Crimeಕೃಷಿ

ಬೆಳೆ ಪರಿಹಾರ ಅವ್ಯವಹಾರದಲ್ಲಿ ಭಾಗೀಯಾದ 11 ಜನರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅತಿವೃಷ್ಟಿ ನೆರೆಯಿಂದ ಹಾನಿಯಾದ ಬೆಳೆಪರಿಹಾರ ವಿತರಣೆಯ ಅವ್ಯವಹಾರ ಕುರಿತಂತೆ ಪೊಲೀಸ್ ತನಿಖೆ ಮುಂದುವರಿದಿದ್ದು, ಈವರೆಗೆ ಅವ್ಯವಹಾರದಲ್ಲಿ ಭಾಗೀಯಾದ ಆರೋಪದ ಮೇಲೆ 11 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ನೆರೆ ಪರಿಹಾರದಲ್ಲಿ ಈವರೆಗೆ 18ರಿಂದ 20 ಕೋಟಿ ರೂ.ಗಳಷ್ಟು ಅವ್ಯವಹಾರ ನಡೆದಿರುವುದು ಅಂದಾಜಿಸಲಾಗಿದೆ. ಬೆಳೆಪರಿಹಾರ ಮಾದರಿಯಲ್ಲಿ ವಸತಿ ಯೋಜನೆ ಪರಿಹಾರದಲ್ಲಿ ಲೋಪವಾಗಿದೆಯಾ ಎಂಬುದನ್ನು ಪರಿಶೀಲಿಸಲು ಪ್ರಾದೇಶಿಕ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ತಂಡ ರಚಿಸಿದ್ದಾರೆ ಎಂದು ವಿವರಿಸಿದರು.

ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ 4.38 ಎಕರೆವರೆಗೆ ಒಂದು ಖಾತೆಗೆ ಪರಿಹಾರ ಒದಗಿಸಬೇಕು. ಇದಕ್ಕಿಂತ ಹೆಚ್ಚುವ ಹಿಡುವಳಿ ಹೊಂದಿದವರ ಜಮೀನು ವಿಭಾಗೀಸಿ ಬೇರೆ ಬೇರೆ ಆಧಾರ್ ಸಂಖ್ಯೆ ಜೋಡಿಸಿ ಹಣ ಬೇರೆ ಬೇರೆಯವರಿಗೆ ಹಣ ಪಾವತಿಯಾಗಿರುವುದು ಕಂಡುಬಂದಿದೆ. ಬಹುಪಾಲು ಪ್ರಕರಣಗಳಲ್ಲಿ ಪ್ರಕೃತಿ ವಿಕೋಪ ಕಾಯ್ದೆಯಡಿ ನಿಯಮಾನುಸಾರ ಪರಿಹಾರ ವಿತರಿಸುವ ಮೊದಲು ನಮೂನೆ 1ರಲ್ಲಿ ಜಮೀನು ಪರಿಶೀಲಿಸಿ ರೈತರು ಬೆಳೆದ ಬೆಳೆಯ ಮಾಹಿತಿ, ಹಿಡುವಳಿ ಮಾಹಿತಿಯನ್ನು ನಿರ್ವಹಣೆಮಾಡಿರುವುದಿಲ್ಲ.

ಸೊನ್ನೆಯಿಂದ 1.5 ಮ್ಯಾಚ್ ಸ್ಕೋರ್ ಕಡಿಮೆ ಇರುವ 23,468 ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣಗಳಲ್ಲಿ ಪರಿಹಾರವಾಗಿ 36.49 ಕೋಟಿ ರೂ. ಹಣ ಪಾವತಿಯಾಗಿದೆ. 0 ದಿಂದ 1.5 ಮ್ಯಾಚ್ ಸ್ಕೋರ್ ಹೊಂದಿರುವ ಪ್ರಕರಣಗಳ ಪರಿಶೀಲನೆಗೆ ಹಿಂದಿರುಗಿಸಿ ಪರಿಶೀಲನೆ ನಡೆಸುವ ಅವಕಾಶವಿದ್ದರೂ ಗ್ರಾಮ ಲೆಕ್ಕಾಧಿಕಾರಿಗಳು ಯಾವುದೇ ಆಕ್ಷೇಪಣೆ ಇಲ್ಲದೆ ಪರಿಶೀಲನೆಗೂ ಹಿಂದಿರುಗಿಸದೆ ಅಪ್ರೂಲ್ ಮಾಡಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 3,71,459  ಹೆಕ್ಟೇರ್ ಬಿತ್ತನೆಯಾಗಿದೆ. ಈ ಪೈಕಿ 3,10,537 ಹೆಕ್ಟೇರ್ ಬೆಳೆ ನಷ್ಟವಾಗಿದೆ. ಈವರೆಗೆ ಬೆಳೆನಷ್ಟ  ಪರಿಹಾರವಾಗಿ 202,01,76,625 ರೂ. ಪಾವತಿಸಲಾಗಿದೆ. 105 ಕೋಟಿ  ರೂ. ವಸತಿಗಾಗಿ ಬಿಡುಗಡೆಯಾಗಿದೆ. (ಸರ್ಕಾರದಿಂದ 95 ಕೋಟಿ ರೂ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 10 ಕೋಟಿ ರೂ.) ಮೂಲಭೂತ ಸೌಕರ್ಯಗಳಿಗಾಗಿ 35 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ