ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್.ಟಿ.ನಗರದ ಮುತ್ತಪ್ಪ ಬ್ಲಾಕ್ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ಬಜೆಟ್ ಪ್ರತಿ ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು: 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.
ಹಣಕಾಸು ಇಲಾಖೆ ಅಧಿಕಾರಿಗಳಾದ ಐ.ಎಸ್.ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.