ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ತುಮಕೂರು ವಿಭಾಗದ ಕೆಲವು ಘಟಕಗಳಲ್ಲಿ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಡ್ಯೂಟಿರೋಟ ಪದ್ಧತಿಯನ್ನು ಜೇಷ್ಠತೆಯ ಆಧಾರದ ಮೇಲೆ ಮಾಡುತ್ತಿಲ್ಲ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಎಸ್.ಎಲ್.ಲೋಕೇಶ್ ಲಿಖಿತ ದೂರು ನೀಡಿದ್ದಾರೆ.
ಈ ಸಂಬಂಧ ಶನಿವಾರ ದೂರು ನೀಡಿರುವ ಲೋಕೇಶ್, ತುಮಕೂರು ವಿಭಾಗದಲ್ಲಿ ಏಳು ಘಟಕಗಳ ಪೈಕಿ ಶಿರ ಹಾಗೂ ಮಧುಗಿರಿಯಲ್ಲಿ ಕೇಂದ್ರ ಕಚೇರಿ ಆದೇಶದ ಅನ್ವಯ ಜೇಷ್ಠತೆ ಆಧಾರದ ಮೇಲೆ ಡ್ಯೂಟಿರೋಟ ಪದ್ಧತಿಯನ್ನು ಜನವರಿಯಿಂದ ಜಾರಿಗೆ ತಂದಿದ್ದಾರೆ. ಆದರೆ ಉಳಿದ ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ಶಾಖೆಯಲ್ಲಿ ಇರುವ ಸಿಬ್ಬಂದಿಗಳು ಹಲವಾರು ಕಾರಣಗಳನ್ನು ಹೇಳಿಕೊಂಡು ಡ್ಯೂಟಿರೋಟ ಪದ್ಧತಿಯ ಕೌನ್ಸಿಲಿಂಗ್ ಮಾಡುವುದನ್ನು ಮುಂದೂಡುತ್ತಾ ಬಂದಿದ್ದಾರೆ.
ಕೆಲವು ಘಟಕಗಳಲ್ಲಿ ಬಿಎಂಟಿಸಿ ಇಂದ ಕೆಲವು ಸಿಬ್ಬಂದಿಗಳು ವರ್ಗಾವಣೆಯಾಗಿ ಬರುವುದಿದೆ ಅವರು ಬಂದ ನಂತರ ಮಾಡುತ್ತೇವೆ ಎಂದು ಇನ್ನೂ ಕೆಲವು ಘಟಕಗಳಲ್ಲಿ ನಮ್ಮನ್ನು ನೀವು ಕೇಳಬೇಡಿ ವಿಭಾಗಿಯ ಸಂಚಲನಾಧಿಕಾರಿಗಳನ್ನು ಕೇಳಿ ಎಂದು ಮತ್ತೆ ಕೆಲವು ಘಟಕಗಳಲ್ಲಿ, ಈ ವಾರ ಮುಂದಿನ ವಾರ ಎಂದು ಸಬೂಬು ಹೇಳುತ್ತಾ ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಮುಖ್ಯವಾಗಿ ಸಂಚಾರ ಶಾಖೆಯ ಅಧಿಕಾರಿಗಳಿಗೆ ಕೆಲವು ಚಾಲನೆ ಸಿಬ್ಬಂದಿಗಳು ಹೊಂದಾಣಿಕೆಯ ಕಾರಣದಿಂದ ಹಣ ನೀಡಿ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಅವರ ಅನುಕೂಲಕ್ಕಾಗಿ ಡ್ಯೂಟಿರೋಟ ಪದ್ದತಿ ಮಾಡುವುದನ್ನು ಮುಂದೂಡುತ್ತ ಬಂದಿದ್ದಾರೆ.
ತಿಪಟೂರು ಘಟಕದಲ್ಲಿ 2024ರಲ್ಲಿ ಆದಂತ ಡ್ಯೂಟಿರೋಟ ಪದ್ಧತಿಯ ಆಯ್ಕೆ ಮಾಡಿಕೊಂಡ ಶೇಕಡ 50ಕ್ಕೂ ಹೆಚ್ಚು ಸಿಬ್ಬಂದಿಗಳು ಆ ಮಾರ್ಗಗಳಲ್ಲಿ ಡ್ಯೂಟಿ ಮಾಡದೆ ಸಂಚಾರ ಶಾಖೆಯವರ ನಡುವೆ ಹಣದ ಹೊಂದಾಣಿಕೆಯ ಕಾರಣದಿಂದ ಹೆಚ್ಚು ರೂಟ್ಗಳನ್ನು ಹಾಗೂ ರಿಟರ್ನ್ ರೂಟ್ಗಳನ್ನು ಅತಿ ಹೆಚ್ಚು ಹಣ ನೀಡಿ ಮಾಡುವಂತ ವ್ಯವಸ್ಥೆ ಮಾಡಿಕೊಂಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಸೇವಾ ಹಿರಿತನದ ನೌಕರರಿಗೆ ಮಾರ್ಗಗಳು ದೊರೆಯುತ್ತಿಲ್ಲ. ಮುಖ್ಯವಾಗಿ ಎಲ್ಲ ಘಟಕಗಳಲ್ಲಿಯೂ ಹಿರಿಯ ಸಿಬ್ಬಂದಿಗಳಿಗೆ ಹೆಚ್ಚಿನ ತೊಂದರೆ ಇದ್ದು ಇತ್ತೀಚಿಗೆ ಬಂದಂತಹ ಕಿರಿಯ ಸಿಬ್ಬಂದಿಗಳು ಸಂಚಾರ ಶಾಖೆಯವರಿಗೆ ಹಣ ನೀಡಿ ಹಿರಿಯ ಸಿಬ್ಬಂದಿಗಳನ್ನು ಕಡೆಗಣನೆ ಮಾಡಿದ್ದಾರೆ.
ಈ ಎಲ್ಲ ಸಮಸ್ಯೆಗಳ ಬಗ್ಗೆ ಘಟಕಗಳಿಗೆ ಪ್ರತಿ ತಿಂಗಳು ಆಗಮಿಸುವ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಹಾಗೂ ವಿಭಾಗೀಯ ಸಂಚಲನಾಧಿಕಾರಿಗಳಿಗೆ ಎಲ್ಲ ಘಟಕಗಳಲ್ಲಿಯೂ ಸಿಬ್ಬಂದಿಗಳು ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸಂಚಾರ ಶಾಖೆಯವರಿಂದ ಪ್ರತಿ ತಿಂಗಳು ಮಾಮೂಲಿ ಪಡೆಯುವ ಕಾರಣಕ್ಕಾಗಿಯೇ ಡ್ಯೂಟಿರೋಟ ಪದ್ಧತಿ ಅನುಷ್ಠಾನಗೊಳಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸೇವಾ ಹಿರಿತನದ ಚಾಲನೆ ಸಿಬ್ಬಂದಿಗಳಿಗೆ ಘಟಕಗಳಲ್ಲಿ ಕೆಲಸ ನಿರ್ವಹಿಸುವಂತಹ ವಾತಾವರಣ ಇಲ್ಲವಾಗಿದೆ. ಪ್ರತಿ ಸಿಬ್ಬಂದಿಯೂ ಸಹ ಘಟಕದಲ್ಲಿ ಉಸಿರುಗಟ್ಟಿಸುವಂತಹ ವಾತಾವರಣದಲ್ಲಿಯೇ ಕೆಲಸ ನಿರ್ವಹಿಸಲು ಹೋಗುವ ಕಾರಣದಿಂದ ಅವರ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರುತ್ತಿವೆ.
ಈ ಅಂಶಗಳನ್ನು ಹಾಗೂ ಕಾರಣಗಳನ್ನು ಪರಿಶೀಲಿಸಿ, ತುಮಕೂರು ವಿಭಾಗದ ಅಧಿಕಾರಿಗಳಿಗೆ ಚಾಲನಾ ಸಿಬ್ಬಂದಿಗಳಿಗೆ ಅನುಕೂಲಕರ ವಾಗುವ ರೀತಿಯಲ್ಲಿ ಡ್ಯೂಟಿರೋಟ ಪದ್ಧತಿಯನ್ನು ಈ ಕೂಡಲೇ ತತಕ್ಷಣಕ್ಕೆ ಜಾರಿಗೆ ಬರುವಂತೆ ಮಾಡಲು ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ತಾವು ನಿರ್ದೇಶನ ನೀಡಬೇಕೆಂದು ಹಾಗೂ ಈ ಪದ್ದತಿಯನ್ನು ಅನುಷ್ಠಾನಗೊಳಿಸಲು ತಡ ಮಾಡುತ್ತಿರುವಂತಹ ಪ್ರತಿ ಘಟಕದ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಶಾಖೆಯ ಇನ್ಸ್ಪೆಕ್ಟರ್ ಗಳಿಗೆ ಸೂಕ್ತ ರೀತಿಯ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Related

You Might Also Like
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...