ಮಡಿಕೇರಿ: ಹೋಮ್ ಸ್ಟೇ ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ ತೆರಳಿದ್ದ ಪ್ರವಾಸಿಗರು ಇನ್ನಿಲ್ಲದ ಹಿಂಸೆ ಅನುಭವಿಸಿದ್ದಾರೆ. ಈ ಸಂಬಂಧ ಮಡಿಕೆರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರಾತ್ರಿಯಿಡಿ ಹಿಂಸೆ ನೀಡಿದೆ ಇಬ್ಬರನ್ನು ಪೊಲೀಸರು ಬಂಧಿಸಿ ಕಂಬಿಹಿಂದೆ ತಳ್ಳಿದ್ದಾರೆ.
ಬೆಂಗಳೂರು ಮೂಲದ ಮಮತಾ ಎಂಬುವರು ತಮ್ಮ ಮಗಳ ಜೊತೆ ಸಮಯ ಸಿಕ್ಕಾಗಲೆಲ್ಲ ಪ್ರವಾಸ ಹೋಗುವುದನ್ನು ಹವ್ಯಾಸವಾಗಿಸಿಕೊಂಡಿದ್ದು, ಅದರಂತೆ ಈ ಬಾರಿ ಊಟಿಗೆ ತೆರಳಿ ಬಳಿಕ ಮಡಿಕೇರಿಯಲ್ಲಿ ಕೆಲವು ದಿನಗಳ ಕಾಲ ತಂಗಲು ಬಂದಿದ್ದರು.
ಹೀಗಾಗಿ ಮಡಿಕೇರಿ ನಗರದ ಈಶ್ವರ ನಿಲಯ ಎಂಬ ಹೋಂ ಸ್ಟೇಯಲ್ಲಿ ಶನಿವಾರ (ಏ.5) ರ ರಾತ್ರಿ ತಂಗಿದ್ದರು. ಈ ವೇಳೆ ನಸುಕಿನ ಜಾವ 3 ಗಂಟೆ ಸುಮಾರಿಗೆ ಹೋಂಸ್ಟೇ ನಿರ್ವಾಹಕ ಪ್ರವೀಣ್ ಎಂಬಾತ ತನ್ನ ಮತ್ತೊಬ್ಬ ಸಹಚರನೊಂದಿಗೆ ಬಂದು ಮಮತಾ ಅವರು ಇದ್ದ ಕೋಣೆಯ ಬಾಗಿಲು ಬಡಿದಿದ್ದಾನೆ. ಬಾಗಿಲು ತೆಗೆಯುವಂತೆ ಕಿರುಚಿದ್ದಾನೆ. ಇಬ್ಬರು ಮಹಿಳೆಯರೇ ಇದ್ದಿದ್ದರಿಂದ ಅವರು ಬಾಗಿಲು ತಗೆದಿಲ್ಲ.
ಆದರೆ, ಹಠ ಬಿಡದ ಪ್ರವೀಣ್ ನಾಲ್ಕು ಗಂಟೆಯವರೆಗೂ ಬಾಗಿಲು ಬಡಿದು ಬೆದರಿಕೆ ಹಾಕಿದ್ದಾನೆ. ಬಾಗಿಲು ತಗೆಯದೆ ಇದ್ದರೇ ಬಾಗಿಲು ಮುರಿದು ಒಳಗೆ ಬರುವುದಾಗಿ ಬೆದರಿಸಿದ್ದಾನೆ. ಮಮತಾ ತೀವ್ರ ಭಯಗೊಂಡು ಬಾಗಿಲನ್ನು ಇನ್ನಷ್ಟು ಭದ್ರ ಮಾಡಿಕೊಂಡು ತೆಗೆಯದೆ ಒಳಗೇ ಉಳಿದಿದ್ದಾರೆ.
ಇನ್ನು ಬೆಳಕಾದ ಮೇಲೆ ಬಾಗಿಲು ತೆಗೆದು ಹೊರಗೆ ಬಂದು ತಮ್ಮ ಕಾರನ್ನು ನೋಡಿರೆ ಕಾರಿನ ನಾಲ್ಕೂ ಚಕ್ರಗಳನ್ನು ಡ್ಯಾಮೇಜ್ ಮಾಡಿ ಗಾಳಿ ತೆಗೆದಿದ್ದಾರೆ ಕಿರಾತಕರು. ಇದರಿಂದಲೂ ಕೋಪಗೊಂಡ ಮಮತಾ, ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಪ್ರವೀಣ್ ಮತ್ತು ಆತನ ಸಹಚರ ಬಾಬು ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇನ್ನು ಹೋಂಸ್ಟೇ ಮಾಲೀಕ ಕಾವೇರಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಇತ್ತ ಆರೋಪಿ ಪ್ರವೀಣ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಮೇಲೆ ಈಗಾಗಲೇ ರೌಡಿಶೀಟರ್ ತೆರೆಯಲಾಗಿದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ತಿಳಿಸಿದ್ದಾರೆ. ಸದ್ಯ, ಈ ಹೋಂಸ್ಟೇಯ ಲೈಸೆನ್ಸ್ ರದ್ದತಿ ಮಾಡಲು ಪೊಲಿಸ್ ಇಲಾಖೆ ಪ್ರವಾಸೋಧ್ಯಮ ಇಲಾಖೆಗೆ ಪತ್ರ ಬರೆದಿದೆ.
ಇನ್ನು ಕೊಪ್ಪಳದಲ್ಲಿ ಪ್ರವಾಸಿಗರ ಮೇಲೆ ದೌರ್ಜನ್ಯ ನಡೆದ ಬಳಿಕ ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಗರಿಷ್ಟ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೂಚಿಸಿದ್ದರು. ಪ್ರವಾಸಿಗರಿಗೆ ಹೋಂಸ್ಟೇ ನಿರ್ವಾಹಕರು ಈ ರೀತಿ ಹಿಂಸೆ ನೀಡಿದ್ರೆ ಪ್ರವಾಸಕ್ಕೆ ಬರುವುದಾದರೂ ಹೇಗೆ ಎಂಬ ಪ್ರಶ್ನೆ ಪ್ರವಾಸಿಗರನ್ನು ಕಾಡುತ್ತಿದೆ.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...