NEWSನಮ್ಮರಾಜ್ಯಲೇಖನಗಳು

ಕೆಎಸ್‌ಆರ್‌ಟಿಸಿ ಮಹಾಮಂಡಳ ಅಧ್ಯಕ್ಷ ಶರ್ಮಾಜಿಯಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುವುದೇನೆಂದರೆ…!

ವಿಜಯಪಥ ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ಅಧ್ಯಕ್ಷರಾದ ಶರ್ಮಾಜಿರವರಿಗೆ ಈ ಮೂಲಕ ಕಳಕಳಿಯಿಂದ ವಿನಂತಿಸಿಕೊಳ್ಳುವುದೇನೆಂದರೆ ಇಂದು (ಮಾ.8 -2023) ಸಂಜೆ 5:30ಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಸಾಹೇಬರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ತಾವು ಭಾಗವಹಿಸುತ್ತಿರುವುದು ಬಹಳ ಸಂತೋಷದ ವಿಚಾರ.

ಹಿಂದಿನ ಇತಿಹಾಸ ತೆಗೆದು ನೋಡಿದರೆ ಸಾರಿಗೆ ಸಂಸ್ಥೆಯ ಶ್ರಮಿಕ ನೊಂದ ಬಹುಪಾಲು ಕಾರ್ಮಿಕರು ತಮ್ಮ ಮೇಲೆ ಅಪಾರವಾದ ಗೌರವ ಹೊಂದಿದ್ದಾರೆ. ನೀವು ಜಂಟಿ ಸಂಘಟನೆಯ ಜತೆಯಲ್ಲಿ ಹೋಗುತ್ತಿರುವುದಕ್ಕೆ ನಮ್ಮದೇನು ತಕರಾರಿಲ್ಲ.

ಆದರೆ, ವೇತನ ವಿಚಾರವಾಗಿ ಚೌಕಾಸಿ ಪರಿಷ್ಕರಣೆಯನ್ನು ಒಪ್ಪಿ ತಾವು ಬೆಂಬಲಿಸಿದರೆ ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗುವುದಲ್ಲದೆ ತಮ್ಮ ಮೇಲೆ ಇಟ್ಟಿರುವ ಅಪಾರ ಗೌರವವನ್ನು  ಕೈಯಾರೆ ಕಳೆದುಕೊಳ್ಳುತ್ತೀರಿ ಎಣಿಸುತ್ತಿದೆ.

ಸಂಘಟನೆಯೊಂದರ ಮುಖಂಡರು ಹಲವಾರು ಬಾರಿ ತಮ್ಮನ್ನು ನಾಮ್‌ ಕೇ ವಾಸ್ತೆ ಎಂಬಂತೆ ಹೆಸರಿಗೆ ಮಾತ್ರ ಕರೆದುಕೊಂಡು ಹೋಗಿ ತಮ್ಮ ಸ್ವಾರ್ಥದ ಬೇಳೆ  ಬೇಯಿಸಿಕೊಂಡು ನಿಮಗೆ ಹಲವು ಸನ್ನಿವೇಶದಲ್ಲಿ ಅವಮಾನಿಸಿದ್ದಾರೆ.

ಆದ್ದರಿಂದ ಪ್ರಜ್ಞಾವಂತ ಹಾಗೂ ಉನ್ನತ ವಿದ್ಯಾಭ್ಯಾಸ ಪಡೆದ  ಪ್ರೊಫೆಸರ್ ಕೂಡ ಆಗಿದ್ದ ತಾವು ಸಾರಿಗೆ ನೌಕರರ ಪಾಲಿನ ಕಣ್ಮಣಿಯೂ ಆಗಿದ್ದೀರಿ. ಹೀಗಾಗಿ ಅವರಲ್ಲಿ ಶಾಶ್ವತವಾಗಿ ಹೀಗೆ ಇರಬೇಕು ಎಂದು ಬಯಸುತ್ತೇವೆ.

ತಾವು ದಯವಿಟ್ಟು ಈ ಪ್ರತಿ ನಾಲ್ಕು ವರ್ಷಕ್ಕೊಂದು ಬಾರಿ ನಡೆಯುವ ಚೌಕಾಸಿ ವೇತನ ಪರಿಷ್ಕರಣೆಯಿಂದ ಸಾವಿರಾರು ನೌಕರರು  ವಜಾ, ವರ್ಗಾವಣೆ, ಅಮಾನತಿಗೊಳಗಾಗುತ್ತಿದ್ದಾರೆ. ಹೀಗಾಗಿ ಇಂತಹ ಮಾರಕ ವೇತನ ಪರಿಷ್ಕರಣೆಯಿಂದ ಹೊರಬಂದು ಶಾಶ್ವತ ಪರಿಹಾರಕ್ಕಾಗಿ ಬೆಂಬಲಿಸಿ.  ಸಾರಿಗೆ ನೌಕರರ ಪಾಲಿನ ಆರಾಧ್ಯ ದೈವವಾಗಿ ಎಂದು ಸಮಸ್ತ ಸಾರಿಗೆ ನೌಕರರ ಪರವಾಗಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇವೆ. ಧನ್ಯವಾದಗಳೊಂದಿಗೆ.

ಉತ್ತರ ಕರ್ನಾಟಕ ಭಾಗದ ಸಾರಿಗೆ ನೌಕರ

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು