NEWSನಮ್ಮಜಿಲ್ಲೆನಮ್ಮರಾಜ್ಯ

ಜ.29ರಂದು KSRTC ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಪುನರ್‌ ರಚನೆ  ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಪುನರ್‌ ರಚನೆ   ಸಭೆ ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಸೋಮಣ್ಣ ತಿಳಿಸಿದ್ದಾರೆ.

ಇದೇ ಜ.29ರಂದು ಬೆಳಗ್ಗೆ 9.30ಕ್ಕೆ ತುಮಕೂರಿನ ಎಂ.ಜಿ.ರಸ್ತೆಯಲ್ಲಿರುವ ಜಿಲ್ಲಾಬಾಲ ಭವನದಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ. ದೇವದಾಸ್‌ ಅವರ  ಅಧ್ಯಕ್ಷತೆಯಲ್ಲಿ  ರಾಜ್ಯ ಸಮಿತಿ ಸರ್ವ ಸದಸ್ಯರ ಸಭೆ ನಡೆಯಲಿದೆ.

ಸಂಘದ ಹಿರಿಯ ಸಲಹೆಗಾರರಾದ ಡಾ.ಆರ್‌. ಮೋಹನ್‌ ರಾಜ್‌, ಕಾರ್ಯಾಧ್ಯಕ್ಷ ಡಿ.ಸಿದ್ದರಾಜು, ಹಿರಿಯ ಉಪಾಧ್ಯಕ್ಷರಾದ ಎಸ್.ಆರ್.ಆದರ್‌ಗುಂಜಿ, ಶಿವಶಾಂತ್‌ ಎಂ. ಮುನ್ನಳ್ಳಿ, ಸಂಘದ ಹಿರಿಯರಾದ ಎಂ. ಮಲ್ಲಿಕಾರ್ಜುನ  ಮೂರ್ತಿ, ಶಿವಣ್ಣ ಚಿಕ್ಕಣ್ಣನವರ್, ಹಿರಿಯ ವಕೀಲರು, ಧಾರವಾಡ ಇವರು ಉಪಸ್ಥಿತರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಘದ ರಾಜ್ಯ ಕೇಂದ್ರ ಸಮಿತಿಯ ಬಹುಮತದ ತೀರ್ಮಾನದಂತೆ ಸಂಘದ ಕಾರ್ಯ ಚಟುವಟಕೆಗಳನ್ನು  ಸುಗಮವಾಗಿ ನಡೆಸುವ ಸಲುವಾಗಿ, ಮುಂದಿನ ಅವಧಿಗಾಗಿ  ರಾಜ್ಯ ಸಮಿತಿ ಪುನರ್‌ ರಚನೆ  ಸಭೆಯನ್ನು ಕರೆಯಲಾಗಿದೆ.

ಆದ್ದರಿಂದ KSRTC, BMTC, NWKRTC ಮತ್ತು KKRTC ರಾಜ್ಯ, ವಲಯ, ವಿಭಾಗೀಯ, ಘಟಕ ಸಮಿತಿಯ ಸಂಘದ ಎಲ್ಲ ಸರ್ವ ಸದಸ್ಯರು ತಪ್ಪದೇ ಸಕಾಲಕ್ಕೆ ಆಗಮಿಸಿ ರಾಜ್ಯ ಸಮಿತಿ ಪುನರ್‌ ರಚನೆ ಸಭೆಯ ಕಾರ್ಯ ಕಲಾಪಗಳನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...