KSRTC ಎಂಡಿ ನಡೆಗೆ ಬೇಸರ: ತುಟ್ಟಿಭತ್ಯೆ ವಿಲೀನಗೊಂಡು 7ತಿಂಗಳು ಗತಿಸಿದರೂ ನೌಕರರಿಗೆ ಬಿಡಿಎ ಆದೇಶ ಹೊರಬಿದ್ದಿಲ್ಲ, ಜು.2024ರ ಡಿಎ ಸಹ ಕೊಟ್ಟಿಲ್ಲ

ಬೆಂಗಳೂರು: ಈವರೆಗೂ ಸಾಮಾನ್ಯ ಪ್ರಕ್ರೀಯೆವಾಗಿದ್ದ DA ಹಾಗೂ BDA ಗಳನ್ನೂ ಸಹ ಇನ್ನು ಮುಂದೆ ಹೋರಾಟ ಮಾಡಿ ಪಡೆಯಬೇಕಾಗುತ್ತೋ ಏನೋ ಎಂಬ ಆತಂಕದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಇದ್ದಾರೆ.
ಸಾರಿಗೆ ನಿಗಮಗಳಲ್ಲಿ ನೌಕರರಿಗೆ ಪ್ರಮುಖವಾಗಿ ಅವರು ಪಡೆಯಬೇಕಿರುವ ವೇತನ ಸೌಲಭ್ಯವನ್ನು ಸಕಾಲಕ್ಕೆ ಸರ್ಕಾರ ಅಥವಾ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಕೊಡದೆ ಭಾರಿ ಸಮಸ್ಯೆಗೆ ಸಿಲುಕಿಸುತ್ತಿದೆ. ಅಂದರೆ ಈ ವ್ಯವಸ್ಥೆ DA ಹಾಗೂ BDA ಗಳನ್ನೂ ಸಹ 7 ತಿಂಗಳು ಕಳೆಯುತ್ತಾ ಬಂದರೂ ಈ ವರೆಗೂ ನೀಡಿಲ್ಲ ಎಂದರೆ ವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ ಎಂಬುದರ ಬಗ್ಗೆ ಯೋಚಿಸಬೇಕಿದೆ.
ಹೌದು! ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ಅವರಿಗೆ ನೌಕರರ ಮೂಲಭೂತ ಹಕ್ಕುಗಳ ವಿಚಾರವೇದಿಕೆ ಮನವಿ ಸಲ್ಲಿಸಿದ್ದು ಕೂಡಲೇ ಬಿಡಿಎ ಹಾಗೂ ಡಿಎ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದೆ.
ಪೂರ್ಣ ಮಾಹಿತಿ: ತುಟ್ಟಿಭತ್ಯೆ ವಿಲಿನಗೊಳಿಸಿದ (ಮರ್ಜ್) ಒಂದು ತಿಂಗಳಲ್ಲಿ ಸಾರಿಗೆ ನೌಕರರಿಗೆ ಬಿಡಿಎ ಅಳವಡಿಸಿರುವುದನ್ನು ನಾವು ಕಾಣುತ್ತ ಬಂದಿದ್ದೇವೆ. ಆದರೆ ಈ ಬಾರಿ ತುಟ್ಟಿಭತ್ಯೆ ವಿಲೀನಗೊಂಡು ಏಳು ತಿಂಗಳು ಗತಿಸುತ್ತ ಬಂದರೂ ಸಾರಿಗೆ ನೌಕರರಿಗೆ ಬಿ.ಡಿ.ಎ. ಆದೇಶ ಈವರೆಗೂ ಹೊರಬಿದ್ದಿಲ್ಲ. ಅಲ್ಲದೇ ಜುಲೈ-2024 ರ ಶೇ.2.25 ಡಿಎ ಯನ್ನು ಸಹ ನೀಡಿಲ್ಲ. ಬಹುಶಃ ಈ ರೀತಿ ವಿಳಂಬ ಇತಿಹಾಸದಲ್ಲಿ ಇದೇ ಪ್ರಥಮವಾಗಿದೆ.
ಬಿಡಿಎ ಮತ್ತು ಡಿಎ ವಿಚಾರದಲ್ಲಿ ಯಾವುದೇ ಹೊಸ ನೀತಿ ನಿಯಮಗಳನ್ನೇನು ರಚಿಸಬೇಕಿಲ್ಲ. ಇದೊಂದು ಸಾಮಾನ್ಯ ಮತ್ತು ಬಹು ಕಾಲದಿಂದ ನಡೆದುಕೊಂಡು ಬಂದ ಪದ್ಧತಿ ಯಾಗಿದ್ದು ಸರಕಾರ ಡಿ.ಎ. ಮರ್ಜ್ಮಾಡಿದ ತಕ್ಷಣವೇ ಸಾರಿಗೆ ನೌಕರರಿಗೆ ಬಿ.ಡಿ.ಎ. ಅಳವಡಿಸಲಾಗುತ್ತದೆ. ಸರಕಾರ ಡಿಎ ಘೋಷಿಸಿದ ಕೂಡಲೇ ಸಾರಿಗೆ ನೌಕರರಿಗೆ ಡಿಎ ಅಳವಡಿಸಲಾಗುತ್ತದೆ. ಆದರೆ ನಾಲ್ಕೂ ನಿಗಮಗಳ ನೌಕರರಿಗೆ ಬಿಡಿಎ ಹಾಗೂ ಡಿಎ ಅಳವಡಿಸಲು ಕೆಎಸ್ಆರ್ಟಿಸಿ ಎಂಡಿ ಆದೇಶ ಹೊರಡಿಸಬೇಕಾಗುತ್ತದೆ. ಆ ಕೆಲಸ ಈವರೆಗೂ ನಡೆದಿಲ್ಲ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ನಿಗಮದ ಹಲವು ಇಲಾಖಾ ಮುಖ್ಯಸ್ಥರನ್ನು ನಮ್ಮ ಸಂಘದಿಂದ ಸಂಪರ್ಕಿಸಿಸಾಗ ಯಾರಿಂದಲೂ ಧನಾತ್ಮಕ ಪ್ರತಿಕ್ರೀಯೆ ಸಿಕ್ಕಿಲ್ಲ. ಎಲ್ಲರೂ ಮೇಲಿನನವರ ಕಡೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಬಿ.ಡಿ.ಎ. ಹಾಗೂ ಡಿ.ಎ. ಆದೇಶ ಹೊರಡಿಸುವಲ್ಲಿ ಯಾರಿಂದ, ಯಾವ ಹಂತದಲ್ಲಿ ಅಡತಡೆ ಉಂಟಾಗಿದೆ ಎನ್ನುವುದೇ ನಮಗೆ ಸ್ಪಷ್ಟವಾಗಿ ತಿಳಿಯುತ್ತಿಲ್ಲ.

ಆದ್ದರಿಂದ ತಾವು ಅತ್ಯಂತ ಮುತುವರ್ಜಿವಹಿಸಿ ಆದಷ್ಟು ಬೇಗನೇ ಸಾರಿಗೆ ನೌಕರರಿಗೆ ಬಿ.ಡಿ.ಎ ಹಾಗೂ ಡಿ.ಎ. ಸಾಧ್ಯವಾಗಿಸಿಕೊಡಲು ಸಂಬಂಧಪಟ್ಟವರಿಗೆ ಸೂಕ್ತ ಆದೇಶ ನೀಡಿರೆಂದು ಈ ಮೂಲಕ ವಿನಂತಿಸಿಕೊಂಡಿರುತ್ತೇವೆ, ಜತೆಗೆ ಎಂದೂ ವಿಳಂಬವಾಗದ ಬಿಡಿಎ, ಡಿಎ ಗಳಿಗೆ ತಮ್ಮ ಕಾಲಾವಧಿಯಲ್ಲಿ ಅಡತಡೆ ಅಥವಾ ವಿಳಂಬವಾಗಬಾರದು ಎನ್ನುವುದು ನಮ್ಮ ಅಭಿಪ್ರಾಯ ಹಾಗೂ ನಮ್ಮ ನಮ್ರ ವಿನಂತಿ ಎಂದು ವಿಚಾರವೇದಿಕೆ ಮನವಿ ಮಾಡಿದೆ.
ವಿಚಾರವೇದಿಕೆ ರಾಜ್ಯಾಧ್ಯಕ್ಷ ವೈ.ಎಂ.ಶಿವರೆಡ್ಡಿ, ಪ್ರಧಾನ ಕಾರ್ಯದರ್ಶಿ ತಿಪ್ಪೇಶ್ವರ ಅಣಜಿ, ಉಪಾಧ್ಯಕ್ಷ ರಫೀಕ್ಹಮದ್ ನಾಗನೂರ ಮತ್ತಿತರರು ಕೆಎಸ್ಆರ್ಟಿಸಿ ಎಂಡಿ ಜತೆಗೆ ಮುಖ್ಯ ಮಂತ್ರಿಗಳು, ಸಾರಿಗೆ ಹಾಗೂ ಮುಜುರಾಯಿ ಸಚಿವರು, ಕಾರ್ಮಿಕ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಮನವಿ ಪ್ರತಿಗಳನ್ನು ಸಲ್ಲಿಸಿದ್ದಾರೆ.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...