NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.8ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನೌಕರರ ವೇತನ ಪರಿಷ್ಕರಣೆ ಸಂಬಂಧ ವಿಧಾನಸೌಧದಲ್ಲಿ ಸಂಘಟನೆಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ವೇತನವನ್ನು ಪರಿಷ್ಕರಣೆ ಮಾಡುವ ಕುರಿತು ಚರ್ಚಿಸಲು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಮಾ.8ರಂದು (ಬುಧವಾರ) ವಿಧಾನಸೌಧದಲ್ಲಿ ಆಯೋಜಿಸಲಾಗಿದೆ.

ನಾಳೆ (ಮಾ.8) ಸಂಜೆ ವಿಧಾನಸೌಧ, 3ನೇ ಮಹಡಿ, ಕೊಠಡಿ ಸಂಖ್ಯೆ-313 ರಲ್ಲಿ ಸಭೆ ನಿಗದಿಪಡಿಸಿದ್ದು, ಎಲ್ಲ ಕಾರ್ಮಿಕ ಸಂಘಟನೆಗಳ ವತಿಯಿಂದ ಸ್ಥಳಾವಕಾಶದ ದೃಷ್ಟಿಯಿಂದ ಒಬ್ಬೊಬ್ಬ ಮುಖಂಡರು ಮಾತ್ರ ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಇನ್ನು ಸಾರಿಗೆ ನೌಕರರ ವೇತನ ಹೆಚ್ಚಳವನ್ನು ಅಗ್ರಿಮೆಂಟ್‌ ಮೂಲಕವೇ ಮಾಡಬೇಕು ಎಂದು ಪಟ್ಟು ಹಿಡಿದಿರುವ ಸಂಘಟನೆಗಳು ಮತ್ತು ಸರ್ಕಾರಿ ನೌಕರರ ಸರಿ ಸಮಾನ ವೇತನವನ್ನು ವೇತನ ಆಯೋಗ ಮಾದರಿಯಲ್ಲೇ ನೀಡಬೇಕು ಎಂದು ಪಟ್ಟು ಹಿಡಿದಿರುವ ಸಂಘಟನೆಗಳ ಮುಖಂಡರನ್ನು ಬೇರೆ ಬೇರೆಯಾಗಿಯೇ ಕರೆದು ಸಭೆ ನಡೆಸಲಾಗುತ್ತಿದೆ.

ಹೀಗಾಗಿ ನಾಳೆ ಸಂಜೆ ವಿಧಾನ ಸೌಧದಲ್ಲಿ ನಡೆಯಲಿರುವ ಸಾರಿಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡುವ ಕುರಿತು ಚರ್ಚಿಸುವ ಸಭೆ ಅಗ್ರಿಮೆಂಟ್‌ ಮೂಲಕವೇ ಮಾಡಬೇಕು ಎಂದು ಪಟ್ಟು ಹಿಡಿದಿರುವ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮೊದಲು ಸಚಿವರು ಸಭೆ ನಡೆಸಿ ಚರ್ಚಿಸಲಿದ್ದಾರೆ.

ಆ ಬಳಿಕ 2ನೆಯದಾಗಿ ನಾಲ್ಕು ವರ್ಷಕ್ಕೊಮ್ಮೆ ಮುಷ್ಕರ, ಅಮಾನತು, ವಜಾ, ಪೊಲೀಸ್‌ ಪ್ರಕರಣಗಳಂತಹ ರಗಳೆಗಳು ನಮ್ಮ ನೌಕರರಿಗೆ ಬೇಡ, ಹೀಗಾಗಿ ನೌಕರರಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕು. ಆದ್ದರಿಂದ ಸರ್ಕಾರಿ ನೌಕರರ ಸರಿ ಸಮಾನ ವೇತನದಂತೆ ವೇತನ ಆಯೋಗ ಮಾದರಿಯಲ್ಲಿ ಕೊಡಬೇಕು ಎಂದು ಪಟ್ಟು ಹಿಡಿದಿರುವ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸಲಾಗಿದೆ.

ಒಟ್ಟಾರೆ, ಸರ್ಕಾರದ ಮಟ್ಟದಲ್ಲಿ ಈಗ ಸಾರಿಗೆ ನೌಕರರ ವೇತನ ಸಂಬಂಧ ಸಭೆ ಮೇಲೆ ಸಭೆಗಳನ್ನು ಆಯೋಜಿಸುತ್ತಿದ್ದು, ಇದನ್ನು ಗಮನಿಸಿದರೆ ಅತೀ ಶೀಘ್ರದಲ್ಲೇ ಸರ್ಕಾರ ಸಾರಿಗೆ ನೌಕರರಿಗೆ ಅತೀ ಶೀಘ್ರದಲ್ಲೇ ಸಿಹಿಸುದ್ದಿ ನೀಡುವುದು ಬಹುತೇಕ ಖಚಿವಾಗುತ್ತಿದೆ ಎಂದೇ ಹೇಳಬಹುದು.

ನಾಳೆ ನಡೆಯುವ ಸಭೆಗಳ ಹೊರತಾಗಿ ಸರ್ಕಾರ ತಾನೇ ಕೊಟ್ಟಿರುವ ಭರವಸೆಯನ್ನು ಅಂದರೆ ವೇತನ ಆಯೋಗ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವುದಕ್ಕೆ ಈಗಾಗಲೇ ಸಜ್ಜಾಗಿರುವಂತೆಯೇ ಅದನ್ನು ಘೋಷಣೆ ಮಾಡುತ್ತದೆಯೋ ಇಲ್ಲ ಈ ಹಿಂದಿನಿಂದಲೂ ಇರುವಂತೆ ಅಗ್ರಿಮೆಂಟ್‌ ಮಾಡುವ ಮೂಲಕ ಕೊಟ್ಟ ಮಾತನ್ನು ತಪ್ಪುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್