NEWSನಮ್ಮಜಿಲ್ಲೆನಮ್ಮರಾಜ್ಯ

ಬೇಜವಾಬ್ದಾರಿಯಿಂದ ವರ್ತಿಸುವ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕ – ಉಡಾಫೆ ವರ್ತನೆ : ಪ್ರಯಾಣಿಕ ಲೋಕೇಶ್‌ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜತೆಗೆ ಒಡಂಬಡಿಕೆ ಮಾಡಿಕೊಂಡು ಸಂಚರಿಸುತ್ತಿರುವ ಎಲೆಕ್ಟ್ರಿಕ್‌ ಬಸ್‌ನ ಚಾಲಕರು ಮತ್ತು ಬಿಎಂಟಿಸಿ ಬಸ್‌ ಚಾಲಕರ ನಡುವೆ ಒಂದಿಲ್ಲೊಂದು ಕಾರಣಕ್ಕೆ ತಿಕ್ಕಾಟ ನಡೆಯುತ್ತಲೇ ಇದೆ. ಇದರ ನಡುವೆ ಎಲೆಕ್ಟ್ರಿಕ್‌ ಬಸ್‌ ಚಾಲಕರು ಪ್ರಯಾಣಿಕರೆ ಭಯಪಡುವ ರೀತಿಯಲ್ಲಿ ಬಸ್‌ ಚಾಲನೆ ಮಾಡುತ್ತಿದ್ದಾರೆ ಎಂಬ ಆರೋಪ ಪ್ರಯಾಣಿಕರಿಂದಲೇ ಕೇಳಿ ಬರುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಕಳೆದ ಜ.6ರಂದು ಬೆಳಗ್ಗೆ 9.30 ಸುಮಾರಿಗೆ ಎಲೆಕ್ಟ್ರಿಕ್‌ ಬಸ್‌ ಚಾಲಕ (ವಾಹನ ಸಂಖ್ಯೆ KA51 AH 4150) ಅರಬಿಕ್‌ ಕಾಲೇಜು ಬಳಿ ನಿಲ್ದಾಣದಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಸೈಡ್‌ ಹೊಡೆಯುವುದಕ್ಕೆ ಅತಿ ವೇಗವಾಗಿ ಮತ್ತು ಅಜಾಗೂರು ಕತೆಯಿಂದ ಚಾಲನೆ ಮಾಡಿದ್ದಾನೆ ಎಂದು ಆ ಬಸ್‌ನಲ್ಲೇ ಇದ್ದ ಪ್ರಯಾಣಿಕ ಲೋಕೇಶ್‌ ಎಂಬುವರು ತಿಳಿಸಿದ್ದಾರೆ.

ಅಲ್ಲದೆ ಎಲೆಕ್ಟ್ರಿಕ್‌ ಬಸ್‌ ಸಿಬ್ಬಂದಿ ಪ್ರಯಾಣಿಕರೊಂದಿಗೆ ಏಕ ವಚಲ ಪ್ರಯೋಗ ಮಾಡುತ್ತಾರೆ. ನಾನು ಬಸ್‌ ಓಡಿಸೋದೆ ಹೀಗೆ ನಿನಗೆ ಕಷ್ಟವಾದರೆ ಇಳಿದು ಹೋಗು ಎಂದು ನಮಗೆ ಗದರಿಸುತ್ತಾರೆ ಎಂದು ವಿಜಯಪಥಕ್ಕೆ ತಿಳಿಸಿದ್ದಾರೆ.

ಜನವರಿ 6ರಂದು ನಾನು ಪ್ರಯಾಣಿಕನಾಗಿ ಪ್ರಯಾಣಿಸುತ್ತಿದ್ದಾಗ ಇದೇ ವಾಹನದ ಚಾಲಕರು ಅರಬಿಕ್‌ ಕಾಲೇಜು ಬಳಿ ಅತಿ ವೇಗವಾಗಿ ಮತ್ತು ಅಜಾಗೂರು ಕತೆಯಿಂದ ಚಾಲನೆ ಮಾಡಿ ಪ್ರಯಾಣಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಬೇಜವಾಬ್ದಾರಿಯಿಂದ ಚಲಾಯಿಸಿದರು ಮತ್ತು ಇದು ಮೊದಲ ಬಾರಿಯಲ್ಲ ಹಲವು ಬಾರಿ ಈ ಚಾಲಕರು ಈ ರೀತಿ ನಡೆದುಕೊಂಡಿದ್ದಾರೆ.

ನಾವು ಸೇರಿದಂತೆ ಇತರ ಪ್ರಯಾಣಿಕರು ಚಾಲಕನನ್ನು ಪ್ರಶ್ನಿಸಿದಾಗ ಉಡಾಫೆ ಮಾತುಗಳನ್ನು ಆಡಿದರು. ಇವರು ಮಾಡುವ ತಪ್ಪುಗಳಿಂದ ಪ್ರಯಾಣಿಕರ ಪ್ರಾಣಗಳ ಜತೆ ಈ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರು ಆಟವಾಡುತ್ತಿದ್ದಾರೆ ಮತ್ತು ಪ್ರಯಾಣಿಕರ ಹಿತರಕ್ಷಣೆಯನ್ನು ಕಾಪಾಡುವಂತಹ ಬಿಎಂಟಿಸಿಯ ಸಂಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ.

ಹೀಗಾಗಿ ಇವರ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಈರೀತಿ  ಬೇಜವಾಬ್ದಾರಿ ವರ್ತನೆಯಿಂದ ನೌಕರರನ್ನು ವರ್ತಿಸದಂತೆ ತಿಳಿವಳಿಕ ನೀಡಬೇಕು ಎಂದು  ನೊಂದ ಪ್ರಯಾಣಿಕನಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು?