NEWS

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ, ಮೆಲ್ಸೇತುವೆ ನಿರ್ಮಾಣಕ್ಕೆ ಪೃಥ್ವಿ ರೆಡ್ಡಿ ವಿರೋಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಕಿ ಟ್ಯಾಂಕ್‌ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಮಾಡುವ ಬಿಬಿಎಂಪಿ ನಿರ್ಧಾರವನ್ನು ಆಮ್‌ ಆದ್ಮಿ ಪಾರ್ಟಿ ತೀವ್ರವಾಗಿ ವಿರೋಧಿಸಿದ್ದು, ಬಿಬಿಎಂಪಿಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ರದ್ದುಪಡಿಸಿ ಜನರ ಬಯಕೆ ಹಾಗೂ ಅಗತ್ಯಕ್ಕೆ ತಕ್ಕಂತೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ನೀಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಪರಿಸರದ ಮೇಲಾಗುವ ದುಷ್ಪರಿಣಾಮ ಹಾಗೂ ಯೋಜನೆಯಲ್ಲಿನ ಲೋಪದೋಷಗಳನ್ನು ಪರಿಗಣಿಸಿ, ಸ್ಯಾಂಕಿ ಟ್ಯಾಂಕ್‌ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣವನ್ನು ವಿರೋಧಿಸುವ ಜನರ ಜತೆ ನಾವು ನಿಲ್ಲಲಿದ್ದೇವೆ. ಈಗಾಗಲೇ ಇಂತಹ ಅನೇಕ ಯೋಜನೆಗಳು ನಗರಕ್ಕೆ ಸಾಕಷ್ಟು ಹಾನಿ ಮಾಡಿದ್ದು, ಅವುಗಳ ಸಾಲಿಗೆ ಮತ್ತೊಂದನ್ನು ಸೇರ್ಪಡೆ ಮಾಡುವುದು ಸಲ್ಲ ಎಂದು ತಿಳಿಸಿದರು.

ನಗರದ ಯೋಜನೆಯನ್ನು ಮಹಾನಗರ ಯೋಜನಾ ಸಮಿತಿಯು ರೂಪಿಸಬೇಕು ಹಾಗೂ ಮೊಬಿಲಿಟಿ ಯೋಜನೆಗಳನ್ನು ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಪ್ರಾಧಿಕಾರವು ಗುರುತಿಸಿ, ಯೋಜನೆ ರೂಪಿಸಬೇಕು. ಬಿಬಿಎಂಪಿ ಬಳಿ ಇಂತಹ ಮೂಲಸೌಕರ್ಯ ಯೋಜನೆಗಳನ್ನು ಸಿದ್ಧಪಡಿಸಲು ಬೇಕಾದ ಜ್ಞಾನವಾಗಲಿ ಅಥವಾ ಸಾಮರ್ಥ್ಯವಾಗಲಿ ಇಲ್ಲ ಎಂಬುದು ಈ ಹಿಂದಿನ ಯೋಜನೆಗಳಿಂದ ಸಾಬೀತಾಗಿದೆ. ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮೇಲ್ಸೇತುವೆ ಯೋಜನೆಯನ್ನು ಬಿಬಿಎಂಪಿ ಕೈಗೆತ್ತಿಕೊಂಡರೆ ಅದು ಮತ್ತೊಂದು ದುರಂತವಾಗಲಿದೆ ಎಂದರು.

ಕರ್ನಾಟಕದ ಬಿಜೆಪಿ ಸರ್ಕಾರವು ಕಾನೂನನ್ನು ಗೌರವಿಸಬೇಕು. ಎಂಪಿಸಿ ಸದಸ್ಯರನ್ನು ನೇಮಕ ಮಾಡಿಕೊಂಡು, ನಗರ ಪ್ರದೇಶದ ಯೋಜನೆ ರೂಪಿಸುವ ಹೊಣೆಗಾರಿಕೆಯನ್ನು ನೀಡಬೇಕು. ರಸ್ತೆ, ಸಾರಿಗೆ, ನೀರು, ವಸತಿ ಮುಂತಾದ ಯೋಜನೆಗಳನ್ನು ಇಲಾಖೆಗಳು ಅಥವಾ ಏಜೆನ್ಸಿಗಳಿಂದ ಮಾಡಿಸುವ ಬದಲು ಎಂಪಿಸಿಯಿಂದ ಮಾಡಿಸಬೇಕು. ಸಾರಿಗೆ ವಲಯದ ಯೋಜನೆಗಳ ಪ್ರಸ್ತಾವನೆಗಳು ಏಜೆನ್ಸಿ ಅಭಿವೃದ್ಧಿ ಪಡಿಸಿದ ಸೂಕ್ತ ಮೊಬಿಲಿಟಿ ಯೋಜನೆಯ ಆಧಾರದಲ್ಲಿ ಬಿಎಂಎಲ್‌ಟಿಎಯಿಂದ ಸಿದ್ಧಗೊಳ್ಳಬೇಕು ಎಂದು ಪೃಥ್ವಿ ರೆಡ್ಡಿ ಅಭಿಪ್ರಾಯಪಟ್ಟರು.

ಚುನಾಯಿತ ಸರ್ಕಾರಗಳು ಮೊದಲು ಜನರ ಭಾವನೆಗಳನ್ನು ಗೌರವಿಸಬೇಕು. ಈ ಯೋಜನೆಯು ಇದರಲ್ಲಿ ವಿಫಲವಾಗಿದ್ದು, ಸ್ಥಳೀಯ ಜನರಿಂದ ಹಲವು ಕಾರಣಗಳಿಗೆ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯ ಪ್ರಸ್ತಾವನೆಯನ್ನು ಸಿದ್ಧಪಡಿಸುವಾಗ ಈ ಜನರನ್ನು ಸಂಪರ್ಕಿಸಿ ಅಭಿಪ್ರಾಯ ಕೇಳಲಾಗಿಲ್ಲ. ಈ ರೀತಿ ಜನರ ಅಭಿಪ್ರಾಯವನ್ನೂ ನಿರ್ಲಕ್ಷಿಸಿ ಯೋಜನೆಯ ಪ್ರಸ್ತಾವನೆ ರೂಪಿಸುವುದನ್ನು ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಘಟಕ ವಿರೋಧಿಸುತ್ತದೆ ಎಂದು ಹೇಳಿದರು.

ಬಿಬಿಎಂಪಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ರದ್ದು ಪಡಿಸುತ್ತೇವೆ. ಜನರ ಅಗತ್ಯ ಹಾಗೂ ಬಯಕೆಗೆ ತಕ್ಕಂತೆ ವಿಶ್ವದರ್ಜೆಯ ಮೂಲ ಸೌಕರ್ಯಗಳನ್ನು ಆಮ್‌ ಆದ್ಮಿ ಪಾರ್ಟಿಯು ನಮ್ಮ ಬೆಂಗಳೂರಿಗೆ ನೀಡಲಿದೆ. ದೆಹಲಿ ಹಾಗೂ ಪಂಜಾಬ್‌ ಜನರು ಆಮ್‌ ಆದ್ಮಿ ಪಾರ್ಟಿಯ ಅಭಿವೃದ್ಧಿಯನ್ನು ನೋಡಿದ್ದು, ಕರ್ನಾಟಕದಲ್ಲೂ ಅಂತಹದೇ ಅಭಿವೃದ್ಧಿ ಕಾರ್ಯಗಳು ಜಾರಿಗೆ ಬರಲಿವೆ ಎಂದು ಪೃಥ್ವಿ ರೆಡ್ಡಿ ತಿಳಿಸಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ