CrimeNEWSದೇಶ-ವಿದೇಶ

ಕಾರು ಚಲಾಯಿಸುತ್ತಿದ್ದ ಅಜ್ಜಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಮೊಮ್ಮಗಳು – ಅಜ್ಜಿ ಸಾವು

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ಚಲಿಸುತ್ತಿದ್ದ ಕಾರಿನಲ್ಲಿ ಆರು ವರ್ಷದ ಬಾಲಕಿ ತನ್ನ ಅಜ್ಜಿಗೆ ಗುಂಡು ಹಾರಿಸಿದ ಪರಿಣಾಮ ಅಜ್ಜಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ಸಂಭವಿಸಿದೆ.

6 ವರ್ಷದ ಮೊಮ್ಮಗಳು ಕಾರಿನ ಹಿಂಭಾಗದ ಸೀಟಿನಲ್ಲಿ ಬಂದೂಕು ಹಿಡಿದುಕೊಂಡು ಕೂತಿದ್ದಾಗ ಆಕಸ್ಮಿಕವಾಗಿ ಒಂದು ಗುಂಡು ಹಾರಿಸಿದ್ದಾಳೆ. ಈ ವೇಳೆ ತನ್ನ 57 ವರ್ಷದ ಅಜ್ಜಿಗೆ ಆ ಗುಂಡು ಬಿದ್ದಿದ್ದು ಅವರು ಅಸುನೀಗಿದ್ದಾರೆ ಎಂದು ಫ್ಲೋರಿಡಾ ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕವಾಗಿ ಒಂದು ಗುಂಡು ಹಾರಿಸಿದ್ದರಿಂದ ಕಾರು ಓಡಿಸುತ್ತಿದ್ದ ತನ್ನ ಅಜ್ಜಿಯ ಬೆನ್ನಿಗೆ ಗುಂಡೇಟು ತಗುಲಿದೆ. ಆದರೂ ಅಜ್ಜಿ ಸುಧಾರಿಸಿಕೊಳ್ಳುತ್ತಲೇ ತುರ್ತು ಸಹಾಯವಾಣಿ ಸಂಖ್ಯೆ 911ಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಹಾಯವಾಣಿ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದರಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಉತ್ತರ ಬಂದರು ಪೊಲೀಸರು ಹೇಳಿದ್ದಾರೆ.

ಬಾಲಕಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮಕ್ಕಳ ರಕ್ಷಣಾ ಕೇಂದ್ರದ ಅಧಿಕಾರಿಗಳು ಮಗುವಿನ ವಿಚಾರಣೆ ನಡೆಸಿದ್ದು, ತನಿಖೆಯಲ್ಲಿ ಇದೊಂದು ಆಕಸ್ಮಿಕ ಘಟನೆ ಎಂಬುದು ತಿಳಿದುಬಂದಿದೆ.

ಈ ಘಟನೆಗೆ ಪೊಲೀಸ್ ಮುಖ್ಯಸ್ಥ ಟಾಡ್ ಗ್ಯಾರಿಸನ್ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಬಂದೂಕು ಸುರಕ್ಷತೆಯ ಪ್ರಾಮುಖ್ಯತೆ ವಹಿಸದಿರುವುದರಿಂದ ನಡೆದುವ ಘಟನೆಯಾಗಿದ್ದು ಇದೊಂದು ದುರದೃಷ್ಟಕರ ಸಂಗತಿಯಾಗಿದೆ. ಮಕ್ಕಳ ಕೈಗೆ ಬಂದೂಕು ಸಿಗದಂತೆ ಎಚ್ಚರ ವಹಿಸಬೇಕು ಘಟನೆಯನ್ನು ನಿದರ್ಶನವಾಗಿರಿಸಿಕೊಂಡು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ