CrimeNEWSನಮ್ಮಜಿಲ್ಲೆ

ವಿಧವೆ, ಅಪ್ರಾಪ್ತೆ ಮೇಲೆ ಹಲ್ಲೆಗೈದ ಆರೋಪಿಗಳ ಬಂಧಿಸುವಲ್ಲಿ ಉಡಾಫೆ ತೋರುತ್ತಿರುವ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಅಥಣಿ: ಜಮೀನಿನ ಸಂಬಂಧ ಒಬ್ಬ ವಿಧವೆ ಹಾಗೂ ಆಕೆಯ ಮಗಳನ್ನು ಸಂಬಂಧಿಕರೇ ಅರೆಬೆತ್ತಲೆಗೊಳಿಸಿ ಥಳಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಕುರಿತು ಹಲ್ಲೆಕೋರರ ವಿರುದ್ದ ದೂರು ನೀಡಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದೆ ಹಲ್ಲೆಕೋರರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದ ನಿವಾಸಿ ವಿಧವೆ ಶಾಂತವ್ವ ನಾಗಪ್ಪ ಮಾಂಗ ಎಂಬ ಮಹಿಳೆ ಹಾಗೂ ಆಕೆಯ ಪುತ್ರಿ ಹಲ್ಲೆಗೊಳಗಾದವರು.

ಕಳೆದ ಮೂರು ದಿನಗಳ ಹಿಂದೆ ಶಾಂತವ್ವ ನಾಗಪ್ಪ ಮಾಂಗ್ ಅವರ ಜಮೀನು ವಶಪಡಿಸಿಕೊಳ್ಳಲು ಗಂಡನ ಅಣ್ಣತಮ್ಮಂದಿರಾದ ಲಕ್ಕಪ್ಪ ಬಾಬು ಮಾಂಗ, ಭೀಮಪ್ಪ ಲಕ್ಕಪ್ಪ ಮಾಂಗ, ಹಣಮಂತ ಲಕ್ಕಪ್ಪ ಮಾಂಗ ಎಂಬುವವರು ಸಂತ್ರಸ್ತೆ ಶಾಂತವ್ವ ಹಾಗೂ ಅಪ್ರಾಪ್ತ ಮಗಳ ಮೇಲೆ ಹಲ್ಲೆ ಆಂಡಿದ್ದಾರೆ.

ಈ ವೇಳೆ ಎದೆಗೆ ಕೈ ಹಾಕಿ, ಜಡೆ ಹಿಡಿದು ಬಡಿಗೆಯಿಂದು ಬಡಿದು ಹಲ್ಲೆ ಮಾಡಿದ್ದಾರೆ. ಇದರಿಂದ ಕಳೆದ ಮೂರು ದಿನದಿಂದ ಪ್ರಜ್ಞೆ ತಪ್ಪಿದ್ದಾಳೆ. ಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ದಿನಗಳು ಕಳೆದಿವೆ. ಆದರೂ ಈವರೆಗೂ ಆರೋಪಿಗಳು ಪೊಲೀಸ್ ಠಾಣೆ ಸುತ್ತಮುತ್ತ ತಿರುಗುತ್ತಿದ್ದರೂ ಸಹ ಅವರನ್ನು ಬಂಧಿಸದೆ ಪರಾರಿಯಾಗಲು ಬಿಟ್ಟಿದ್ದಾರೆ ಎಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಇನ್ನು ಹಲ್ಲೆಗೊಳಗಾದ ಅಪ್ರಾಪ್ತ ಪುತ್ರಿ ಹಾಗೂ ಸಂತ್ರಸ್ತೆಯ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಜವಾಗಿಯೂ ಪೊಲೀಸ್ ಇಲಾಖೆ ಆರೋಪಿತರನ್ನು ರಕ್ಷಿಸುತ್ತಿದೆಯಾ? ಹಾಗೂ ಮಹಿಳಾ ಆಯೋಗ ಏನ್ಮಾಡ್ತಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ರಕ್ಷಕರೇ ಈ ರೀತಿ ಭಕ್ಷಕರಾದರೆ ನೊಂದವರು ಯಾರ ಬಳಿ ಹೋಗಬೇಕು ಎಂದು ಗ್ರಾಮಸ್ಥರು ಭಯದಲ್ಲೇ ಫ್ರಶ್ನಿಸುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ