ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ಆಗ್ರಹ- ಮಾ.5ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಆಗಲೇಬೇಕು ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಹಾಗೂ ಕರ್ನಾಟಕದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ರೈತ ಮುಖಂಡರು ಭಾಗವಹಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಹೀಗಾಗಿ ವರ್ಷದಿಂದಲೂ ದೆಹಲಿಯಲ್ಲಿ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ ಎಂದು ರೈತ ಮುಖಂಡರು ಹೇಳಿದರು.
ಇನ್ನು ಕಳೆದ ವರ್ಷ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಘೋಯಲ್ ನೇತೃತ್ವದಲ್ಲಿ ಐದು ಸಭೆಗಳು ನಡೆದಿದ್ದು, ಯಾವುದೇ ಫಲಶೃತಿ ಕಂಡು ಬಂದಿಲ್ಲ. ರೈತ ಚಳವಳಿಗೆ ಒಂದು ವರ್ಷ ತುಂಬಿದ ನಂತರ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ 2 ಸಭೆಗಳನ್ನು ನಡೆಸಿದ್ದಾರೆ. 3ನೇ ಸಭೆಯು ಮಾರ್ಚ್ 19ಕ್ಕೆ ನಿಗದಿಯಾಗಿದೆ ಕೇಂದ್ರ ಸರ್ಕಾರ ಕೇವಲ ಸಭೆಗಳನ್ನು ನಡೆಸಿ ವಿಳಂಬ ಧೋರಣೆ ತೋರುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದ ವಿಳಂಬ ನೀತಿ ಖಂಡಿಸಿ ಈಗಾಗಲೇ ನಿನ್ನೆ ರಾತ್ರಿ ನಡೆದ ಗೂಗಲ್ ಮೀಟ್ ಸಭೆಯಲ್ಲಿ ತೀರ್ಮಾನಿಸಿದಂತೆ ಇದೆ ಮಾ.5 ರಂದು ಜಗಜಿತ್ ಸಿಂಗ್ ದಲೈವಾಲ ಅವರ ಉಪವಾಸ ಸತ್ಯಾಗ್ರಹ 100 ದಿನ ಪೂರೈಸಲಿದ್ದು ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆ ವತಿಯಿಂದ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯ ಪತ್ರ ಸಲ್ಲಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ದಕ್ಷಿಣ ಭಾರತದ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ರೈತ ಸಂಘಗಳ ಒಕ್ಕೂಟದ ಮುಖಂಡರು ಈ ಬಗ್ಗೆ ಬೇಸರ ವ್ಯಕ್ತಪಡಿಸಿ ಖಂಡನೆ ಮಾಡಿದರು. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರಿದಲ್ಲಿ ಎಲ್ಲ ರಾಜ್ಯಗಳಿಂದ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ದೆಹಲಿ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮುಖಂಡ ಹಾಗೂ ತಮಿಳುನಾಡು ವ್ಯವಸಾಯ ಸಂಘಂದ ಅಧ್ಯಕ್ಷ ರಾಮನ ಗೌಂಡರ್ ಎಚ್ಚರಿಕೆ ನೀಡಿದರು.
ಕಳೆದ ವರ್ಷ ಫೆ.12ರಲ್ಲಿ ದೆಹಲಿಯ ರೈತ ಹೋರಾಟದಲ್ಲಿ ಭಾಗವಹಿಸಲು ಕರ್ನಾಟಕದಿಂದ ಹೋಗುತ್ತಿದ್ದ 70 ರೈತ ಹಾಗೂ ರೈತ ಮಹಿಳೆಯರ ತಂಡವನ್ನು ಮಧ್ಯಪ್ರದೇಶದ ಭೂಪಾಲ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದರು. ಪೊಲೀಸರು ಬಂಧಿಸುವ ಸಂದರ್ಭದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮ ಶಾಂತಕುಮಾರ್ ಅವರು ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ರೈತರ ತಂಡವನ್ನು ವಾಪಸ್ ಕಳುಹಿಸಿದರು.
ಪೊಲೀಸರ ಈ ರೀತಿಯ ವರ್ತನೆ ಸರಿಯಾದ ಕ್ರಮವಲ್ಲ. ರೈತರು ದೇಶದ ಅನ್ನದಾತರು ದೇಶದ ರೈತರ ಹಿತಾಸಕ್ತಿಗಾಗಿ ಹೋರಾಟ ನಡೆಸುತ್ತಿರುವುದು ಎಂದು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಉತ್ತರ ಭಾರತಕ್ಕೆ ಜಗಜಿತ್ ಸಿಂಗ್ ದಲೈವಾಲಾ, ದಕ್ಷಿಣ ಭಾರತಕ್ಕೆ ಕುರುಬೂರು ಶಾಂತಕುಮಾರ್ ದೇಶದ ರೈತರ ಎರಡು ಕಣ್ಣುಗಳಿದ್ದಂತೆ. ಫೆ.14, 2025 ರಂದು ಕೇಂದ್ರ ಸರ್ಕಾರ ಚಂಡಿಗಢದಲ್ಲಿ ಕರೆದಿದ್ದ ಸಭೆಗೆ ಹೋಗುತ್ತಿದ್ದಾಗ ಶಾಂತಕುಮಾರ್ ಅವರು ಹೋಗುತ್ತಿದ್ದ ಕಾರ್ ಚಂಡಿಗಢದ ಪಟಿಯಾಲ ಬಳಿ ಅಪಘಾತಕ್ಕೀಡಾಗಿ ಸುದೈವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮ ಶಾಂತಕುಮಾರ್ ಅವರು ಸಹ ಹೋರಾಟ ಮಾಡುತ್ತಿರುವುದು ದೇಶದ ರೈತರ ಹಿತಕ್ಕಾಗಿ. ಎಂಎಸ್ಪಿ ಗ್ಯಾರಂಟಿ ಖಾತ್ರಿ ಕಾನೂನು ಜಾರಿಗೆಯಾಗಲಿ. ರೈತರ ಸಾಲ ಮನ್ನಾ ಆಗಲಿ, ಸ್ವಾಮಿನಾಥನ್ ವರದಿ ಜಾರಿಯಾಗಲಿ ಹಾಗೂ 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಯಾಗಲಿ ಎಂಬುದು ದೇಶದ ರೈತರ ಒಗ್ಗಟ್ಟಿನ ಹೋರಾಟ ಎಂಬುದನ್ನು ಕೇಂದ್ರ ಸರ್ಕಾರ ಅರಿಯಲಿ. ಈ ಎಲ್ಲ ಯೋಜನೆಗಳು ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಮಾರ್ಚ್ 19 ರಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಮೂರನೇ ಸಭೆ ಏರ್ಪಡಾಗಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನ ಆಗಲೇಬೇಕು. ಈಗಾಗಲೇ ಜಗಜಿತ್ ಸಿಂಗ್ ದಲೈವಾಲಾ ರವರ ಉಪವಾಸ ಸತ್ಯಾಗ್ರಹವು 98 ದಿನಗಳು ಮುಗಿದಿವೆ. ಅವರ ಪ್ರಾಣಕ್ಕೆ ಅಪಾಯವಾದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ನಾವು ಮಾರ್ಚ್ 19 ರ ಸಭೆಯ ನಿರ್ಧಾರಗಳನ್ನು ಕಾದು ನೋಡುತ್ತೇವೆ. ಆದರೆ ಕೇಂದ್ರ ಸರ್ಕಾರ ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನಾವು ದಕ್ಷಿಣ ಭಾರತ ರೈತರಗಳು ಸಹಸ್ರಾರು ಸಂಖ್ಯೆಯಲ್ಲಿ ದೆಹಲಿಯನ್ನು ಮುತ್ತಿಗೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ.
ಪತ್ರಿಕಾಗೋಷ್ಠಿಯಲ್ಲಿ ರಾಮನ್ ಗೌಂಡರ್ ಹಾಗೂ ತಮಿಳುನಾಡಿನ ಮುಖಂಡ ಎ.ಎಸ್.ಬಾಬು, ಭಾನುಮತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರಾದ ರಾಜ್ಯ ಉಪಾಧ್ಯಕ್ಷ ಬೆಳಗಾವಿಯ ಸುರೇಶ್ ಮಾ.ಪಾಟೀಲ್, ಕಲಬುರ್ಗಿ ಬಸವರಾಜ್ ಪಾಟೀಲ್, ಗದಗ ಜಿಲ್ಲಾಧ್ಯಕ್ಷ ರವಿಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಆತ್ತಹಳ್ಳಿ ದೇವರಾಜ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಶ್ರೀನಿವಾಸಲು,ತಮಿಳು ನಾಡಿನ ಷಣ್ಮುಖ ಸುಂದರಂ, ಯಾದಗಿರಿಯ ಕೊಟ್ರೇಶ್ ಚೌದ್ರಿ ಬೈರಾರೆಡ್ಡಿ ಮುಂತಾದವರಿದ್ದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...