ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.18) ಮತ್ತು ಬುಧವಾರ (ಫೆ.19) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಬಾರಿ ಬೀಡನಹಳ್ಳಿಯಲ್ಲಿ ಮಾರಿಹಬ್ಬದ ಸಂಭ್ರಮ ಇಲ್ಲ.
ಹೌದು! ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರೂ ಆದ ದೇವರಗುಡ್ಡ ವಯೋಸಹಜವಾಗಿ ನಿಧನರಾಗಿರುವುದರಿಂದ ಹಬ್ಬವನ್ನು ಈ ಬಾರಿ ಮಾಡದಂತೆ ಗ್ರಾಮದ ಮುಖಂಡರು ನಿರ್ಧರಿಸಿರುವುದರಿಂದ ಹಬ್ಬದ ಸಡಗರವಿಲ್ಲ.
ಇನ್ನು ಉಳಿದ ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿ ಗ್ರಾಮಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ಫೆ. 18 ಮತ್ತು 19ರಂದು ಹಬ್ಬ ಆಚರಣೆ ಮಾಡಲಾಗುತ್ತಿದೆ.
ಹಬ್ಬದ ಅಂಗವಾಗಿ ಮಂಗಳವಾರ ಆಯಾಯ ಗ್ರಾಮ ದೇವತೆ ಮಾರಮ್ಮನಿಗೆ ವಿಶೇಷ ಮೊದಲ ಪೂಜೆ (ತಂಪು ಸೇವೆ) ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಇಂದು ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.
ಬುಧವಾರ (ನಾಳೆ) ಮುಂಜಾನೆ ಮಡೆ ಊಯುವರು: ಉತ್ತನಹಳ್ಳಿ ಮಾರಮ್ಮನಿಗೆ ಗ್ರಾಮದ ಪ್ರತಿ ಮನೆಯಿಂದ ಒಬ್ಬರಂತೆ ಮುಂಜಾನೆ 4.30ರಲ್ಲಿ ಒಂದೆಡೆ ಸೇರಿ ಮಡೆ ಊಯ್ಯುವರು. (ಹೊಸ ಮಡಿಕೆ, ತಂದು ಅದರಲ್ಲಿ ಅಕ್ಕಿ, ಬೇಳೆ, ಉಪ್ಪು ಅದಕ್ಕೆ ತಕ್ಕಷ್ಟು ನೀರು ಹಾಕಿ ಅನ್ನಮಾಡುವುದು) ನಂತರ ಈ ಅನ್ನ ಪ್ರಸಾದ ಸಿದ್ಧವಾಎ ಮಡಿಕೆಯ ಬಾಯಿಯನ್ನು ಅಡಕೆಯ ಎಲೆ( ಒಡಾಳೆ)ಯಿಂದ ಮುಚ್ಚಿ ಅದನ್ನು ಒಡಾಳೆ ದಾರದಿಂದಲೇ ಕಟ್ಟುತ್ತಾರೆ. ಈ ವೇಳೆ ಜವನ ಬೇವಿನ ಸೊಪ್ಪು ಕಟ್ಟುವ ಮೂಲಕ ಅಲಂಕರಿಸಿ ತಾವು ಮಡೆ ಊಯ್ಯಿದಿರುವ ಮಡಿಕೆಯನ್ನು ಗುರುತು ಹಾಕಿಕೊಂಡು ಬರುತ್ತಾರೆ.
ಮತ್ತೆ ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ಮಡೆ ಊಯ್ಯಿದಿರುವ ಸ್ಥಳ ತಲುಪುತ್ತಾರೆ.
ಈ ಸ್ಥಳದಲ್ಲಿ ತಮ್ಮ ಮುಂಜಾನೆ ಮಡೆ ಊಯ್ಯಿದಿರುವ ಮಡಿಕೆಯ ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ಪೂಜೆ ನೆರವೇರಿಸುತ್ತಾರೆ.
ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಮಡೆ ಊಯ್ಯಿದಿರುವ ಸ್ಥಳಕ್ಕೆ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು. ಆದರೆ ಈ ಬಾರಿ ಇಲ್ಲ.
ಮಡೆಗಳ ಮೇಲೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ಮಡೆ ಊಯ್ಯಿದಿರುವ ಮಡಿಕೆಗಳನ್ನು ಹೊತ್ತು ಮನೆಗಳಿಗಳತ್ತ ಗ್ರಾಮದ ಯುವಕರು ತೆರಳುವರು. ಇನ್ನು ಮನೆ ಬಾಗಿಲ ಬಳಿ ಮಡೆ ಹೊತ್ತವರ ಪಾದಪೂಜೆಯನ್ನು ಅಂದರೆ ಗಂಗೆಯನ್ನೆರೆಯುವ ಮೂಲಕ ದೇವರ ಸ್ವರೂಪಿ ಎಂದು ಮಡೆಯನ್ನು ಮನೆಗೆ ಬರಮಾಡಿಕೊಳ್ಳುವರು. ಆ ಮಡೆ ಪ್ರಸಾದವನ್ನು ಮನೆಯ ಪ್ರತಿ ಸದಸ್ಯರು ಸ್ವೀಕರಿಸುವರು. ಈ ಮೂಲಕ ಮಡೆ ಪ್ರಸಾದ ಪೂರ್ಣಗೊಳ್ಳುವುದು.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...