NEWSನಮ್ಮರಾಜ್ಯರಾಜಕೀಯ

ಮಾಜಿ ಮುಖ್ಯಮಂತ್ರಿ ಸಿದ್ದು ಒಂದೇಕಡೆ ನಿಂತರ ಚುನಾವಣೆಯಲ್ಲಿ ಗೆಲ್ಲೋದು ಕಷ್ಟ : ಭವಿಷ್ಯ ನುಡಿದ ಮನೆ ದೇವತೆ ಚಿಕ್ಕತಾಯಮ್ಮ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಲ್ಲಿ ನಿಂತರೆ ಗೆಲುವು ಸಾಧಿಸಲಿದ್ದಾರೆ ಎಂದು ಮನೆದೇವರ ಮೊರೆ ಹೋಗಿದ್ದು ಅವರ ಮನೆದೇವರು ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಆಶೀರ್ವಾದ ಮಾಡಿದೆಯಂತೆ.

ಹೌದು! ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ತವರು ಕ್ಷೇತ್ರ ವರುಣಾದಲ್ಲೋ ಅಥವಾ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೇ ಎಂಬ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಗೊಂದಲದಲ್ಲಿ ಇದ್ದಂತೆ ಕಾಣುತ್ತಿದ್ದು, ಇದೇ ವೇಳೆಗೆ ಸಿದ್ದು ರಾಜಕೀಯ ಭವಿಷ್ಯವನ್ನು ಮನೆ ದೇವರು ನಿರ್ಧರಿಸಿದೆಯಂತೆ.

ಸಿದ್ದರಾಮಯ್ಯ ಒಂದೇ ಕಡೆ ನಿಂತರೆ ಬಲವಿಲ್ಲ. ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ಆದಿನಾಡು ಚಿಕ್ಕತಾಯಮ್ಮ ದೇವಿ ಭವಿಷ್ಯ ನುಡಿದ್ದಾಳೆ. ಈ ದೇವರು ಸಿದ್ದರಾಮಯ್ಯ ಕುಟುಂಬದ ಮೂಲ ಮನೆ ದೇವತೆ.

ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ. ಒಂದು ಕಡೆ ಬಾಹುಬಲ‌ ಚಾಚಿದರೆ ಆಗಲ್ಲ. ಅರ್ಥ ಆಯ್ತೇನಪ್ಪ. ಬಾಹುಬಲ ಎರಡು ಕಡೆ ಚಾಚಬೇಕು. ಒಂದು ಕಡೆ ಚಾಚಿದರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ. ಎರಡು ಕಡೆ ಚಾಚಿದರೆ ನಾನು ಗೆಲ್ಲಿಸಿಕೊಂಡು ಬರ್ತೀನಿ ಎಂದು ದೇವರು ಭರವಸೆ ನೀಡಿದೆ.

ನಾನು ನಿಮ್ಮ ಮನೆ ದೇವತೆ ಗೊತ್ತಾ? ನಾನು ಮೂಲದೇವರು. ಬೇಕಾದ್ರೆ ಅವಕಾಶ ಸಿಕ್ಕಿದರೆ ಯಾವಾಗಾದರೂ ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು ಎಂದು ದೇವಾಲಯದ ಅರ್ಚಕ ಡಾ. ಲಿಂಗಣ್ಣ ಮೈ ಮೇಲೆ ಬಂದ ಶಕ್ತಿ ದೇವತೆ ಹೇಳಿದೆ. ಸಿದ್ದು ಪುತ್ರ ಡಾ.ಯತೀಂದ್ರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸುವ ವೇಳೆ ದೇವರು ಈ ಸೂಚನೆ ಕೊಟ್ಟಿದೆ.

ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಜತೆ ದೇವಾಲಯಕ್ಕೆ ಯತೀಂದ್ರ ಭೇಟಿ ನೀಡಿದರು. ದೇವರು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಮೂಲ ಮನೆ ದೇವರ ಸೂಚನೆಯಂತೆ ಎರಡು‌ ಕ್ಷೇತ್ರದಲ್ಲಿ ನಿಲ್ಲುವರಾ ಸಿದ್ದರಾಮಯ್ಯ? ದೇವಾಲಯಕ್ಕೆ ಭೇಟಿನೀಡಿ ಪೂಜೆ ಸಲ್ಲಿಸುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಕಾರಣ ಸಿದ್ದರಾಮಯ್ಯ ಅವರು ಹೆಚ್ಚಾಗಿ ದೇವರನ್ನು ನಂಬುವುದಿಲ್ಲ. ಹೀಗಾಗಿ ಅವರ ನಡೆ ಏನು ಎಂಬುವುದರ ಬಗ್ಗೆ ಕಾದು ನೋಡಬೇಕಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...