ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ಅಧಿಕಾರಿಗಳು/ನೌಕರರಿಗೆ ಫೆಬ್ರವರಿ ತಿಂಗಳ ವೇತನ ಮಾ.1ನೇ ತಾರೀಖಿಗೆ ಕೊಡಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಫೆ.19ರಂದು ಆದೇಶ ಹೊರಡಿಸಿದ್ದರು.
ಆದರೆ, ಇಂದು ಸಂಜೆವರೆಗೂ ಕಾದು ನೋಡಿದ ನೌಕರರಿಗೆ ವೇತನ ಆಗಿಲ್ಲ. ಇದಕ್ಕೆ ಬಿಎಂಟಿಸಿ ಸಂಸ್ಥೆಯ ನೌಕರರಿಗೆ ವೇತನ ಹಾಕುತ್ತೇವೆ ಎಂದು ಕಲ್ಲರ್ ಕಲರ್ ಕಾಗೆ ಹಾರಿಸಿದ್ದಾರೆ… ಇಲ್ಲಿಯವರೆಗೆ ವೇತನ ಹಾಕಿಲ್ಲ… ಚಾತಕ ಪಕ್ಷಿಯಂತೆ ವೇತನಕ್ಕಾಗಿ ಕಾಯುತ್ತಿರುವ ಸಂಸ್ಥೆಯ ನೌಕರರು…
ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ನೌಕರರು ಹೇಳಿಕೆ ನೀಡುತ್ತಿದ್ದು, ಅಲ್ಲದೆ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಮಾಡಿದ ಆದೇಶವನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ಪಾಲಿಸಿದ್ದಾರೆ ನೋಡಿ. ಅದೇ ನಾವು ಇಂಥ ತಪ್ಪು ಮಾಡಿದರೆ ಕೂಡಲೇ ಅಮಾನತು ಮಾಡಿ ಬಳಿಕ ಕಾರಣ ಎಂದು ನಮ್ಮನ್ನು ಅಮಾನತು ಮಾಡಿ ಬಿಡುತ್ತಿದ್ದರು ಕಿಡಿಕಾರಿದ್ದಾರೆ.
ಇನ್ನು ವ್ಯವಸ್ಥಾಪಕ ನಿರ್ದೇಶಕರು ಅಷ್ಟೇ ಅಲ್ಲ ಸಂಸ್ಥೆಯ ಆರ್ಥಿಕ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಕೂಡ ಫೆ.24ರಂದು ಕೂಡಲೇ ರಜೆ ಮಂಜೂರು ಮಾಡಿಸಿಕೊಂಡು ವೇತನ ಬಿಲ್ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರು. ಆದರೆ ಎಂಡಿ ಆದೇಶ ಹಾಗೂ ಮುಖ್ಯ ಲೆಕ್ಕಾಧಿಕಾರಿಯ ಸೂಚನೆಯನ್ನು ಬದಿಗೆ ಸರಿಸಿದ ಅಧಿಕಾರಿಗಳು ವೇತನ ಬಿಲ್ ಸಿದ್ಧಪಡಿಸುವುದಕ್ಕೆ ವಿಳಂಬ ಮಾಡಿದ್ದಾರೆ.
ಈ ಪರಿಣಾಮ ಸಂಸ್ಥೆಯ ನೌಕರರಿಗೆ ಮಾ.1ರಂದು ಆಗಬೇಕಿದ್ದ ವೇತನ ಮೂರು ದಿನಗಳ ಕಾಲ ಮುಂದಕ್ಕೆ ಹೋಗಿದೆ. ಅಲ್ಲದೆ ಸಂಸ್ಥೆಯಲ್ಲಿ ಮೇಲಧಿಕಾರಿಗಳ ಆದೇಶಕ್ಕೂ ಕಿಮ್ಮತ್ತಿಲ್ಲ ಎಂಬುವುದಕ್ಕೆ ಇದೇ ಸಾಕ್ಷಿ ಎಂದು ನೌಕರರು ಆರೋಪಿಸಿದ್ದಾರೆ.
ಇನ್ನು ಎಂಡಿ ಅವರು ಫೆ.19ರಂದು ಆದೇಶ ಹೊರಡಿಸಿದ್ದರೂ ವೇತನ ಬಿಲ್ ಸಿದ್ಧ ಮಾಡಿಕೊಳ್ಳದೆ ವಿಳಂಬ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿದ್ದರೆ ಸಂಸ್ಥೆಯ ಮಾನ ಇಂದು ಹರಾಜಾಗುತ್ತಿರಲಿಲ್ಲ. ಜತೆಗೆ ಎಂಡಿ ಅವರಿಗೆ ಅವಮಾನವಾಗುತ್ತಿರಲಿಲ್ಲ ಎಂದು ನೌಕರರು ಹೇಳಿದ್ದಾರೆ.
ಅಲ್ಲದೆ ಸಂಸ್ಥೆಯಲ್ಲಿ ಈ ರೀತಿ ನಡೆದುಕೊಳ್ಳುವುದು ಅಧಿಕಾರಿ ವರ್ಗದವರಿಗೆ ಮಾಮೂಲಿಯಾಗಿದ್ದು ಹೇಳುವವರು ಇಲ್ಲ ಕೇಳುವವರು ಇಲ್ಲ ಎಂಬುದಕ್ಕೆ ಇದೇ ನಿದರ್ಶನ. ಆದರೆ ನೌಕರರಾದ ನಾವು ಮಾಡಿದಿರುವ ತಪ್ಪಿಗೂ ಕೂಡಲೇ ಶಿಕ್ಷೆ ಕೊಡುತ್ತಾರೆ. ಇದು ಸಂಸ್ಥೆಯಲ್ಲಿ ಇರುವ ಅವ್ಯವಸ್ಥೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಈ ರೀತಿ ವೇತನ ಪಾವತಿಗೆ ವಿಳಂಬ ಮಾಡಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕ್ರಮ ಕೈಗೊಂಡು ಮುಂದೆ ಈ ರೀತಿ ಅಸಡ್ಡೆ ತೋರಿದವರಿಗೆ ಏನಾಗುತ್ತದೆ ಎಂದುವುದನ್ನು ತೋರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲ ಘಟಕಗಳಲ್ಲಿ ಲೆಕ್ಕ ಪತ್ರ ಅಧಿಕಾರಿಗಳು ಫೆ. 28ರ ಒಳಗೆ ನೌಕರರ ಹಾಜರಾತಿಗಳನ್ನು ಮತ್ತು ಹಣಕಾಸುಗಳ ವಿವರಗಳನ್ನು ನಮೂದಿಸಲು ಆಗದ ಕಾರಣ ಇಂದು ಆಗಬೇಕಿದ್ದ ಸಂಬಳವು ಮಾ.4ಕ್ಕೆ ಹೋಗಿದೆ. ಇನ್ನು ಈ ರೀತಿ ವಿಳಂಬ ಮಾಡಿರುವವರ ವಿರುದ್ಧ ಕ್ರಮಕ್ಕೆ ನಾವು ಸಚಿವರ ಗಮನಕ್ಕೆ ತರುತ್ತೇವೆ ಎಮದು ಕೇಂದ್ರ ಕಚೇರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...