CRIMEನಮ್ಮಜಿಲ್ಲೆ

ಬಸ್‌ಗಳ ನಡುವೆ ಅಪಘಾತ ಓರ್ವ ಪ್ರಯಾಣಿಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಮದನಪಲ್ಲಿ- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್‌ಗಳ ನಡುವೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಗುಂಟಪಲ್ಲಿ ಕ್ರಾಸ್‌ನಲ್ಲಿ ಜರುಗಿದೆ.

ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಗಂಗಾಧರ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿರುವ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಾಯಲ್ಪಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದನಪಲ್ಲಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಕರ್ನಾಟಕ ಗಡಿಯಲ್ಲಿ ಈ ಖಾಸಗಿ ಬಸ್‌ಗಳು ಅಪಘಾತಕ್ಕೀಡಾಗಿವೆ. ಖಾಸಗಿ ಬಸ್‌ಗಳ ಚಾಲಕರು ಅತೀ ವೇಗವಾಗಿ ಬಸ್‌ಗಳನ್ನು ಓಡಿಸುತ್ತಿರುವುದರಿಂದ ಇಂಥ ಅವಘಗಳು ಸಂಭವಿಸುತ್ತಿವೆ ಎಂದು ಪ್ರಯಾಣಿಕ ಶ್ರೀಸಾಯಿ ಎಂಬುವರು ತಿಳಿಸಿದ್ದಾರೆ.

ಇನ್ನು ಈ ಬಸ್‌ಗಳಿಗೆ ಕಡಿವಾಣ ಹಾಕಬೇಕಾದರೆ ಕೆಎಸ್‌ಆರ್‌ಟಿಸಿ ಹಾಗೂ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಾಗಿಈ ಮಾರ್ಗದಲ್ಲಿ ಬಿಡಬೇಕು ಎಂದು ಶ್ರೀಸಾಯಿ ಅಗ್ರಹಿಸಿದ್ದಾರೆ. ಅಲ್ಲದೆ ಈ ಬಸ್‌ಗಳು ಪ್ರಯಾಣಿಸಲು ಸುರಕ್ಷಿತವಾಗಿವೆ ಹೀಗಾಗಿ ಕರ್ನಾಟಕ ಮತ್ತು ಆಂಧ್ರದ ಗಡಿಗಳಿಂದ ಅಂತಾರಾಜ್ಯ ಕೆಎಸ್‌ಆರ್‌ಟಿಸಿ ಎಪಿಎಸ್‌ಆರ್‌ಟಿಸಿ ಬಸ್‌ಸೇವೆಯನ್ನು ಹೆಚ್ಚಿಸಿ ಬೆಂಗಳೂರಿನಿಂದ ಕಡಪ ಮದನಪಲ್ಲಿ ತಿರುಪತಿ ಶ್ರೀಕಾಳಹಸ್ತಿಗೆ ಸುರಕ್ಷಿತ ಪ್ರಯಾಣಕ್ಕೆ ಭಾರಿ ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

ಅಪಘಾತ ಸಂಬಂಧ ರಾಯಲ್ಪಾಡು ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ