CRIMEನಮ್ಮರಾಜ್ಯ

ಪ್ರೀತಿಸು ಎಂದು ಹಿಂದೆ ಬಿದ್ದ ಯುವಕನ ಕಾಟ ತಾಳಲಾರದೆ SSLC ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಈ ವರ್ಷ ಇದೇ ಮಾರ್ಚ್‌ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ 17 ವರ್ಷದ ವಿದ್ಯಾರ್ಥಿನಿ ಪ್ರೀತಿಸು ಎಂದು ಹಿಂದೆ ಬಿದ್ದದ ಯುವಕನ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತೆ ಇನ್ನೇನು ಪರೀಕ್ಷೆ ಬರೆಯಲು ಸಹ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಳು. ಮಾ.21ರಿಂದ ಪರೀಕ್ಷೆಗೆ ಹಾಜರಾಗಬೇಕು ಎನ್ನುವಷ್ಟರಲ್ಲಿ ಬಾಲಕಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿ ಬಾರದ ಲೋಕಕ್ಕೆ ಹೋಗಿದ್ದಾಳೆ. ‌

ಸಿದ್ದಲಿಂಗ ಪೂಜೇರಿ ಎಂಬ ಯುವಕನ ಕಾಟದಿಂದ ಅಪ್ರಾಪ್ತೆ  ನಿನ್ನೆ ಅಂದರೆ ಮಾರ್ಚ್ 16ರಂದು  ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಬಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಾರ್ಚ್ 17ರ ಬೆಳಗ್ಗೆ ಮೃತಪಟ್ಟಿದ್ದಾಳೆ.

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ‌ ನಿವಾಸಿ ಸಿದ್ದಲಿಂಗ ಪೂಜೇರಿ (21) ಎಂಬಾತ, ಇನ್ನೂ ಮೀಸೆ ಸರಿಯಾಗಿ ಚಿಗುರಿಲ್ಲ. ಆಗಲೇ ಪ್ರೀತಿ ಪ್ರಣಯ ಅಂತ ಅಪ್ರಾಪ್ತಯನ್ನು ಬಲಿಪಡೆದು ಈಗ ಕಂಬಿಹಿಂದೆ ಸೇರೆಯಾಗಿದ್ದಾನೆ.

ಪ್ರೀತ್ಸೇ ಪ್ರೀತ್ಸೇ ಅಂತ ಬಾಲಕಿ ಹಿಂದೆ ಬಿದ್ದು ಟಾರ್ಟರ್ ಕೊಡುತ್ತಿದ್ದ. ಇದರಿಂದ ಹಲವಾರು ಬಾರಿ ಆತನಿಗೆ ಎಚ್ಚರಿಕೆ ಕೂಡ ನೀಡಲಾಗಿತ್ತು. ಆದರೂ ಸಹ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಕಾರಣಕ್ಕೆ ಮನನೊಂದು ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಈ ವೇಳೆ ಪಕ್ಕದ ಮನೆಯವರು ಅದನ್ನು ಗಮನಿಸಿ ತಂದೆ ತಾಯಿಗೆ ಹೇಳಿದ್ದಾರೆ ಇತ್ತ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.‌ ಆದರೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ತಡರಾತ್ರಿ ಪೋಷಕರು ಕರೆತಂದಿದ್ದಾರೆ. ‌ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಶಾಲೆಗೆ ಹೋಗುವಾಗ ಮತ್ತು ಬರುವಾಗ ತನ್ನನ್ನು ಪ್ರೀತಿಸು ಎಂದು ಸಿದ್ದಲಿಂಗ ಪೀಡಿಸುತ್ತಿದ್ದ ಹೀಗಾಗಿ ಮನನೊಂದು ನಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸುತ್ತಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಕೂಡಲೇ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಒಟ್ಟಿನಲ್ಲಿ ಜಗತ್ತನ್ನೇ ಅರಿಯದ ವಯಸ್ಸಲ್ಲಿ ಪ್ರೀತಿ ಪ್ರೇಮದ ಗುಂಗಿಗೆ ಬಿದ್ದ ಯುವಕ ಬಾಲಕಿಯ ಸಾವಿಗೆ ಕಾರಣವಾಗಿದ್ದಾನೆ. ಇದರಿಂದ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರೆ ಇತ್ತ  ಪರೀಕ್ಷೆ ಬರೆದು ಜೀವನದ ಮುಂದಿನ‌ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಬಾಲಕಿ ಜೀವನದ ಅಗ್ನಿಪರೀಕ್ಷೆಯನ್ನೇ ಮುಗಿಸಿ ಬಾರದ ಲೋಕಕ್ಕೆ ಹೋಗಿದ್ದಾಳೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ