NEWSಆರೋಗ್ಯನಮ್ಮರಾಜ್ಯ

ಬೆಳಗಾವಿ: ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ಮಹಿಳಾ ಸಿಬ್ಬಂದಿ ಅಸ್ವಸ್ಥ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಉಪವಾಸವಿದ್ದ ಸಾರಿಗೆಯ ಮಹಿಳಾ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲಾಗಿರುವ ಘಟನೆ ಇಂದು ರಾತ್ರಿ 9ಗಂಟೆ ಸುಮಾರಿಗೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಸ್ವಸ್ಥಗೊಂಡ ಮಹಿಳಾ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದ್ದು, ಅವರ ಉಸಿರಾಟಕ್ಕೆ ಆಮ್ಲಜನಕ (ಆಕ್ಸಿಜನ್‌) ನೀಡಲಾಗಿದೆ.

ಇತ್ತ ನಿನ್ನೆಯಿಂದ ಉಪವಾಸ ಕುಳಿತಿರುವ ನೌಕರರಲ್ಲಿ ಇನ್ನು ಒಂದಿಬ್ಬರು ನೌಕರರ ಆರೋಗ್ಯದಲ್ಲೂ ಏರುಪೇರಾಗುತ್ತಿದೆ ಎಂದು ಪ್ರತಿಭಟನಾ ನಿರತ ನೌಕರರು ತಿಳಿಸಿದ್ದಾರೆ.

ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯ ಬಗ್ಗೆ ವೈದ್ಯರು ನಿಗಾವಹಿಸುತ್ತಿದ್ದು, ಅವರ ಆರೋಗ್ಯದ ಬಗ್ಗೆ ಇನ್ನೂ ಏನು ಹೇಳಿಲ್ಲ ಎಂದು ನೌಕರರು ತಿಳಿಸಿದ್ದಾರೆ.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮೀನಮೇಷ ಎಣಿಸುತ್ತಿರುವುದರಿಂದ ನೂರಾರು ಕಿಲೋ ಮೀಟರ್‌ನಲ್ಲಿ ತಮ್ಮ ಸಂಸಾರವನ್ನು ಬಿಟ್ಟು ಹೋರಾಟಕ್ಕೆ ಧುಮುಕಿರುವ ಸಿಬ್ಬಂದಿ ಪ್ರಾಣದ ಹಂಗುತೊರೆದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ