ಬೆಂಗಳೂರು: ಭಾರಿ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.73.45ರಷ್ಟು ಪರೀಕ್ಷಾರ್ಥಿ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು (ಏ.8) ಫಲಿತಾಂಶ ಕುರಿತು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ವಿವರಿಸಿದರು.
ಇನ್ನು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ (85.36%) ಪಡೆದುಕೊಂಡಿದೆ. ಕೊನೆ ಸ್ಥಾನದಲ್ಲಿ ಯಾದಗಿರಿ( 73.45%) ಇದೆ ಎಂದ ಅವರು, ಮಧ್ಯಾಹ್ನ 1:30 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.
ಕಲಾ ವಿಭಾಗ: ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ 600ಕ್ಕೆ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಬಳ್ಳಾರಿಯ ನಿರ್ಮಾಲಾ 596 ಅಂಕಗಳನ್ನು ಪಡೆದು ರಾಜ್ಯಕ್ಕೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್?
ಉನ್ನತ ಶ್ರೇಣಿ- 1,00,571
ಪ್ರಥಮ ದರ್ಜೆ- 2,78,054
ದ್ವೀತಿಯ ದರ್ಜೆ-70969
ತೃತೀಯ ದರ್ಜೆ-18845
ಜಿಲ್ಲಾವಾರು ಫಲಿತಾಂಶ: ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ, ಶಿವಮೊಗ್ಗ ಜಿಲ್ಲೆ 79.91, ಬೆಂಗಳೂರು ಗ್ರಾಮಾಂತರ ಜಿಲ್ಲೆ 79.70, ಚಿಕ್ಕಮಗಳೂರು ಜಿಲ್ಲೆ 79.56, ಹಾಸನ ಜಿಲ್ಲೆ 77.56ರಷ್ಟು ಫಲಿತಾಂಶ, ಚಿಕ್ಕಬಳ್ಳಾಪುರ ಜಿಲ್ಲೆ 75.80, ಮೈಸೂರು ಜಿಲ್ಲೆ 74.30ರಷ್ಟು ಫಲಿತಾಂಶ.
ಚಾಮರಾಜನಗರ ಜಿಲ್ಲೆ 73.97, ಮಂಡ್ಯ ಜಿಲ್ಲೆ 73.27ರಷ್ಟು ಫಲಿತಾಂಶ, ಬಾಗಲಕೋಟೆ ಜಿಲ್ಲೆ 72.83, ಕೋಲಾರ ಜಿಲ್ಲೆ 72.45ರಷ್ಟು ಫಲಿತಾಂಶ, ಧಾರವಾಡ ಜಿಲ್ಲೆ 72.32, ತುಮಕೂರು ಜಿಲ್ಲೆ 72.02ರಷ್ಟು ಫಲಿತಾಂಶ, ರಾಮನಗರ ಜಿಲ್ಲೆ 69.71, ದಾವಣಗೆರೆ ಜಿಲ್ಲೆ 69.45ರಷ್ಟು ಫಲಿತಾಂಶ, ಹಾವೇರಿ ಜಿಲ್ಲೆ 76.56, ಬೀದರ್ ಜಿಲ್ಲೆ 67.31ರಷ್ಟು ಫಲಿತಾಂಶ ಬಂದಿದೆ.
ಕೊಪ್ಪಳ ಜಿಲ್ಲೆ 67.20, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 66.76ರಷ್ಟು ಫಲಿತಾಂಶ, ಗದಗ ಜಿಲ್ಲೆ 66.64, ಬೆಳಗಾವಿ ಜಿಲ್ಲೆ 65.37ರಷ್ಟು ಫಲಿತಾಂಶ, ಬಳ್ಳಾರಿ ಜಿಲ್ಲೆ 64.41, ಚಿತ್ರದುರ್ಗ ಜಿಲ್ಲೆ 59.87ರಷ್ಟು ಫಲಿತಾಂಶ, ವಿಜಯಪುರ ಜಿಲ್ಲೆ 58.81, ರಾಯಚೂರು ಜಿಲ್ಲೆ 58.75ರಷ್ಟು ಫಲಿತಾಂಶ ಕಲಬುರಗಿ ಜಿಲ್ಲೆ 55.70, ಯಾದಗಿರಿ ಜಿಲ್ಲೆ 48.45ರಷ್ಟು ಫಲಿತಾಂಶ ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಆ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. 3,45,694 ಬಾಲಕಿಯರು ಪರೀಕ್ಷೆ ಬರೆದಿದ್ದರು ಅದರಲ್ಲಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...