NEWSರಾಜಕೀಯ

ಡಿಕೆಶಿ ಸಹೋದರಿಯ ಪತಿ, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಪಿ.ಶರತ್‌ ಚಂದ್ರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರ ಸಹೋದರಿಯ ಪತಿ ಸಿ.ಪಿ.ಶರತ್‌ ಚಂದ್ರ ಅವರು ಆಮ್‌ ಆದ್ಮಿ ಪಾರ್ಟಿಗೆ ಇಂದು ಸೇರ್ಪಡೆಯಾದರು.

ಪಕ್ಷದ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಭಾಸ್ಕರ್‌ ರಾವ್‌ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜನಾನುರಾಗಿ ನಾಯಕ ಸಿ.ಪಿ.ಶರತ್‌ ಚಂದ್ರರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿರುವುದು ಆ ಭಾಗದಲ್ಲಿನ ಪಕ್ಷದ ಸಂಘಟನೆಗೆ ಆನೆಬಲ ತಂದುಕೊಡಲಿದೆ.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಂತಾದ ಸಾಂಪ್ರದಾಯಿಕ ಪಕ್ಷಗಳ ನಿಷ್ಕ್ರಿಯತೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನಿಲುವುಗಳಿಂದಾಗಿ ಆ ಪಕ್ಷಗಳ ಪ್ರಾಮಾಣಿಕ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿದ್ದಾರೆ ಎಂದು ಹೇಳಿದರು.

ಸಿ.ಪಿ.ಶರತ್‌ ಚಂದ್ರರವರನ್ನು ಪರಿಚಯಿಸಿದ ಭಾಸ್ಕರ್‌ ರಾವ್, “ಕಾನೂನು ಪದವೀಧರರಾದ ಸಿ.ಪಿ.ಶರತ್‌ ಚಂದ್ರ ಅವರು ಉದ್ಯಮಿ ಹಾಗೂ ರೈತರು ಕೂಡ ಹೌದು. ವಿಜಯ ಬ್ಯಾಂಕ್‌ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಅಲ್ಲಿನ ಉದ್ಯೋಗಿಗಳ ಸಂಘದ ಉಪಾಧ್ಯಕ್ಷರಾಗಿ, ಬ್ಯಾಂಕ್‌ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದ್ದರು.

2013, 2014, 2019ರ ಚುನಾವಣೆಗಳ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ ಅನುಭವ ಹೊಂದಿದ್ದಾರೆ. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌, ನೋಟು ಅಮಾನ್ಯೀಕರಣ ವಿರುದ್ಧದ ಹೋರಾಟಗಳಲ್ಲಿ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೋವಿಡ್‌ ಸಮಯದಲ್ಲಿ ರೇಷನ್‌ ಕಿಟ್‌ ವಿತರಣೆ, ಔಷಧ ವಿತರಣೆ, ರಕ್ತದಾನ ಶಿಬಿರಗಳ ಆಯೋಜನೆ, ಆಸ್ಪತ್ರೆಗೆ ದಾಖಲಾಗಲು ನೆರವು, ಮೃತ ರೋಗಿಗಳ ಅಂತ್ಯಕ್ರಿಯೆಗೆ ಸಹಾಯ ಸೇರಿದಂತೆ ಹತ್ತುಹಲವು ರೀತಿಯ ಸೇವೆಯಲ್ಲಿ ಭಾಗಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. 2021-22ರ ಪ್ರವಾಹದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚನ್ನಪಟ್ಟಣದ ಜನರಿಗೆ ವಸತಿ, ರೇಷನ್‌ ಕಿಟಿ, ಹಣಕಾಸು ನೆರವು ಮುಂತಾದ ಸಹಾಯ ಮಾಡಿದ್ದರು” ಎಂದು ತಿಳಿಸಿದರು.

ಪಕ್ಷ ಸೇರಿ ಮಾತನಾಡಿದ ಸಿ.ಪಿ.ಶರತ್‌ ಚಂದ್ರ, ಆಮ್‌ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ನೀಡುತ್ತಿರುವ ಆಡಳಿತವು ಅತ್ಯಂತ ಜನಪರ ಹಾಗೂ ದಕ್ಷವಾಗಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಕರ್ನಾಟಕದಲ್ಲೂ ಪ್ರಾಮಾಣಿಕ, ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...