CrimeNEWSರಾಜಕೀಯ

ವಿಧಾನಸೌಧದಲ್ಲಿ ಇಂಜಿನಿಯರ್‌ ಜಗದೀಶ್‌ ಬಳಿ ಪತ್ತೆಯಾಗಿದ್ದ 10 ಲಕ್ಷ ರೂ.ಗಳ ಮೂಲ ಸಿಕ್ಕಿದೆ ಎಂದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಲೋಕೋಪಯೋಗಿ ಸಹಾಯಕ ಇಂಜಿನಿಯರ್‌ ಜಗದೀಶ್‌ ಬಳಿ ಪತ್ತೆಯಾಗಿದ್ದ 10 ಲಕ್ಷ ರೂಪಾಯಿಯ ಮೂಲ ಪತ್ತೆಯಾಗಿದೆ. ಜಗದೀಶ್‌ ಅವರು ಮೂವರು ವ್ಯಕ್ತಿಗಳಿಂದ ಈ ಹಣವನ್ನು ಸಾಲವಾಗಿ ಪಡೆದಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಚೆಕ್‌ಬೌನ್ಸ್‌ ಪ್ರಕರಣವೊಂದರಲ್ಲಿ ಸಿಲುಕಿದ್ದ ಜಗದೀಶ್‌ ಅವರು ಇದರಿಂದ ಹೊರಬರುವ ಸಲುವಾಗಿ ಗುತ್ತಿಗೆದಾರರಿಂದ 5 ಲಕ್ಷ ರೂ. ಅನ್ನು ತಮ್ಮ ಸಹೋದ್ಯೋಗಿಯಿಂದ, 3.50 ಲಕ್ಷ ರೂ. ಹಾಗೂ ಸ್ನೇಹಿತರಿಂದ 1.50 ಲಕ್ಷ ರೂ. ಸಾಲ ಪಡೆದಿದ್ದರು. ಅದನ್ನು ಸಾಲಗಾರರಿಗೆ ಕೊಡಲು ಹೋಗುವಾಗ ಮಾರ್ಗ ಮಧ್ಯೆ ಕಾರ್ಯ ನಿಮಿತ್ತ ವಿಧಾನಸೌಧಕ್ಕೆ ಬಂದಾಗ ಪೊಲೀಸರ ತಪಾಸಣೆಯ ವೇಳೆ ಹಣ ಪತ್ತೆಯಾಗಿತ್ತು.

ವಿಚಾರಣೆ ವೇಳೆ ಜಗದೀಶ್‌ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಚೆಕ್‌ ಬೌನ್ಸ್‌ ಹಾಗೂ ಬ್ಯಾಂಕ್‌ನ ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಇದರ ಜತೆಗೆ ಜಗದೀಶ್‌ಗೆ ಸಾಲವಾಗಿ ಹಣ ನೀಡಿದವರ ಹೇಳಿಕೆ ದಾಖಲಿಸಿಕೊಂಡಿದ್ದು, ಶೀಘ್ರದಲ್ಲೇ ಪ್ರಕರಣಕ್ಕೆ ಅಂತ್ಯ ಹಾಡಲಿದ್ದಾರೆ ಎನ್ನಲಾಗಿದೆ.

ಅಂದು 10 ಲಕ್ಷ ರೂ. ನಗದು ಪತ್ತೆಯಾಗಿತ್ತು: ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್‌ ಜಗದೀಶ್‌ ಜನವರಿ 4ರಂದು ಸಂಜೆ ವಿಧಾನಸೌಧದ ಪಶ್ಚಿಮ ದ್ವಾರದ ಮುಖಾಂತರ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಕಾರನ್ನು ತಪಾಸಣೆ ಮಾಡಿದಾಗ 10 ಲಕ್ಷ ರೂ. ನಗದು ಪತ್ತೆಯಾಗಿತ್ತು.

ಈ ವೇಳೆ ಆ ಹಣವನ್ನು ಜಪ್ತಿ ಮಾಡಿದ್ದ ಪೊಲೀಸರು, ಹಣದ ಮೂಲದ ಕುರಿತಾಗಿ ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಜಗದೀಶ್‌ ನೀಡಿರಲಿಲ್ಲ. ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ