NEWSನಮ್ಮರಾಜ್ಯವಿಡಿಯೋ

ಸಾರಿಗೆ ನೌಕರರಿಗೂ ವೇತನ ಆಯೋಗ ಮಾದರಿ ಅಳವಡಿಕೆ ಭರವಸೆ ಕೊಟ್ಟ ಸಾರಿಗೆ ಸಚಿವ – ಮೌಖಿಕ ಭರವಸೆ ಒಪ್ಪದ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಾರಿಗೆ ನೌಕರರಿಗೆ ಏಳನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವ ಹಾಗೂ ವಜಾಗೊಂಡ ನೌಕರರನ್ನು ಯಾವುದೇ ಕಂಡೀಶನ್ ಇಲ್ಲದೆ ಮರು ನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ನೀಡಿದ ಭರವಸೆಯನ್ನು ಸತ್ಯಾಗ್ರಹ ನಿರತ ನೌಕರರು ಒಪ್ಪದೆ ನಮಗೆ ಲಿಖಿತವಾಗಿ ಭರವಸೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸರ್ಕಾರಿ ನೌಕರರಿಗೆ ಇರುವಂತೆ ಹುದ್ದೆಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಕೊಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಮುಂದೆ ಸತ್ಯಾಗ್ರಹ ಮಾಡುತ್ತಿರುವ ಸಾರಿಗೆ ನೌಕರರನ್ನು ಇಂದು ಭೇಟಿ ಮಾಡಿದ ಸಚಿವ ಶ್ರೀರಾಮುಲು ಅವರು ನೌಕರರಿಗೆ ಮತ್ತೆ ಮೌಖಿಕ ಭರವಸೆ ನೀಡಿದರು. ಆದರೆ, ಅವರ ಭರವಸೆಯ ಮಾತುಗಳನ್ನು ನಿರಾಕರಿಸಿದ ನೌಕರರು ಲಿಖಿತ ರೂಪದಲ್ಲಿ ಕೊಡಬೇಕು ಎಂದು ಕೇಳಿದರು.

ಅದಕ್ಕೆ ಸಚಿವರು ಮೌನವಾದರು ಹೀಗಾಗಿ ಈ ಭರವಸೆಗಳು ನಮ್ಮ ನೌಕರರನ್ನು ಹತಾಶಗೊಳಿಸಿದ್ದು ಲಿಖಿತ ಭರವಸೆಗಾಗಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದು, ಕಾಲಮಿತಿ ಹಾಗೂ ಕಳೆದ ಮುಷ್ಕರದ ಸಮಯದಲ್ಲಿ ಉಳಿದೆಲ್ಲ ಸಮಸ್ಯೆಗಳನ್ನು ಲಿಖಿತ ಆದೇಶಗಳ ಮುಖಾಂತರ ನೌಕರರ ಸಮಸ್ಯೆಗಳನ್ನು ಬಗೆಹರಿಸಿ ಸಾರಿಗೆ ನೌಕರರನ್ನು ನೆಮ್ಮದಿ ಜೀವನ ಸಾಗಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ನೌಕರರು ಸಚಿವರ ಮುಂದೆ ಪ್ರಮುಖವಾದ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆ ಕೂಗಿದರು.

ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ, ಇತರ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆದು ದಿನಾಂಕ; 06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಂಡು ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವುದು.

1992 ರ ನಂತರ, ಇಲ್ಲಿಯವರೆಗೂ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿಲ್ಲ. ಆದ್ದರಿಂದ ಈ ಕೂಡಲೆ ಕಡ್ಡಾಯವಾಗಿ ಸಾರಿಗೆ ನಿಗಮಗಳಲ್ಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು.

ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುದ ಯೋಜನೆಯನ್ನು ಈ ಕೂಡಲೆ ಕೈ ಬಿಡುವುದು.

ಸಾರಿಗೆ ಸಂಸ್ಥೆಯ ಎಲ್ಲ ನೌಕರರಿಗೂ ದಿನಾಂಕ: 10/04/2002 ರ ಪೂರ್ವದಲ್ಲಿ ಉಪದಾನ ಪಾವತಿಸುತ್ತಿದ್ದ ನಿಯಮಾವಳಿಯನ್ನು ಪರಿಗಣಿಸಿ ಜಾರಿಗೊಳಿಸುವುದು, 6) ಕಾರ್ಯಸ್ಥಳಗಳಲ್ಲಿ ನೌಕರರು ಕಿರುಕುಳ ರಹಿತ ಮತ್ತು ನೆಮ್ಮದಿಯಾಗಿ ಕರ್ತವ್ಯ ನಿರ್ವಾಹಿಸುವ ವಾತಾವರಣ ಸೃಷ್ಟಿ ಮಾಡಬೇಕು ಎಂಬ ಘೋಷಣೆಗಳನ್ನು ಕೂಗಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?