CRIMEಬೆಂಗಳೂರು

ಚಾಲಕನ ನಿಯಂತ್ರಣ ತಪ್ಪಿ, ಐರಾವತ, ಲಾರಿ, ಕಾರು, ಆಟೋ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ಒಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐರಾವತ ಬಸ್‌ ಬಳಿಕ ಕಾರು, ಆಟೋ, ಲಾರಿ ಹಾಗೂ ಬೈಕ್‌ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಮೈಸೂರು ರಸ್ತೆಯಲ್ಲಿ ಜರುಗಿದೆ.

ಶನಿವಾರ ಮುಂಜಾನೆ (ಮಾ.15) 5ಗಂಟೆ ಸುಮಾರಿಗೆ ನಗರದ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಲ್ದಾಣ ಸಮೀಪ ಈ ಅವಘಡ ಸಂಭವಿಸಿದ್ದು, ಅಪಘಾತದಿಂದ ಆಟೋ ಸಂಪೂರ್ಣ ಅಪ್ಪಚ್ಚಿಯಾಗಿದೆ.

ಕ್ಯಾಂಟರ್ ಮೈಸೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಿಂತಿದ್ದ ಕಾರು, ಆಟೋ, ಬೈಕ್‍ಗೆ ಡಿಕ್ಕಿಯಾಗಿದೆ. ಅಲ್ಲದೆ ಡಿಕ್ಕಿ ಹೊಡೆದುಕೊಂಡೆ ಬಂದು ಬಂದಿದ್ದು, ಈ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಬರುತ್ತಿದ್ದ ಐರಾವತ ಬಸ್‌ಸಹ ಡಿಕ್ಕಿಹೊಡೆದಿದೆ. ಬಳಿಕ ಲಾರಿಯೊಂದಕ್ಕೆ ಗುದ್ದಿ ಕ್ಯಾಂಟರ್ ನಿಂತಿದೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಡಿಕ್ಕಿಯ ರಭಸಕ್ಕೆ ಕ್ಯಾಂಟರ್‌ನ ಮುಂಭಾಗ ಜಖಂಗೊಂಡಿದ್ದು, ಗಾಯಗೊಂಡಿದ್ದ ಕ್ಯಾಂಟರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕ್ಯಾಂಟರ್ ಚಾಲಕ ಕುಡಿದು ವಾಹನ ಚಲಾಯಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ