ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಇದೇ ಜ.6ರಿಂದ ಜಾರಿಗೆ ಬಂದಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯ ಒಡಂಬಡಿಕೆಯಲ್ಲಿರುವ ಆಸ್ಪತ್ರೆಗಳು ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳನ್ನು ಹೊರಗಿಡಲಾಗುವುದು ಎಂದು ಅಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹೌದು! ಜನವರಿ 6ರಂದು ಈ ಯೋಜನೆ ಜಾರಿಯಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ಕೆಎಸ್ಆರ್ಟಿಸಿ ನೌಕರರು ಇಲ್ಲವೇ ಅವರ ಅವಲಂಬಿತರಲ್ಲಿ 1200ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದಿದ್ದಾರೆ. ಯೋಜನೆಯ ಆರಂಭದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಾಗುವುದು ಸಹಜ ಎಂದು ಅಧಿಕಾರಿಳು ಸ್ಪಷ್ಟಪಡಿಸಿದ್ದಾರೆ.
ಇನ್ನು ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಯ ಒಡಂಬಡಿಕೆಯಲ್ಲಿರುವ ಮಂಡ್ಯದ ಆಸ್ಪತ್ರೆಯಲ್ಲಿ ಕೆಎಸ್ಆರ್ಟಿಸಿಯ ನೌಕರರೊಬ್ಬರು ಹೆರಿಗೆಗಾಗಿ ಅವರ ಪತ್ನಿಯನ್ನು ದಾಖಲಿಸಲು ಕರೆದೊಯ್ದಾಗ ಉಚಿತ ಇಲ್ಲ ಎಂದು ಅಲ್ಲಿನ ಆಡಳಿತ ಮಂಡಳಿ ಹೇಳಿರುವ ಆಡಿಯೋ ಸಹಿತ ವಿಜಯಪಥ ಕನ್ನಡ ಯೂ ಟೂಬ್ನಲ್ಲಿ ಪ್ರಸಾರವಾಗಿತ್ತು.
ಇದರಿಂದ ಎಚ್ಚೆತ್ತ ಅಧಿಕಾರಿಗಳು ಆ ರೀತಿ ನಡೆದುಕೊಳ್ಳುವ ಆಸ್ಪತ್ರೆಗಳ ಜತೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ರದ್ದು ಮಾಡುವ ಮೂಲಕ ಅವುಗಳನ್ನು ಹೊರಗಿಡಲಾಗುವುದು ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಮಂಡ್ಯದ ಆಸ್ಪತ್ರೆಯಲ್ಲಿ..?: ಸಂಸ್ಥೆಯ ನೌಕರರೊಬ್ಬರು ಪತ್ನಿಯನ್ನು ದಾಖಲಿಸಲು ಆಸ್ಪತ್ರೆಗೆ ಕರೆದೊಯ್ದಾಗ ಉಚಿತ ಇಲ್ಲ ಎಂದು ಗೊತ್ತಾಗಿ ಆಸ್ಪತ್ರೆಯ ಮೇಲಧಿಕಾರಿಯೊಂದಿಗಿನ ಫೋನ್ ಕರೆಯ ಸಂಭಾಷಣೆ ಮಾಡಿರುವುದು ಆಡಿಯೋದಲ್ಲಿದೆ. ‘ಸಹಜ ಹೆರಿಗೆಗೆ ₹8,000, ಸಿಸೇರಿಯನ್ಗೆ ₹12,000 ಮಾತ್ರ ಕೆಎಸ್ಆರ್ಟಿಸಿಯಿಂದ ವಿಮಾ ಮೊತ್ತ ಸಿಗುತ್ತದೆ. ಇದು ಒಟ್ಟು ವೆಚ್ಚದ ಶೇ.20ರಷ್ಟು. ಉಳಿದ ಮೊತ್ತವನ್ನು ನೌಕರರು ಭರಿಸಬೇಕು ಎಂಬುದು ಆಡಿಯೋದಲ್ಲಿದೆ.
ಯೋಜನೆ ಪರ ವಿಡಿಯೋ: ‘ಕೆಎಸ್ಆರ್ಟಿಸಿ ಆರೋಗ್ಯ’ ಯೋಜನೆಯಿಂದ ಅನುಕೂಲವಾಗಿದೆ ಎಂದು ಹಲವರು ವಿಡಿಯೋ ಮಾಡಿದ್ದಾರೆ. ಶಿವಮೊಗ್ಗ ಘಟಕದಲ್ಲಿ ಚಾಲಕರಾಗಿರುವ ಶಿವಕುಮಾರ್ ಅವರು ತನ್ನ ಪತ್ನಿಯನ್ನು ಹೆರಿಗೆಗಾಗಿ ಭದ್ರಾವತಿಯ ಆಸ್ಪತ್ರೆಗೆ ದಾಖಲಿಸಿದ್ದರು. ‘ಯಾವುದೇ ಶುಲ್ಕ ಕಟ್ಟಿಸಿಕೊಳ್ಳದೇ ಸಿಸೇರಿಯನ್ ಮಾಡಿದ್ದಾರೆ. ಮೊದಲ ಹೆರಿಗೆಗೆ ಇದೇ ಆಸ್ಪತ್ರೆಯಲ್ಲಿ ₹45 ಸಾವಿರ ವೆಚ್ಚವಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.
ಇನ್ನು ಬೆಂಗಳೂರು ಕೇಂದ್ರೀಯ ವಿಭಾಗದಲ್ಲಿ ನೌಕರರಾಗಿರುವ ಪ್ರಭಾವತಿ ಅವರು ಅಪಘಾತದಲ್ಲಿ ಗಾಯಗೊಂಡಾಗ ಮಲ್ಲೇಶ್ವರದಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಸಕಾಲದಲ್ಲಿ ಉಚಿತವಾಗಿ ಚಿಕಿತ್ಸೆ ದೊರೆತಿರುವುದನ್ನು ಅವರ ಮಗಳು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅನಗತ್ಯ ವಿಡಿಯೋ: ರಾಮಲಿಂಗಾರೆಡ್ಡಿ: ‘ಕೆಎಸ್ಆರ್ಟಿಸಿ ಆರೋಗ್ಯ’ದಡಿ 250 ಆಸ್ಪತ್ರೆಗಳೊಂದಿಗೆ ಮೊದಲ ಹಂತದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಆನಂತರ ಮತ್ತೆ 64 ಆಸ್ಪತ್ರೆಗಳು ಸೇರ್ಪಡೆಗೊಂಡಿವೆ. ಅದರಲ್ಲಿ ಮಂಡ್ಯದಲ್ಲಿಯೇ ನಾಲ್ಕು ಆಸ್ಪತ್ರೆಗಳಿವೆ. ಯಾವುದೋ ಒಂದು ಆಸ್ಪತ್ರೆಯಲ್ಲಿ ನಮ್ಮ ಜತೆಗೆ ಒಡಂಬಡಿಕೆ ಮಾಡಿಕೊಂಡಂತೆ ಮಾಡಿ ಬಳಿಕ ಇಲ್ಲ ಎಂದು ಹೇಳಿದ್ದರೆ ಆ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ನೌಕರರು ಭಯಪಡುವುದು ಬೇಡ ಎಂದು ತಿಳಿಸಿದ್ದಾರೆ.
ಇನ್ನು ಕೆಲವರು ಯೋಜನೆ ಬಗ್ಗೆ ಕೆಟ್ಟ ಹೆಸರು ತರುವುದಕ್ಕೆ ಈ ರೀತಿ ಮಾಡುತ್ತಾರೆ ಅಂಥವರ ಬಗ್ಗೆ ನೌಕರರು ತಲೆ ಕೆಡಿಸಿಕೊಳ್ಳಬಾರದು. ಅಲ್ಲದೆ ಒಡಂಬಡಿಕೆ ಮಾಡಿಕೊಂಡಿರುವ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡದಿದ್ದರೆ ಅವುಗಳನ್ನು ಏನು ಮಾಡಬೇಕು ಎಂಬುವುದರ ಬಗ್ಗೆ ನಮ್ಮ ಸಂಸ್ಥೆಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ ಎಂದು ಹೇಳಿದ್ದಾರೆ.
Related

You Might Also Like
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...