವಡಿಕೆ: ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಬ್ಯಾರಿಕೇಡಿಂಗ್ ವ್ಯವಸ್ಥೆ ಹಾಗೂ ಅಗ್ನಿ ಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆಯನ್ನು ಕೈಗೊಳ್ಳಬೇಕು.
ಆರೋಗ್ಯ ಸಿಬ್ಬಂದಿ ನಿಯೋಜನೆ: ಕರಗ ನಡೆಯುವ ದಿನಗಳಲ್ಲಿ ಕರಗ ವೀಕ್ಷಿಸಲು ಬರುವವರಿಗೆ ಆರೋಗ್ಯದಲ್ಲಿ ಏರುಪೇರಾದಲ್ಲಿ ಅವರಿಗೆ ಕೂಡಲೆ ಚಿಕಿತ್ಸೆ ನೀಡುವ ಸಲುವಾಗಿ ಪಾಲಿಕೆ ಆರೋಗ್ಯ ವಿಭಾಗದಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡಬೇಕು. ಜೊತೆಗೆ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಕೂಡಾ ಮಾಡಿಕೊಂಡಿರಲು ಸೂಚಿಸಿದರು.
ಕರಗ ಮಹೋತ್ವವದ ವಿವರ: * 4ನೇ ಏಪ್ರಿಲ್ 2025 ರಂದು ಶುಕ್ರವಾರ ರಾತ್ರಿ 10 ಗಂಟೆ ಹಾಗೂ ಮುಂಜಾನೆ 3 ಗಂಟೆಗೆ ‘ರಥೋತ್ಸವ ಧ್ವಜಾರೋಹಣ’ ನಡೆಯಲಿದೆ.
* 5 ರಿಂದ 8ನೇ ಏಪ್ರಿಲ್ 2025 ರವೆಗೆ ಶನಿವಾರದಿಂದ ಮಂಗಳವಾರದವರೆಗೆ ರಾತ್ರಿ 7.30ಕ್ಕೆ ‘ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ’ ನಡೆಯಲಿದೆ.
* 9ನೇ ಏಪ್ರಿಲ್ 2025 ರಂದು ಬುಧವಾರ ಮುಂಜಾನೆ 3 ಗಂಟೆಗೆ ‘ಆರತಿ ದೀಪಗಳು’ ನಡೆಯಲಿದೆ.
* 10ನೇ ಏಪ್ರಿಲ್ 2025 ರಂದು ಗುರುವಾರ ಮುಂಜಾನೆ 3 ಗಂಟೆಗೆ ಸಂಪಂಗಿಕೆರೆ ಅಂಗಳದ ಶಕ್ತಿ ಪೀಠದಲ್ಲಿ “ಹಸಿ ಕರಗ” ನಡೆಯಲಿದೆ.
* 12ನೇ ಏಪ್ರಿಲ್ 2025 ರಂದು ಶನಿವಾರ ರಾತ್ರಿ 12.30ಕ್ಕೆ “ಕರಗ ಶಕ್ತ್ಯೋತ್ಸವ ಮತ್ತು ಶ್ರೀ ಧರ್ಮರಾಯ ಸ್ವಾಮಿ ಮಹೋತ್ಸವ” ನಡೆಯಲಿದೆ.
* 13ನೇ ಏಪ್ರಿಲ್ 2025 ರಂದು ಭಾನುವಾರ ರಾತ್ರಿ 2.00 ಹಾಗೂ ಮುಂಜಾನೆ 4 ಗಂಟೆಗೆ ‘ಪುರಾಣ ಪ್ರವಚನ ಹಾಗೂ ದೇವಸ್ಥಾನದಲ್ಲಿ ಗಾವು ಶಾಂತಿ’ ನಡೆಯಲಿದೆ.
* 14ನೇ ಏಪ್ರಿಲ್ 2025 ರಂದು ಸೋಮವಾರ ಸಂಜೆ 4.00 ಹಾಗೂ ರಾತ್ರಿ 12.00 ಗಂಟೆಗೆ ‘ವಸಂತೋತ್ಸವ ಧ್ವಜಾರೋಹಣ’ದ ಮೂಲಕ ಕರಗವು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಈ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಉದಯ್ ಬಿ. ಗರುಡಾ ಚಾರ್, ವಲಯ ಆಯುಕ್ತರಾದ ಅರ್ಚನಾ, ದಿಗ್ವಿಜಯ್ ಬೋಡ್ಕೆ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಬಿಬಿಎಂಪಿ, ಮುಜರಾಯಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...
ಅಭಿವೃದ್ಧಿಗೆ ಹಣ ಇಲ್ಲ ಅಂತ ಸುಳ್ಳು ಎರಚುವ ಬಿಜೆಪಿಗೆ ನಮ್ಮ ಸವಾಲ್: ಸಿಎಂ
ಮಂಡ್ಯ: ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು...
ಇಂದು ಕರೆದಿದ್ದ KSRTC ನೌಕರರ ಸಂಧಾನ ಸಭೆಯಲ್ಲಿ ಕಾಲವಕಾಶ ಕೇಳಿದ ಆಡಳಿತ ಮಂಡಳಿ- ಆ.2ಕ್ಕೆ ಸಭೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 5ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೋಟಿಸ್...