NEWSನಮ್ಮಜಿಲ್ಲೆನಮ್ಮರಾಜ್ಯ

BMTC – ವಜಾಗೊಂಡ ನೌಕರರ ಮಧ್ಯಂತರ ಪರಿಹಾರ ಪ್ರಕರಣ: ಫೆ.1ಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ಮಾಡಿದ ಮುಷ್ಕರದ ವೇಳೆ ಬಿಎಂಟಿಸಿಯಲ್ಲಿ ವಜಾ ಆದ ನೌಕರರ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಪೀಠ ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಅಂತಿಮ ಆದೇಶವನ್ನು ಫೆಬ್ರವರಿ 1ಕ್ಕೆ ಕಾಯ್ದಿರಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಕಲಾಪ ಆರಂಭವಾಗುತ್ತಿದ್ದಂತೆ ಎರಡು ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಫೆ.1ರ ಬುಧವಾರಕ್ಕೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಆದ್ದರಿಂದ ನೌಕರರು ಯಾವುದೇ ಗೊಂದಲಕ್ಕೂ ಒಳಗಾಗದೇ ತಾಳ್ಮೆಯಿಂದ ಸಹಕರಿಸಬೇಕು ಎಂದು ವಜಾಗೊಂಡ ನೌಕರರು ಮನವಿ ಮಾಡಿದ್ದಾರೆ.

ಮತ್ತೆ ಮುಂದಿನ ದಿನಗಳಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಕಡೆಯಿಂದ ಹೊಸ ಜಂಟಿ ಮೆಮೋಗಳು ಬಿಡುಗಡೆ ಮಾಡುವ ಸಂಭವವಿದ್ದು ನೌಕರರಲ್ಲಿ ಗೊಂದಲ ಮೂಡಿಸುವ ಹುನ್ನಾರ ನಡೆಯಲಿದೆ. ಹೀಗಾಗಿ ನೌಕರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ಇನ್ನು ಮುಂದುವರಿದು ನಮ್ಮ ಪರವಾಗಿ ಹೈಕೋರ್ಟ್‌ನ ಹಿರಿಯ ವಕೀಲರಾದ ಸುಬ್ಬರಾವ್ ಅವರು ವಾದಮಂಡಿಸಿದ್ದು, ನೌಕರರು ಯಾವುದೇ ತಪ್ಪು ಮಾಡಿಲ್ಲ ಆದ್ದರಿಂದ ಕಾರ್ಮಿಕ ನ್ಯಾಯಾಲಯ ನೀಡಿರುವ ಮಧ್ಯಂತರ ಪರಿಹಾರವನ್ನು ಕೊಡಲೇಬೇಕೆಂದು ಪ್ರಬಲವಾಗಿ ವಾದ ಮಂಡಿಸಿದರು. ಈ ಸಂಬಂಧ ಪ್ರತಿವಾದ ಮಂಡಿಸಿದ ಬಿಎಂಟಿಸಿ ಪರ ವಕೀಲರು ಮತ್ತೊಂದು ತಿಂಗಳು ಕಾಲವಕಾಶ ಕೇಳಿದರು. ಆದರೆ ಅದನ್ನು ನ್ಯಾಯಪೀಠ ತಳ್ಳಿಹಾಕಿತು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಅಂತಿಮ ಆದೇಶಕ್ಕೆ ದಿನಾಂಕ ನಿಗದಿ ಮಾಡಿದ್ದು, ವಜಾಗೊಂಡ ನೌಕರರು ಆತಂಕಕ್ಕೆ ಒಳಗಾಗದೆ ನ್ಯಾಯಾಲಯದ ತೀರ್ಪಿನತ್ತ ಗಮನ ಹರಿಸೋಣ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ