CRIMEನಮ್ಮಜಿಲ್ಲೆ

ಬಸ್‌ಗಳ ನಡುವೆ ಅಪಘಾತ ಓರ್ವ ಪ್ರಯಾಣಿಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಮದನಪಲ್ಲಿ- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್‌ಗಳ ನಡುವೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಗುಂಟಪಲ್ಲಿ ಕ್ರಾಸ್‌ನಲ್ಲಿ ಜರುಗಿದೆ.

ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಗಂಗಾಧರ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿರುವ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಾಯಲ್ಪಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದನಪಲ್ಲಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಕರ್ನಾಟಕ ಗಡಿಯಲ್ಲಿ ಈ ಖಾಸಗಿ ಬಸ್‌ಗಳು ಅಪಘಾತಕ್ಕೀಡಾಗಿವೆ. ಖಾಸಗಿ ಬಸ್‌ಗಳ ಚಾಲಕರು ಅತೀ ವೇಗವಾಗಿ ಬಸ್‌ಗಳನ್ನು ಓಡಿಸುತ್ತಿರುವುದರಿಂದ ಇಂಥ ಅವಘಗಳು ಸಂಭವಿಸುತ್ತಿವೆ ಎಂದು ಪ್ರಯಾಣಿಕ ಶ್ರೀಸಾಯಿ ಎಂಬುವರು ತಿಳಿಸಿದ್ದಾರೆ.

ಇನ್ನು ಈ ಬಸ್‌ಗಳಿಗೆ ಕಡಿವಾಣ ಹಾಕಬೇಕಾದರೆ ಕೆಎಸ್‌ಆರ್‌ಟಿಸಿ ಹಾಗೂ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಾಗಿಈ ಮಾರ್ಗದಲ್ಲಿ ಬಿಡಬೇಕು ಎಂದು ಶ್ರೀಸಾಯಿ ಅಗ್ರಹಿಸಿದ್ದಾರೆ. ಅಲ್ಲದೆ ಈ ಬಸ್‌ಗಳು ಪ್ರಯಾಣಿಸಲು ಸುರಕ್ಷಿತವಾಗಿವೆ ಹೀಗಾಗಿ ಕರ್ನಾಟಕ ಮತ್ತು ಆಂಧ್ರದ ಗಡಿಗಳಿಂದ ಅಂತಾರಾಜ್ಯ ಕೆಎಸ್‌ಆರ್‌ಟಿಸಿ ಎಪಿಎಸ್‌ಆರ್‌ಟಿಸಿ ಬಸ್‌ಸೇವೆಯನ್ನು ಹೆಚ್ಚಿಸಿ ಬೆಂಗಳೂರಿನಿಂದ ಕಡಪ ಮದನಪಲ್ಲಿ ತಿರುಪತಿ ಶ್ರೀಕಾಳಹಸ್ತಿಗೆ ಸುರಕ್ಷಿತ ಪ್ರಯಾಣಕ್ಕೆ ಭಾರಿ ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

ಅಪಘಾತ ಸಂಬಂಧ ರಾಯಲ್ಪಾಡು ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?