NEWSಉದ್ಯೋಗನಮ್ಮಜಿಲ್ಲೆ

ಖಾಲಿ ಇರುವ ಜಿಲ್ಲಾ, ತಾಲೂಕು ಮಟ್ಟದ ಹುದ್ದೆಗಳಿಗೆ ನೇರಗುತ್ತಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು 21 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹುದ್ದೆಗಳ ವಿವರ: ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ವಿದ್ಯಾರ್ಹತೆ: ಪದವಿ ಅಥವಾ ಸರ್ಟಿಫಿಕೇಶನ್/ ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಇನ್‌ಫರ್ಮೆಷನ್ ಟೆಕ್ನಾಲಜಿ. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು, ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರತಕ್ಕದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಲು ಸಿದ್ದರಿರಬೇಕು.

ತಾಲೂಕು ಮಟ್ಟದಲ್ಲಿ ದೇವನಹಳ್ಳಿ ಮತ್ತು ನೆಲಮಂಗಲ ತಾಲೂಕು ಸಂಯೋಜಕರು-02, ವಿದ್ಯಾರ್ಹತೆ: ಪದವಿಧರರಾಗಿರಬೇಕು. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು, ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರತಕ್ಕದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಹಾಗೂ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.

ಪೋಷಣ್ ಅಭಿಯಾನ ಯೋಜನೆಯಡಿ ತಾಲೂಕು ಮಟ್ಟದಲ್ಲಿ ಯೋಜನಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದು ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಮಾನದಂಡಗಳ ಪ್ರಕಾರ ಅರ್ಹರಿದ್ದಲ್ಲಿ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2023ರ ಮಾರ್ಚ್ 09 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787445. ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ