BMTC & KSRTC- ಕನಿಷ್ಠ ಪಿಂಚಣಿಗಾಗಿ ಇಷ್ಟರಲ್ಲೇ ನಿವೃತ್ತ ನೌಕರರ ಬೃಹತ್ ಪ್ರತಿಭಟನೆ: ಜೆಎಸ್ಎಂ ಸ್ವಾಮಿ

- ಇಪಿಎಸ್ ಪಿಂಚಣಿದಾರರ 87ನೇ ಮಾಸಿಕ ಸಭೆಯಲ್ಲಿ ಘೋಷಣೆ
ಬೆಂಗಳೂರು: ಸದ್ಯದಲ್ಲೇ ನಿವೃತ್ತ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಎನ್ಎಸಿ ರಾಜ್ಯಾಧ್ಯಕ್ಷ ಜೆಎಸ್ಎಂ ಸ್ವಾಮಿ ತಿಳಿಸಿದ್ದಾರೆ.
ಏ.6ರ ಶ್ರೀ ರಾಮನವಮಿಯಂದು ಲಾಲ್ ಬಾಗ್ ಆವರಣದಲ್ಲಿ ಆಯೋಜಿಸಿದ್ದ ಇಪಿಎಸ್ ಪಿಂಚಣಿದಾರರ 87ನೇ ಮಾಸಿಕ ಸಭೆಯಲ್ಲಿ ಮಾತನಾಡಿದರು.
ಇಪಿಎಸ್ ನಿವೃತ್ತರ ಪ್ರಮುಖ ಬೇಡಿಕೆ ₹7,500 + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ, ಇಪಿಎಸ್ ವ್ಯಾಪ್ತಿಯಲ್ಲಿ ಬರುವ ನಿವೃತ್ತರಿಗೆ ₹5,000 ಇದಕ್ಕೆ ನಾವು ಬದ್ಧ ಎಂದ ಜೆಎಸ್ಎಂ ಸ್ವಾಮಿ, ಎಲ್ಲ ಇಪಿಎಸ್ ನಿವೃತ್ತರನ್ನು ಸೇರಿಸಿ, ಬೃಹತ್ ಪ್ರತಿಭಟನಾ ಸಭೆಯನ್ನು ಇಷ್ಟರಲ್ಲಿಯೇ ಬೆಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು
ಇನ್ನು ಕಳೆದ ಏಳೆಂಟು ವರ್ಷಗಳಿಂದ ದೇಶಾದ್ಯಂತ ಇಪಿ ಎಸ್ ನಿವೃತ್ತರು ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಸಿಗದೇ ಇರುವುದಕ್ಕೆ ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಬೇಸರ ವ್ಯಕ್ತಪಡಿಸಿದರು.
ನಮ್ಮ ಎಲ್ಲ ಸಂಘಟನೆಗಳ ಸದಸ್ಯರು ಈ ಸಭೆಯಕಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹೋರಾಟವನ್ನು ತೀವ್ರಗೊಳಿಸೋಣ ಜತೆಗೆ ಅದು ಪರಿಣಾಮಕಾರಿ ಪ್ರತಿಭಟನೆಯನ್ನಾಗಿ ರೂಪಿಸೋಣ ಎಂದು ಕರೆ ನೀಡಿದರು. ಈ ವೇಳೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಮುಂದುವರಿದು ಮಾತನಾಡುತ್ತಾ, ಮತ್ತೊಂದು ಕಡೆ ಕಾನೂನು ಸಮರಕ್ಕೂ ನಾವು ಸಿದ್ಧರಿರಬೇಕು ಎಂದು ತಿಳಿಸಿದರು.
ಪ್ರತಿಯೊಂದು ಕ್ಷೇತ್ರಗಳಲ್ಲಿಯೂ, ಇಪಿಎಸ್ ನಿವೃತ್ತರು ತಮ್ಮ ಸಂಸದರಿಗೆ ಮನವಿ ಪತ್ರ ನೀಡಿ, ನಿವೃತ್ತರ ಪರ ಅಹವಾಲನ್ನು ಸಂಸತ್ನಲ್ಲಿ ಮಂಡಿಸುವಂತೆ, ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಬೇಸರ ವ್ಯಕ್ತಪಡಿಸಿದರು.
ಸಂಘದ ಖಜಾಂಚಿ ಡೋಲಪ್ಪ, ಪದಾಧಿಕಾರಿಗಳಾದ ನಾಗರಾಜು, ಮನೋಹರ್ ರುಕ್ಮೇಶ್ ಹಾಗೂ ರಮೇಶ್ ಸೇರಿದಂತೆ 200ಕ್ಕೂ ಹೆಚ್ಚು ನಿವೃತ್ತ ನೌಕರರು ಭಾಗವಹಿಸಿದರು.
ಮಾಸಿಕ ಸಭೆ ಹಾಗೂ ಶ್ರೀರಾಮನವಮಿ ಒಟ್ಟಾಗಿ ಬಂದಿದ್ದು, ತಾವು ಸೇವೆಯಲ್ಲಿರುವಾಗ ಹಬ್ಬ ಹರಿದಿನಗಳೆನ್ನದೆ, ಕರ್ತವ್ಯ ನಿರ್ವಹಿಸಿದ ದಿನಗಳನ್ನು ಮೆಲಕು ಹಾಕುತ್ತಾ, ನಿವೃತ್ತರು ಲಾಲ್ ಬಾಗ್ ಆವರಣದಲ್ಲಿ ವಾಯು ವಿಹಾರ ನಡೆಸುತ್ತಾ, ತಮ್ಮ ಹಳೆಯ ಸಹೋದ್ಯೋಗಿಗಳನ್ನು ಕಂಡೊಡನೆ ನವೊಲ್ಲಾಸದಿಂದ, ಉಭಯ ಕುಶಲೊಪರಿ ವಿಚಾರಿಸಿದ ಬಳಿಕ ಸಭೆಗೆ ಹಾಜರಾದರು.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...