NEWSನಮ್ಮರಾಜ್ಯರಾಜಕೀಯ

ಬಜೆಟ್ ಒಟ್ಟು ಗಾತ್ರ 3,09,182 ಕೋಟಿ ರೂ. ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಬಜೆಟ್ ಇದಾಗಿದೆ: ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ರಾಜ್ಯ ಬಜೆಟ್‌-2023-24: ರೈತರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದಾರೆ. ಆದರೆ ಕೊಟ್ಟ 600 ಭರವಸೆಗಳಲ್ಲಿ ಕನಿಷ್ಠ 50ನ್ನೂ ಪೂರೈಸಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಆರೋಪದ ನಡುವೆಯೇ ಇಂದು ಬಜೆಟ್‌ ಮಂಡನೆ ಮಾಡಿದ ಸಿಎಂ ಬೊಮ್ಮಾಯಿ ಅವರು, ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಬಜೆಟ್ ಇದಾಗಿದೆ ಎಂದು ಇಂದಿನ ಬಜೆಟ್​ನಲ್ಲಿ ವ್ಯಾಖ್ಯಾನಿಸಿದರು.

ಇದಿಷ್ಟೇ ಅಲ್ಲದೆ  ರೈತರಿಗೆ ಈ ಮೊದಲು ಕೊಡುತ್ತಿರುವ 3 ಲಕ್ಷ ರೂ.ಗಳ ಶೂನ್ಯ ಬಡ್ಡಿ ದರದ ಸಾಲವನ್ನು ಈಗ 5 ಲಕ್ಷಕ್ಕೆ ಏರಿಕೆ ಮಾಡಿ ಸಿಎಂ ಘೋಷಣೆ ಮಾಡಿದರು. ಇದು ಸೇರಿದಂತೆ ಬಜೆಟ್‌ನಲ್ಲಿ ಏನೆಲ್ಲ ಘೋಷಣೆ ಮಾಡಿದ್ದಾರೆ ಎಂಬುದರ ಪೂರ್ಣ ವಿವರವನ್ನು  ವಿಜಯಪಥ ನಿಮಗಾಗಿ ಕೊಡುತ್ತಿದೆ.

ರೈತರಿಗೆ ಬಂಪರ್ ಗಿಫ್ಟ್, ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ. ಆಡಳಿತ-ವಿಪಕ್ಷಗಳ ಮಾತಿನ ಚಕಮಕಿಯ ನಡುವೆಯೇ ಬಜೆಟ್ ಓದಲು ಆರಂಭಿಸಿದ ಸಿಎಂ ಬೊಮ್ಮಾಯಿ, ಎರಡನೇ ಬಜೆಟ್ ಮಂಡಿಸುತ್ತಿದ್ದು ಬಜೆಟ್‌ನ ಒಟ್ಟು ಗಾತ್ರ 3,09,182 ಕೋಟಿ ರೂ.ಗಳು ಇದೆ.

ಈ ನಡುವೆ ಬಜೆಟ್ ಮಂಡನೆಗೆ ವಿಪಕ್ಷಗಳ ಅಡ್ಡಿಪಡಿಸಿದವು. ಇದನ್ನು ಮನಗಂಡು ವಿಪಕ್ಷಗಳ ನಾಯಕರನ್ನು ಸಮಾಧಾನಪಡಿಸಲು ಸ್ಪೀಕರ್ ಕಾಗೇರಿ ಹರಸಾಹಸ ಪಟ್ಟರು. ಸಿಎಂ ಅವರು ಬಜೆಟ್ ಓದಲಿ, ಅದಕ್ಕೆ ಅವಕಾಶ ಮಾಡಿಕೊಡಿ ಎಂದು ಹೇಳಿದರು.

ಈ ನಡುವೆ ಕಾಂಗ್ರೆಸ್‌ ಶಾಸಕರು ಕಿವಿಯ ಮೇಲೆ ಹೂಗಳನ್ನು ಇಟ್ಟುಕೊಂಡು ಬಂದು ರಾಜ್ಯದ ಜನರ ಕಿವಿ ಮೇಲೆ ಹೂವಿಡ್ತಿದ್ದಾರೆ ಬೊಮ್ಮಾಯಿ ಎಂದು ಕಾಲೆಳೆದು ಅದಕ್ಕೆ  ಸಿದ್ದರಾಮಯ್ಯ ಕೂಡ ಸಾಥ ನೀಡಿದರು.  ಇದರ ನಡುವೆಯೇ ಬಜೆಟ್‌ ಮಂಡಿಸಿದ ಸಿಎಂ ದೇವಸ್ಥಾನಗಳು ಮತ್ತು ಮಠಗಳ ಜೀರ್ಣೋದ್ಧಾರಕ್ಕೆ ಒಂದು ಸಾವಿರ ಕೋಟಿ ರೂ. ಘೋಷಣೆ ಮಾಡಿದರು.

ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಗಿ, ಕುಚಲಕ್ಕಿ ಖರೀದಿಗೆ ಕೇಂದ್ರ ಸ್ಥಾಪನೆ ಮಾಡಲಾಗುವುದು. ತೊಗರಿ, ಅಡಕೆಗೆ ರೋಗ ಬಂದಾಗ ಸರ್ಕಾರದ ಸಹಾಯ ನೀಡಲಾಗಿದೆ. ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗಿದೆ. ಆರೋಗ್ಯ ಕೇಂದ್ರಗಳ ಉನ್ನತೀಕರಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಮುಂದುವರಿಯುತ್ತಿದೆ…

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?