NEWSನಮ್ಮಜಿಲ್ಲೆ

ನಾಳೆ ರಾಜಧಾನಿ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸಲು ಸಜ್ಜಾದ ಬಿಎಂಟಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಾಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದೆ.

ಮಹಿಳಾ ದಿನಾಚರಣೆಯಾದ ನಾಳೆ ಅಂದರೆ ಮಾ.8ರಂದು ಮಹಿಳೆಯರಿಗೆ ಒಂದು ವಿಶೇಷ ರೀತಿಯಲ್ಲಿ ಸರ್ಕಾರ ಯೋಜನೆ ರೂಪಿಸಬೇಕು ಎಂದು ಊಹಿಸಿತು. ಅದರಂತೆ ನಾಳೆ ಬಸ್‌ನಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಮಹಿಳೆಯರು  ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಹೀಗಾಗಿ ನಾಳೆ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಎಲ್ಲಿಗೆ ಪ್ರಯಾಣಿಸಿದರೂ ಹಣ ನೀಡುವ ಅಗತ್ಯವಿಲ್ಲ. ಮಹಿಳಾ ಪ್ರಯಾಣಿಕರನ್ನು ಉತ್ತೇಜಿಸುವ ಉದ್ದೇಶದಿಂದ ಬಿಎಂಟಿಸಿ ಈ ಪ್ಲಾನ್ ಮಾಡಿರುವುದಾಗಿ ಸಂಸ್ಥೆ ಹೇಳಿದೆ. ಇನ್ನು ರಾಜಧಾನಿಯಲ್ಲಿ 40,86,580 ಮಹಿಳೆಯರಿದ್ದು, ಪ್ರತಿದಿನ 10,21,645 ಜನರು ಪ್ರಯಾಣ ಮಾಡುತ್ತಾರೆ. ಮಾರ್ಚ್ 8ರಂದು ಉಚಿತ ಪ್ರಯಾಣ ಹಿನ್ನೆಲೆ ಈ ಸಂಖ್ಯೆ ದುಪ್ಪಟ್ಟು ಆಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ಉಚಿತ ಪ್ರಯಾಣದಿಂದ ಬಿಎಂಟಿಸಿಗೆ 8,17,31,600 ರೂಪಾಯಿ ಹೊರೆ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಇದರ ಜತೆಗೆ, ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣ ಮಾಡುವುದರಿಂದ ಅವರಿಗೆ ಒಂದು ಸುವರ್ಣ ಅವಕಾಶ ಕಲ್ಪಿಸಿದಂತಾಗಿ ಸರ್ಕಾರದ ಘನತೆ ಹೆಚ್ಚಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಇದರಿಂದ ಸಾರ್ವಜನಿಕ ಸಾರಿಗೆ ಉತ್ತೇಜಿಸಿದಂತಾಗಲಿದ್ದು, ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಎಂದರೆ ಬಿಎಂಟಿಸಿ ಮಾತ್ರ ಎಂಬ ಬಗ್ಗೆ ಅರಿವು ಮೂಡಿಸಿದಂತಾಗಲಿದೆ ಎಂದು ಹೇಳಿದ್ದಾರೆ.

ಇದೇ ಮಾ. 9, 2023 ರಿಂದ ಮಾ. 29, 2023ರವರೆಗೆ ದ್ವಿತೀಯ ಪಿಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಹೀಗಾಗಿ ಪ್ರಯಾಣದ ವೇಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕು. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮಾತ್ರ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್