NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹೆಚ್ಚಳ ಸಂಬಂಧ ಹೈ ಕೋರ್ಟ್‌ನಲ್ಲಿ ಜ.30ರೊಳಗೆ ಅರ್ಜಿ ಸಲ್ಲಿಕೆ -ವಕೀಲ ಶಿವರಾಜು

H B Shivaraju, Advocate.
Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್‌ನಲ್ಲಿ ಅತೀ ಶೀಘ್ರದಲ್ಲೇ ಅರ್ಜಿಸಲ್ಲಿಸಲಿದ್ದಾರೆ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ. ಶಿವರಾಜು ಅವರು.

ಕಳೆದ 2020ರ ಜನವರಿ 1ರಿಂದ ಅಂದರೆ ಸರಿ ಸುಮಾರು 3ವರ್ಷ ಒಂದು ತಿಂಗಳ ಹಿಂದೆಯೇ ನಾಲ್ಕೂ ನಿಗಮಗಳಲ್ಲೂ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತು ನೌಕರರು ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಿಲ್ಲದೆ ದುಡಿಯುತ್ತಿದ್ದಾರೆ.

ಕಳೆದ ಮೂರು ವರ್ಷದ ಹಿಂದೆಯೇ ಆಗಬೇಕಿರುವ ವೇತನ ಪರಿಷ್ಕರಣೆ ಇನ್ನೂ ಆಗಿಲ್ಲ. ಹೀಗಾಗಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ವಕೀಲರಾದ ಶಿವರಾಜು ತಿಳಿಸಿದ್ದಾರೆ.

ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ಈ ಅರ್ಜಿ ಒಳಗೊಂಡಿದ್ದು, ಆ ಎಲ್ಲ ಜ್ವಲಂತ ಸಮಸ್ಯೆಗಳ ಬಗ್ಗೆ ಅರ್ಜಿಸಲ್ಲಿಸಲಾಗುವುದು.

ಇನ್ನು ಈವರೆಗೂ ವೇತನ ಪರಿಷ್ಕರಣೆ ಸಂಬಂಧ ಹೈ ಕೋರ್ಟ್‌ನಲ್ಲಿ ಅರ್ಜಿ ಹಾಕದೆ ಇರುವುದಕ್ಕೆ ಪ್ರಮುಖ ಕಾರಣ ನೌಕರರು ಮತ್ತು ಕೆಲ ಸಂಘಟನೆಗಳ ಮುಖಂಡರು ಸರ್ಕಾರ ಮತ್ತು ಆಡಳಿತ ಮಂಡಳಿಯೊಂದಿಗೆ ನಾವು ಮಾತನಾಡುತ್ತಿದ್ದೇವೆ. ಹೀಗಾಗಿ ಸದ್ಯ ನೀವು ಕೋರ್ಟ್‌ ಮೆಟ್ಟಿಲೇರಬೇಡಿ ಎಂದು ಮನವಿ ಮಾಡಿದ್ದರು. ಹೀಗಾಗಿ  ವಿಳಂಬವಾಗಿದೆ ಎಂದು ತಿಳಿಸಿದರು.

ಆದರೆ, ನೌಕರರ ಮತ್ತು ಸಂಘಟನೆಗಳ ಮನವಿಗೆ ಸರ್ಕಾರವಾಗಲೀ ಅಥವಾ ಆಡಳಿತ ಮಂಡಳಿಯಾಗಲೀ ಸ್ಪಂದಿಸಿದಂತೆ ಕಾಣುತ್ತಿಲ್ಲ. ಹೀಗಾಗಿ ಇದೇ ಜ.30ರ ಒಳಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬರದಿದ್ದರೆ ನಾವು ಜ.30ರೊಳಗೇ ಹೈ ಕೋರ್ಟ್‌ನಲ್ಲಿ ವೇತನ ಹೆಚ್ಚಳ ಸಂಬಂಧ ಅರ್ಜಿಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಕೋರ್ಟ್‌ನಲ್ಲಿ ವಕಾಲತ್ತು ವಹಿಸಿ ವಾದ ಮಾಡುವ ಕುರಿತು ನುರಿತ ಹಿರಿಯ ವಕೀಲರ ತಂಡವು ಸಜ್ಜಾಗಿದ್ದು, ಈ ಸಂಬಂಧ ಈಗಾಗಲೇ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಇನ್ನೇನಿದ್ದರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಸಾಧ್ಯವಾದಷ್ಟು ಬೇಗ ನೌಕರರಿಗೆ ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಾಗದೆ ನನೆಗುದಿಗೆ ಬಿದ್ದಿರುವುದನ್ನು ತೆರವುಗೊಳಿಸಲು ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...