NEWSದೇಶ-ವಿದೇಶನಮ್ಮರಾಜ್ಯ

ಎಟಿಎಂನಲ್ಲಿ ಹಣ ಬಾರದಿದ್ದರೂ ಖಾತೆಯಿಂದ ದುಡ್ಡು ಕಟ್‌ – ಬ್ಯಾಂಕ್‌ಗೆ ₹2.04 ಲಕ್ಷ ದಂಡ ಹಾಕಿದ ಗ್ರಾಹಕ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:  ಎಟಿಎಂನಲ್ಲಿ ಹಣ ತೆಗೆಯಲು ಹೋದ ಗ್ರಾಹಕರೊಬ್ಬರಿಗೆ ಹಣ ಬರಲಿಲ್ಲ. ಆದರೆ ಅವರ ಬ್ಯಾಂಕ್ ಖಾತೆಯಿಂದ ಕಡಿತವಾಗಿತ್ತು. ಆ ಬಳಿಕ ಸಂಬಂಧಪಟ್ಟ ಬ್ಯಾಂಕ್‌ ಗ್ರಾಹಕನಿಗೆ ಹಣ ನೀಡಲು ನಿರಾಕರಿಸಿದ್ದರ ವಿರುದ್ಧ ಗ್ರಾಹಕ ನ್ಯಾಯಾಲಯದಲ್ಲಿ ದಾವೆಹೂಡಿದ್ದರಿಂದ ಬ್ಯಾಂಕಿಗೆ ₹2.24 ಲಕ್ಷಗಳ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ಆಯೋಗ ತೀರ್ಪು ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನ್ಸಾರಿ ಎಂಬುವವರು ಬಿಹಾರ ರಾಜ್ಯದ ಮುಜಾಫರಪುರ್‌ಕ್ಕೆ ಪ್ರವಾಸ ಹೋಗಿದ್ದರು. ಆ ವೇಳೆ ಅಲ್ಲಿನ ಎಚ್‌ಡಿಎಫ್‌ಸಿ ಬ್ಯಾಂಕ್‌ ಎಟಿಎಂನಲ್ಲಿ 10 ಸಾವಿರದಂತೆ ಎರಡು ಬಾರಿ ಹಣ ತೆಗೆಯಲು ಕಾರ್ಡ್ ಎಟಿಎಂ ಬಳಸಿದ್ದರು. ಆದರೆ ಎಟಿಎಂನಿಂದ ಹಣ ಬರದೇ ಇದ್ದರೂ ಅವರ ಉಳಿತಾಯ ಖಾತೆಯಿಂದ ₹20 ಸಾವಿರ ಕಡಿತವಾಗಿತ್ತು. ಈ ಬಗ್ಗೆ ಅವರು ತನ್ನ ಉಳಿತಾಯ ಖಾತೆ ಇರುವ ಹುಬ್ಬಳ್ಳಿಯ ಅಂಚಟಗೇರಿಯ ಯೂನಿಯನ್ ಬ್ಯಾಂಕ್‍ಗೆ ದೂರು ನೀಡಿದ್ದರು. ಎಟಿಎಂ ತಪ್ಪನ್ನು ಸರಿಪಡಿಸಲು ಕೋರಿದ್ದರು.

ಗ್ರಾಹಕ ನೀಡಿದ ದೂರಿನ ಆಧಾರದ ಮೇಲೆ ಯೂನಿಯನ್ ಬ್ಯಾಂಕ್, ಎಟಿಎಂ ದೋಷದಿಂದ ಬಾರದ ₹20 ಸಾವಿರವನ್ನು ತಕ್ಷಣ ದೂರುದಾರರ ಖಾತೆಗೆ ಜಮಾ ಮಾಡುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್‍ಗೆ ಪತ್ರ ವ್ಯವಹಾರ ಮಾಡಲಾಗಿತ್ತು. ಆದರೂ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಖಾತೆಗೆ ಹಣ ಜಮಾ ಆಗಲಿಲ್ಲ.

ಇದರಿಂದ ಬೇಸತ್ತ ಗ್ರಾಹಕ ಹಣ ಖಾತೆಗೆ ಜಮಾವಾಗಿಲ್ಲ, ಇದರಿಂದ ತನಗೆ ತೊಂದರೆಯಾಗಿದೆ. ಇದಕ್ಕೆಲ್ಲ ಆ ಬ್ಯಾಂಕ್‌ನಿಂದ ಸೇವಾ ನ್ಯೂನ್ಯತೆಯೇ ಕಾರಣ ರಂದು ಬ್ಯಾಂಕ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಮೆಟ್ಟಿಲೇರಿದರು.

ಗ್ರಾಹಕ ಕೊಟ್ಟ ದೂರನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಟಿಎಂ ದೋಷದಿಂದ ದೂರುದಾರನಿಗೆ ಹಣ ಬಂದಿಲ್ಲ. ಕಾರಣ ಆ ಹಣ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿಯೇ ಉಳಿದಿದೆ.

ಈ ಬಗ್ಗೆ ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕರು 2019ರಲ್ಲಿ ಎರಡು ಬಾರಿ ಬ್ಯಾಂಕ್‌ನವರನ್ನು ಸಂಪರ್ಕಿಸಿ ದೂರುದಾರರ ಹಣವನ್ನು ಅವರ ಖಾತೆಗೆ ಹಿಂದಿರುಗಿಸಲು ಕೋರಿದ್ದರು. ಆದರೂ ಬ್ಯಾಂಕ್‌ನವರು ಘಟನೆ ನಡೆದ 17/01/2019 ರಿಂದ ಈ ವರೆಗೂ ಅಂದರೆ ಸುಮಾರು 4 ವರ್ಷ ಕಾಲ ದೂರುದಾರನ ಖಾತೆಗೆ ಹಣ ಜಮಾ ಮಾಡಲೇ ಇಲ್ಲ.

ಈ ರೀತಿ ಎಟಿಎಂ ದೋಷದಿಂದ ಹಣ ಬಾರದ ಪ್ರಕರಣಗಳಲ್ಲಿ 6 ದಿನದೊಳಗಾಗಿ ಸಂಬಂಧಿಸಿದ ಬ್ಯಾಂಕ್‌ನವರು ಕ್ರಮ ಕೈಗೊಂಡು ಗ್ರಾಹಕನ ಖಾತೆಗೆ ಹಣ ಜಮಾ ಮಾಡಬೇಕು. ತಪ್ಪಿದ್ದಲ್ಲಿ 7ನೇ ದಿನದಿಂದ ಜಮಾ ಆಗುವವರೆಗೆ ಪ್ರತಿ ದಿನ ₹100 ದಂಡ ಕೊಡಬೇಕು ಎಂಬ ಸುತ್ತೋಲೆ ಇದೆ. ಆದ್ದರಿಂದ 17/01/2019 ರಿಂದ ಈವರೆಗೆ ಸುಮಾರು 4 ವರ್ಷಗಳ ಕಾಲ ಹಣ ದೂರುದಾರರ ಖಾತೆಗೆ ಜಮಾ ಮಾಡದ ಕಾರಣ ಬ್ಯಾಂಕ್‌ ಸಿಬ್ಬಂದಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ್ದಾರೆ ಎಂದು ಜಿಲ್ಲಾ ಗ್ರಾಹಕರ ಆಯೋಗ ಈ ತೀರ್ಪು ನೀಡಿದೆ.

17/01/2019 ರಂದು ಈ ಘಟನೆ ನಡೆದಿದ್ದು ಅದಾದ 6 ದಿನದ ನಂತರ ಅಂದರೆ 23/01/2019 ರಿಂದ ಈ ತೀರ್ಪು ನೀಡಿದ 3/01/2023ರ ವರೆಗೆ 1441 ದಿನಗಳವರೆಗೆ ಪ್ರತಿ ದಿನಕ್ಕೆ 100 ರೂಪಾಯಿಯಂತೆ ಲೆಕ್ಕಾ ಹಾಕಿ ಎಚ್‌ಡಿಎಫ್‌ಸಿ ಬ್ಯಾಂಕ್‌ನವರು ದೂರುದಾರನಿಗೆ ₹1,44,100 ದಂಡ.

₹20 ಸಾವಿರ ಎಟಿಎಂ ಹಣ ಮತ್ತು ದೂರುದಾರನಿಗೆ ಆಗಿರುವ ತೊಂದರೆ ಮತ್ತು ಮಾನಸಿಕ ಹಿಂಸೆಗೆ ₹ 50,000 ದಂಡ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ₹10,000 ಸೇರಿ ಒಟ್ಟು ₹2,24,100ರನ್ನು ಶೇ.8 ರಂತೆ ಬಡ್ಡಿ ಜತೆಗೆ ನೀಡುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಆದೇಶಿಸಲಾಗಿದೆ.

[wp-rss-aggregator limit=”3″]

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ