NEWSನಮ್ಮರಾಜ್ಯರಾಜಕೀಯ

ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ 35 ಕ್ಷೇತ್ರ ಗೆಲ್ಲುವ ಸಂಕಲ್ಪ : ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ ಕನಿಷ್ಠ 35 ಸ್ಥಾನಗಳಲ್ಲಿ ಜಯ ಗಳಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ. ಜೆಡಿಎಸ್‌ ಬರೀ ಮಂಡ್ಯ, ಹಾಸನಕ್ಕೆ ಸೀಮಿತ ಅನ್ನುವವರಿಗೆ ನಾವು ಈ ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಗತಿ ಎಲ್ಲಿದೆ ? ಜನರನ್ನು ಭಾವನೆಗಳ ಮೂಲಕ ಕೆರಳಿಸುವವವರಿಂದ ಪ್ರಗತಿ ಸಾಧ್ಯವಿಲ್ಲವೆಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು ನಿನ್ನೆ ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಕಾರ್ಯಕ್ರಮ ಮಾಡಿ, ಅವರ ಭಾವಚಿತ್ರವನ್ನೇ ಬಳಸಿಲ್ಲ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇಂಥವರಿಂದ ನಾಡಿನ ಜನರ ಏಳಿಗೆ ಸಾಧ್ಯವೆ ಎಂದು ಕಿಡಿಕಾರಿದರು.

ಇನ್ನು ಈ ಭಾಗದ ಶಾಸಕರು ತಾವು ಸಿಎಂ ಆಗಿದ್ದಾಗ ಬಂದು ಹೆಸರು ಬದಲಾವಣೆಗೆ ಆಗ್ರಹಿಸಿದ್ದನ್ನು ಮೆಲುಕು ಹಾಕಿದ ಅವರು, ಪ್ರಗತಿಯಾಗದ ಹೊರತು ಹೆಸರು ಬದಲಾವಣೆಯೊಂದೇ ಬೇಡವೆಂದು ಹೇಳಿದ್ದೆ. ಬಿಜೆಪಿಯವರು ಹೆಸರಷ್ಟೇ ಬದಲಾವಣೆ ಮಾಡಿದ್ದಾರೆ. ಜನ ಇಂತಹದ್ದಕ್ಕೆಲ್ಲ ಮರುಳಾಗಬಾರದು ಎಂದರು.

ಜ. 17 ರಿಂದ ಪಂಚರತ್ನ 3ನೇ ಹಂತ: ವಿಜಯಪುರ, ರಾಯಚೂರು ಕೊಪ್ಪಳ ಜಿಲ್ಲೆಗಳಲ್ಲೂ ಪಂಚರತ್ನ ರಥಯಾತ್ರೆ ನಡೆಸಲಾಗುತ್ತದೆ. ಸಂಕ್ರಾಂತಿ ನಂತರದ ಜ.17ರಿಂದ ಸಿಂದಗಿಯಿಂದಲೇ ಕಥಯಾತ್ರೆ 3ನೇ ಹಂತ ಶುರುವಾಗಲಿದೆ, ಮಾರ್ಚ್‌ 20ರವರೆಗೆ ನಿರಂತರವಾಗಿ ರಥಯಾತ್ರೆ ನಡೆಯಲಿದೆ. ರಾಜ್ಯಕ್ಕೆ ಜೆಡಿಎಸ್‌ ಅನಿವಾರ್ಯ ಅನ್ನೋದು ರಥಯಾತ್ರೆಯಿಂದ ಗೊತ್ತಾಗಿದೆ.

ಹೆಚ್ಡಿಕೆ ಅಧಿಕಾರಕ್ಕೆ ಬಂದರೆ ನಮ್ಮ ಸಮಸ್ಯೆ ಬಗೆಹರಿಯುತ್ತೆ, ಕುಮಾರಸ್ವಾಮಿ ಸಿಎಂ ಆಗಬೇಕೆಂಬ ಭಾವನೆ ವ್ಯಕ್ತವಾಗ್ತಿದೆ, ಕಲ್ಯಾಣ ಕರ್ನಾಟಕ ಹೆಸರಿಟ್ಟಮಾತ್ರಕ್ಕೆ ಅಭಿವೃದ್ಧಿ ಆಗಲ್ಲ. ಇಲ್ಲಿನ ರಸ್ತೆಗಳ ಸ್ಥಿತಿ ನೋಡಿದ್ರೆ ದೇವರೇ ಕಾಪಾಡಬೇಕು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನೀಡುವ ಹಣ ಎಲ್ಲಿಗೆ ಹೋಗುತ್ತೆ? ಶೌಚಾಲಯ ಇಲ್ಲದೇ ಮಹಿಳೆಯರು ತಮ್ಮ ಅಳಲು ತೋಡಿಕೊಳ್ತಿದ್ದಾರೆ. ಒಂದು ಕಡೆ ಸ್ವಚ್ಛ ಭಾರತ್‌ ಅಂತಾರೆ, ಎಲ್ಲಿದೆ ಸ್ವಚ್ಛ ಭಾರತ್‌ ಎಂದು ಪ್ರಶ್ನಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...