CrimeNEWSರಾಜಕೀಯ

ಶಾಸಕ ಹ್ಯಾರಿಸ್‌ ಬೆಂಬಲಿಗರಿಂದ ಗೂಂಡಾ ವರ್ತನೆ : ಪೊಲೀಸರಿಗೆ ಮಥಾಯಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಯ ಮೂಲಸೌಕರ್ಯಗಳ ಪರಿಶೀಲನೆ ಸಂದರ್ಭದಲ್ಲಿ ಶಾಸಕ ಎನ್‌.ಎ.ಹ್ಯಾರಿಸ್‌ ಜತೆಗೆ ಆಗಮಿಸಿದ ಅವರ ಬೆಂಬಲಿಗರು ನಿಂದಿಸಿ ಬೆದರಿಕೆ ಹಾಕಿದ್ದು, ಅವರನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕೆ.ಮಥಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಶೋಕನಗರ ಪೊಲೀಸ್‌ ಠಾಣೆಗೆ ದೂರು ನೀಡಿ ಮಾತನಾಡಿದ ಕೆ.ಮಥಾಯಿ, “ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಾರ್ಟಿ ಪರ ಮನೆಮನೆ ಪ್ರಚಾರ ಮಾಡಿದ ಸಂದರ್ಭದಲ್ಲಿ, ಇಲ್ಲಿನ ಸರ್ಕಾರಿ ಶಾಲೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಕರ್ಯಗಳು ಕೂಡ ಸರಿಯಾಗಿಲ್ಲ ಎಂದು ಜನರು ಅಳಲು ತೋಡಿಕೊಂಡರು. ಈ ಕುರಿತು ಪರಿಶೀಲನೆಗೆ ಮುಂದಾದೆವು ಎಂದು ತಿಳಿಸಿದರು.

ಇನ್ನು ನೀಲಸಂದ್ರದ ಸರ್ಕಾರಿ ಉರ್ದು ಶಾಲೆಗೆ ಶಾಸಕ ಎನ್.ಎ.ಹ್ಯಾರಿಸ್‌ ಅವರೇ ಅಧ್ಯಕ್ಷರಾಗಿದ್ದು, ಅಲ್ಲಿ ಬಾಲಕಿಯರ ಶೌಚಾಲಯಕ್ಕೆ ಸರಿಯಾದ ಬಾಗಿಲಿಲ್ಲದೇ ಹೆಣ್ಣುಮಕ್ಕಳು ಮುಜುಗರ ಅನುಭವಿಸುತ್ತಿದ್ದಾರೆ. ಶಾಂತಿನಗರದ ಇನ್ನೂ ಹಲವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಶೌಚಾಲಯಕ್ಕೆ ಹೋಗಬೇಕಾದ ಸಂದರ್ಭ ಬಂದರೆ, ಪಾಠ ಕೇಳುವುದನ್ನು ಅರ್ಧಕ್ಕೆ ನಿಲ್ಲಿಸಿ ತಮ್ಮ ಮನೆಗೆ ಹೋಗಿಬರಬೇಕಾಗಿದೆ.

ಆಸ್ಪತ್ರೆಯೊಂದರ ಕಟ್ಟಡವು ಸಂಜೆ-ರಾತ್ರಿ ವೇಳೆ ಗಾಂಜಾ ಸೇವನೆ, ಮದ್ಯ ಸೇವನೆ ಬಳಕೆಯಾಗುತ್ತಿದೆ ಎಂಬ ಆರೋಪದ ಕುರಿತು ಪರಿಶೀಲಿಸಿದಾಗ, ಅಲ್ಲಿ ಸಾಲುಸಾಲು ಮದ್ಯದ ಬಾಟಲಿಗಳು ಕಂಡುಬಂದವು ಎಂದು ಹೇಳಿದರು.

ಸರ್ಕಾರಿ ತಮಿಳು ಶಾಲೆಯಲ್ಲಿ ಕೇವಲ ಒಬ್ಬರು ಶಿಕ್ಷಕರು ಒಂದರಿಂದ ಐದನೇ ತರಗತಿಯ ಎಲ್ಲ ಹತ್ತು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ಇದನ್ನು ಪರಿಶೀಲಿಸುತ್ತಿದ್ದಾಗ ಶಾಸಕ ಎನ್.ಎ.ಹ್ಯಾರಿಸ್‌ ಹಾಗೂ ಅವರ ಬೆಂಬಲಿಗರು ಆಗಮಿಸಿದರು. ಗೂಂಡಾ ಬೆಂಬಲಿಗರು ನಮ್ಮನ್ನು ನಿಂದಿಸಿ, ಬೆದರಿಕೆ ಒಡ್ಡಿದರು ಎಂದು ಆರೋಪಿಸಿದರು.

ಈ ಕ್ಷೇತ್ರದಲ್ಲಿನ ಗೂಂಡಾಗಿರಿ ಅಂತ್ಯ ಹಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದೆಂಬ ಉದ್ದೇಶದಿಂದ ಪೊಲೀಸರಿಗೆ ದೂರು ನೀಡಿದ್ದೇವೆ. ಸರ್ಕಾರಿ ಶಾಲೆಗಳು, ಸರ್ಕಾರಿ ಆರೋಗ್ಯ ಕೇಂದ್ರಗಳು ಅಭಿವೃದ್ಧಿ ಹೊಂದಿ, ಜನಸಮಾನ್ಯರಿಗೆ ನೆರವಾಗಬೇಕೆಂಬುದು ಆಮ್‌ ಆದ್ಮಿ ಪಾರ್ಟಿಯ ದೃಢ ನಿಲುವಾಗಿದ್ದು, ಇಂತಹ ಬೆದರಿಕೆಗಳಿಗೆ ಹೆದರಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕೆ.ಮಥಾಯಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ