NEWSಕ್ರೀಡೆದೇಶ-ವಿದೇಶ

ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದ ಉಮ್ರಾನ್ ಮಲಿಕ್

ವಿಜಯಪಥ ಸಮಗ್ರ ಸುದ್ದಿ

ಗುವಾಹಟಿ: ಜಮ್ಮು-ಕಾಶ್ಮೀರ ಮೂಲದ ಬೌಲರ್ ಉಮ್ರಾನ್ ಮಲಿಕ್ ತನ್ನ ವೇಗದ ಬೌಲಿಂಗ್ ಮೂಲಕ ಐಪಿಎಲ್‍ನಲ್ಲಿ (IPL) ಮಿಂಚಿ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಆಟಗಾರ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾ ವೇಗಿ ಎಂದೆ ಕರೆಸಿಕೊಳ್ಳುವ ಉಮ್ರಾನ್ ಮಲಿಕ್ ಮಂಗಳವಾರ ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಗಂಟೆಗೆ 156 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಭಾರತ ವೇಗದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ 14ನೇ ಓವರ್ ಎಸೆಯಲು ಬಂದ ಉಮ್ರಾನ್ ಮಲಿಕ್ ತನ್ನ ಸರದಿಯ ಎರಡನೇ ಓವರ್‌ನಲ್ಲಿ 156 ಕಿ.ಮೀ ವೇಗದ ಎಸೆತ ದಾಖಲಿಸಿದ್ದಾರೆ.

ಈ ಹಿಂದೆ ಗಂಟೆಗೆ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದ ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲರ್ ಎಂಬ ದಾಖಲೆಯನ್ನು ಮಾಡಿದ್ದರು. ಇದೀಗ ಉಮ್ರಾನ್ ಮಲಿಕ್ ಆ ದಾಖಲೆಯನ್ನು ಪುಡಿಗಟ್ಟಿ ತಮ್ಮ ಹೆಸರಿನ ಹಿಂದೆ ನೂತನ ದಾಖಲೆ ಬರೆದು ಕ್ರಿಕೆಟ್‌ ಪ್ರೇಮೆಗಳ ಮನದಲ್ಲಿ ಹಚ್ಚಳಿಯದೆ ಉಳಿದಿದ್ದಾರೆ.

ಟೀಂ ಇಂಡಿಯಾ ವೇಗಿಗಳ ಪೈಕಿ ಮೊಹಮ್ಮದ್ ಶಮಿ ಅತಿ ವೇಗದ ಬೌಲಿಂಗ್‍ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶಮಿ ಗಂಟೆಗೆ 153.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ನವದೀಪ್ ಸೈನಿ ಗಂಟೆಗೆ 152.85 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ವೇಗದ ಬೌಲರ್‌ಗಳ ದಾಖಲೆಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧ ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್ ಮಿಂಚಿದರೆ, ಬೌಲಿಂಗ್‍ನಲ್ಲಿ ಉಮ್ರಾನ್ ಮಲಿಕ್, ಸಿರಾಜ್ ಭರ್ಜರಿ ಆಟ ಪ್ರದರ್ಶಿಸಿದರು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಪಂದ್ಯದಲ್ಲಿ ವೇಗದ ಎಸೆತದ ದಾಖಲೆಯೊಂದಿಗೆ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದು ಭಾರತದ 67 ರನ್‍ಗಳ ದೊಡ್ಡ ಮೊತ್ತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್