NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವಜಾಗೊಂಡ ನೌಕರರ ಮರು ನೇಮಕಕ್ಕೆ ಮೂರು ಷರತ್ತುಗಳು ಅನ್ವಯ – ಇಂದು ನಿಗಮದಿಂದ ಜಂಟಿ ಮೆಮೋ ಬಿಡುಗಡೆ

ಜಂಟಿ ಮೆಮೋ ಪಡೆದ ನೌಕರರ ಸಂಘದ ಪದಾಧಿಕಾರಿಗಳು.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 2021ರ ಏಪ್ರಿಲ್‌ 7 ರಿಂದ 21ರವರೆಗೆ ಸಂಸ್ಥೆಯ ವಿರುದ್ಧ ನೌಕರರು ಕೈಗೊಂಡ ಮುಷ್ಕರದ ವೇಳೆ ಸೇವೆಯಿಂದ ವಜಾಗೊಂಡಿರುವ ಉಳಿದ ನೌಕರರನ್ನು ಮತ್ತೆ ಲೋಕಾದಲತ್‌ ಮೂಲಕ ಮರು ನೇಮಕ ಮಾಡಿಕೊಳ್ಳಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಇಂದು (ಜ.5)  ಈ ಹಿಂದೆ ಇದ್ದ ಷರತ್ತುಗಳಲ್ಲಿ ಕೆಲವು ಮಾರ್ಪಾಡು ಮಾಡಿ ಜಂಟಿ ಮೆಮೋವನ್ನು ಬಿಡುಗಡೆ ಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

1) ವಜಾಗೊಂಡಿರುವ ನೌಕರರ ಮರು ನೇಮಕ ಮಾಡಿಕೊಳ್ಳಲಾಗುವುದು. ಮರು ನೇಮಕಗೊಂಡ ನೌಕರರು ನಿರಂತರ ಸೇವೆಗೆ ಅರ್ಹರಿರುತ್ತಾರೆ. ಆದರೆ ಈ ಹಿಂದಿನ ಅಂದರೆ ವಜಾಗೊಂಡಿರುವ ಅವಧಿಯಲ್ಲಿ ಮಧ್ಯಂತರ ಪರಿಹಾರ ಸೇರಿದಂತೆ ವಜಾಗೊಂಡ ದಿನಾಂಕದಿಂದ ಮರು ನೇಮಕಗೊಳ್ಳುವ ದಿನಾಂಕದವರೆಗೆ ಯಾವುದೇ ಹಿಂಬಾಕಿ ವೇತನ, ತತ್ಪಲಿತ ಸೇವಾ ಸೌಲಭ್ಯ ರಹಿತವಾಗಿ ಮರು ನೇಮಕ ಮಾಡಿಕೊಳ್ಳಲಾಗುವುದು.

2)ಮೂರು ವರ್ಷಗಳ ಅವಧಿಗೆ ಸಂಚಿತ ಪರಿಣಾಮವಿಲ್ಲದೆ ಒಂದು ವಾರ್ಷಿಕ ವೇತನ ಹೆಚ್ಚಳವನ್ನು ಮುಂದೂಡಲು ಒಪ್ಪಿಕೊಂಡಿದ್ದಾರೆ.

3) ಮುಂದೆ ಯಾವುದೇ ಮುಷ್ಕರದಲ್ಲಿ ಭಾಗವಹಿಸುವುದಿಲ್ಲ. ಇತರರನ್ನು ಪ್ರಚೋದಿಸುವುದಿಲ್ಲ ಹಾಗೂ ಮುಷ್ಕರದ ಅವಧಿಯಲ್ಲಿ ಗೈರು ಹಾಜರಿಯಾಗುವುದಿಲ್ಲ ಎಂದು ನೌಕರರು ಮುಚ್ಚಳಕೆ ಸಲ್ಲಸುವುದು ಇಂದು ಬಿಡುಗಡೆ ಮಾಡಿರುವ ಜಂಟಿ ಮೆಮೋದಲ್ಲಿ ಇರುವ ಷರತ್ತುಗಳು.

ಈ ಮೂರು ಷರತ್ತುಗಳನ್ನು ಒಪ್ಪಿಕೊಂಡು ವಜಾಗೊಂಡ ನೌಕರರು ಜಂಟಿ ಮೆಮೋಗೆ ಸಹಿ ಮಾಡುವ ಮೂಲಕ ಮತ್ತೆ ಕರ್ತವ್ಯಕ್ಕೆ ಹಾಜರಾಗಬಹುದಾಗಿ. ಈ ಸಂಬಂಧ ಈ ಹಿಂದೆ ಜಂಟಿ ಮೆಮೋ ಒಪ್ಪದೆ ಮರು ನೇಮಕದಿಂದ ಹಿಂದೆ ಸರಿದಿರುವ ಸುಮಾರು 482 ಮಂದಿ ನೌಕರರು ಇಂದು ಹೊಸದಾಗಿ ಬಿಡುಗಡೆ ಮಾಡಿರುವ ಜಂಟಿ ಮೆಮೋ ಒಪ್ಪಿಕೊಂಡರೆ ನಾಳೆಯಿಂದಲೇ ಡ್ಯೂಟಿಗೆ ಹೋಗಬಹುದಾಗಿದೆಯಂತೆ.

ಮರು ನೇಮಕಗೊಂಡ ಕಾಯಂ ನೌಕರರು ಮುಂಬಡ್ತಿಗೆ ಅರ್ಹರು – ಜಂಟಿ ಮೆಮೋದಲ್ಲಿ ವಿಧಿಸಿದ್ದ ಷರತ್ತು ಹಿಂಪಡೆದ BMTC

 

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ