ಬೆಂಗಳೂರು: ವಿಶ್ವ ಪಾರಂಪರಿಕ ಲಾಲ್ಬಾಗ್ ಹೂತೋಟದಲ್ಲಿ ಇದೇ ಮಾ.2ರಂದು ಬೆಳಗ್ಗೆ 8 ಗಂಟೆಗೆ 86ನೇ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆ ಆಯೋಜಿಸಲಾಗಿದೆ ಎಂದುKSRTC & BMTC ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಫೆಬ್ರವರಿ 27 ರಂದು ನಗರದ ರಿಚ್ಮಂಡ್ ವೃತ್ತದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ನಿವೃತ್ತರು ನಡೆಸಿದ ಪ್ರತಿಭಟನಾ ಸಭೆ ಹಾಗೂ ಮನವಿ ಸಲ್ಲಿಸುವ ಕಾರ್ಯ ಅಭೂತಪೂರ್ವವಾಗಿತ್ತು.
ಫೆ. 28 ರಂದು ದೆಹಲಿಯಲ್ಲಿ ಉದ್ಯೋಗ ಮತ್ತು ಕಾರ್ಮಿಕ ಖಾತೆ (minister for labour & employment) ಸಚಿವರಾ ಮುನ್ಸೂಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ, 237ನೇ ಸಿಬಿಟಿ ಸಭೆ ಇಪಿಎಸ್ ನಿವೃತ್ತರ ಪಾಲಿಗೆ ಅತ್ಯಂತ ನಿರಾಶಾದಾಯಕವಾಗಿತ್ತು.
ಸಭೆಯಲ್ಲಿ ಇಪಿಎಸ್ ನಿವೃತ್ತರ ಕನಿಷ್ಠ ಪಿಂಚಣಿ (₹ 7500/- + ಭತ್ಯೆ, ವೈದ್ಯಕೀಯ ಸೌಲಭ್ಯ) ಅಥವಾ ಅಧಿಕ ಪಿಂಚಣಿಯ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲದೆ ಇರುವುದನ್ನು ಕಂಡು, ನಿವೃತ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು 2ನೇ ಅಂತದ ಬಜೆಟ್ ಅಧಿವೇಶನದ ಅವಧಿ ಮಾರ್ಚ್ 10 ರಿಂದ ಪ್ರಾರಂಭವಾಗಿ ಏಪ್ರಿಲ್ 04ಕ್ಕೆ ಮುಕ್ತಾಯವಾಗಲಿದ್ದು, ಈ ಅಧಿವೇಶನದಲ್ಲಿ ನಮ್ಮ ಬೇಡಿಕೆಗಳು ಈಡೇರದೆ ಹೋದಲ್ಲಿ ಮುಂದೆ ನಮ್ಮ ಹೋರಾಟದ ದಿಕ್ಕನ್ನೇ ಬದಲಾಯಿಸಿ ಕೊಳ್ಳಬೇಕಾಗುತ್ತದೆ. ಏನೇ ಆಗಲಿ? ನಾವೆಲ್ಲರೂ ಹಿರಿಯ ನಾಗರಿಕರಾಗಿದ್ದು, ವಿವೇಚನೆಯಿಂದ ನಮ್ಮ ಮುಂದಿನ ಹೋರಾಟದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ.
ಜತೆಗೆ “ನಮಗೆ ಕಾಯುವ ಸಹನೆ ಇದ್ದರೆ, ಬಯಸಿದ್ದೆಲ್ಲ ಪಡೆಯುವ ಅವಕಾಶ ಇದ್ದೇ ಇರುತ್ತದೆ. ಎಷ್ಟೋ ಸಲ ನಾವು ಬಯಸಿದ್ದು, ಸಿಗದೇ ಇರಲು ನಮ್ಮ ಅವಸರವೇ ಕಾರಣವಾಗಬಹುದು” ಎಂದು ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಇಪಿಎಫ್ಒ ಅಧಿಕಾರಿಗಳು ಹೊರಡಿಸಿರುವ ಹಲವಾರು ಸುತ್ತೋಲೆಗಳು ದೋಷ ಪೂರ್ಣವಾಗಿದ್ದು, ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ಇವುಗಳನ್ನು ಸಮರ್ಥಿಸಿಕೊಳ್ಳಲು ಅಧಿಕಾರಿಗಳು ಹಲವಾರು ಹಿಂಬರಹಗಳನ್ನು ನೀಡಿದ್ದಾರೆ. ಆರ್ಟಿಐನಲ್ಲಿ ಇವರು ನೀಡಿರುವ ಸಮಜಾಯಿಷಿ, ಇವೆಲ್ಲವನ್ನೂ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತಿದೆ. ನ್ಯಾಯಾಲಯದ ತೀರ್ಪಿನ ಬಗ್ಗೆ ನಮಗೆ ಸಂಪೂರ್ಣ ನಂಬಿಕೆ ಹಾಗೂ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಎಲ್ಲದರ ನಡುವೆ ಮಾಸಿಕ ಸಭೆಗೆ ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ, ಕ್ಷೇಮಾಭಿವೃದ್ಧಿ ಟ್ರಸ್ಟ್ ಎಲ್ಲ ಪದಾಧಿಕಾರಿಗಳು/ ಸದಸ್ಯರು, ಎಚ್ಎಎಲ್, ಎಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ಸ್ ಇನ್ನು ಹಲವಾರು ಕಂಪನಿಗಳ ಇಪಿಎಸ್ ನಿವೃತ್ತರು ಭಾಗವಹಿಸಲಿದ್ದು, ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಚರ್ಚಿಸೋಣ. ಅದಕ್ಕಾಗಿ ಎಲ್ಲ ನಿವೃತ್ತ ನೌಕರರು ಭಾಗವಹಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.
Related

You Might Also Like
ಪತಿ ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೊರ್ಟ್
ಶಿವಮೊಗ್ಗ: ಪತಿಯನ್ನು ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೊಬ್ಬನಿಗೆ ಏಳುವರ್ಷ ಜೈಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಮಹತ್ವದ...
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...