ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕಳೆದ ವಾರ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನೂ 50 ರೂ. ಏರಿಸುವ ಮೂಲಕ ಸಾಮಾನ್ಯ ಜನರ ಜೇಬಿಗೆ ನೇರವಾಗಿ ಕತ್ತಿರಿಹಾಕಿದೆ.
ಹೌದು! 14.2 ಕಿಲೋ ಸಿಲಿಂಡರ್ನ ಅಡಿಗೆ ಅನಿಲದ ಬೆಲೆಯನ್ನು 805.50ರಿಂದ 855.50 ರೂ.ಗೆ ಹೆಚ್ಚಳ ಮಾಡಿದೆ. ಇದು ಸಾಮಾನ್ಯ ಬಳಕೆದಾರರಿಗೆ ಮಾತ್ರವಲ್ಲ, ಉಜ್ವಲ ಸ್ಕೀಮ್ ಫಲಾನುಭವಿಗಳಿಗೂ ಈ ಬೆಲೆ ಏರಿಕೆಯ ಬಿಸಿ ತಾಕಿದೆ.
ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಸೋಮವಾರ ಅಂದರೆ ಏ.7ರಂದು ತಿಳಿಸಿದ್ದು, ಇಂದಿನಿಂದಲೇ ದರ ಏರಿಕೆಯ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
14.2 ಕಿಲೋ ಗ್ಯಾಸ್ ಸಿಲಿಂಡರ್ ಬೆಲೆ 805.50 ರೂ. ಇದ್ದದ್ದು 855.50 ರೂ.ಗೆ ಏರಿಕೆ ಆಗಲಿದೆ. ಉಜ್ವಲ ಸ್ಕೀಮ್ನ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಸಿಲಿಂಡರ್ ಸಿಗುತ್ತದಾದರೂ ಅವರಿಗೂ ಕೂಡ 50 ರೂ. ಏರಿಕೆ ಆಗಿದೆ. 505 ರೂ. ಇದ್ದ ಬೆಲೆ 555 ರೂ.ಗೆ ಹೆಚ್ಚಳ ಆಗುತ್ತಿದೆ.
ಪೆಟ್ರೋಲ್ ಮತ್ತು ಡೀಸಲ್ ಮೇಲೆ ಕೇಂದ್ರ ಅಬಕಾರಿ ಸುಂಕದಲ್ಲಿ ಎರಡು ರೂ.ಏರಿಕೆ ಮಾಡಲಾಗಿರುವ ಸುದ್ದಿ ಬಂದ ಬೆನ್ನಲ್ಲೇ ಜನಸಾಮಾನ್ಯರಿಗೆ ಅಡುಗೆ ಅನಿಲದ ಬೆಲೆ ಏರಿಕೆಯ ಶಾಕ್ ಬಂದಿದೆ.
ಏಪ್ರಿಲ್ 1ರಂದು ವಾಣಿಜ್ಯ ಬಳಕೆಯ ಅನಿಲದ ಬೆಲೆಯನ್ನು ಇಳಿಸಲಾಗಿತ್ತು. 19 ಕಿಲೋ ಮತ್ತು 47.5 ಕಿಲೋ ಕಮರ್ಷಿಯಲ್ ಸಿಲಿಂಡರ್ ಬೆಲೆ ಇಳಿಕೆ ಆಗಿತ್ತು. ಆದರೆ, ಇವತ್ತು ಎರಡೂ ಕಮರ್ಷಿಯಲ್ ಸಿಲಿಂಡರ್ ಬೆಲೆಗಳು ಹೆಚ್ಚಳಗೊಂಡಿವೆ. 19 ಕಿಲೋ ಕಮರ್ಷಿಯಲ್ ಗ್ಯಾಸ್ ಬೆಲೆ ಸಿಲಿಂಡರ್ಗೆ 5.50 ರೂ. ಹೆಚ್ಚಳ ಆಗಿದೆ. 47.5 ಕಿಲೋ ಸಿಲಿಂಡರ್ ಬೆಲೆ 13.50 ರೂನಷ್ಟು ಏರಿಕೆ ಆಗಿದೆ.
Related

You Might Also Like
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...