NEWSದೇಶ-ವಿದೇಶರಾಜಕೀಯ

ನ್ಯೂಡೆಲ್ಲಿ: ಸಂಸತ್ ಚಳಿಗಾಲದ ಅಧಿವೇಶನ ಆರು ದಿನ ಮುಂಚಿತವಾಗಿ ಮುಕ್ತಾಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಡಿಸೆಂಬರ್ 7 ರಂದು ಆರಂಭವಾಗಿದ್ದ ಅಧಿವೇಶನ ಡಿಸೆಂಬರ್ 29ಕ್ಕೆ ಮುಗಿಯಬೇಕಿತ್ತು. ಆದರೆ, ಆರು ದಿನ ಮುಂಚಿತವಾಗಿಯೇ ಮುಕ್ತಾಯವಾಗಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ  ಘೋಷಿಸಿದರು.

ಹೀಗಾಗಿ ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನ ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದೆ. ಸರ್ಕಾರದ ಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರತಿನಿಧಿಗಳನ್ನೊಳಗೊಂಡ ಲೋಕಸಭಾ ಕಾರ್ಯ ಕಲಾಪ ಸಮಿತಿ ಸಭೆಯಲ್ಲಿ ಅಧಿವೇಶನದ ಅವಧಿಯನ್ನು ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.

ಸದನ ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನಾ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ ಚಳಿಗಾಲದ ಸಂಸತ್ ಅಧಿವೇಶನ ಶೇ. 97 ರಷ್ಟು ಫಲಪ್ರದವಾಗಿದೆ ಎಂದು ತಿಳಿಸಿದರು.

ಸದನವು ಒಟ್ಟು 62 ಗಂಟೆ 42 ನಿಮಿಷಗಳ ಕಾಲ 13 ಸಭೆಗಳನ್ನು ನಡೆಸಿತು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸದನದಲ್ಲಿ ಉಪಸ್ಥಿತರಿದ್ದರು ಎಂದು ವಿವರಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು