NEWSನಮ್ಮರಾಜ್ಯಸಂಸ್ಕೃತಿ

ಬಿಎಂಟಿಸಿ 20ನೇ ಘಟಕ- ಕೆಕೆಆರ್‌ಟಿಸಿ ವಿಜಯಪುರ ಘಟಕದಲ್ಲಿ ಮಹಿಳಾ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೆಣ್ಣು ಇಂದು ಎಲ್ಲ ರಂಗದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾಳೆ. ಹೀಗಾಗಿ ಹೆಣ್ಣಿಲ್ಲದ ಜಗತ್ತನ್ನು ಇಂದು ಉಹಿಸಿಕೊಳ್ಳುವುದು ಆಸಾಧ್ಯವಾಗಿದೆ ಎಂದು ಬಿಎಂಟಿಸಿ ಘಟಕ 20ರ ವ್ಯವಸ್ಥಾಪಕ ಬ್ರಹ್ಮದೇವ ತಿಳಿಸಿದ್ದಾರೆ.

ಇಂದು ಬನಶಂಕರಿಯಲ್ಲಿರುವ ಘಟಕದಲ್ಲಿ ಆಯೋಜಿಸಿದ್ದ “ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ಮಹಿಳೆಯು ಕುಟುಂಬದಲ್ಲಿ ಹಲವಾರು ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ ಉದ್ಯೋಗ ಕ್ಷೇತ್ರದಲ್ಲೂ ಜವಾಬ್ದಾರಿಯುತದಿಂದ ಕಾರ್ಯನಿರ್ವಹಿಸಿ ಉತ್ತಮ ಸ್ಥಾನ ಪಡೆಯುವುದು ಹೆಣ್ಣಿಗೆ ಜನ್ಮದತ್ತವಾಗಿ ಬಂದ ಒಂದು ಕಲೆಯಾಗಿದೆ ಎಂದರು.

ಮಹಿಳೆಯರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೂ ಹಲವು ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವರು ಅಭಿವೃದ್ಧಿ ಹೊಂದಲು ಸರ್ಕಾರ ಜಾರಿಗೊಳಿಸಿರುವ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.

ಇನ್ನು ಸಾರಿಗೆ ನಿಗಮಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಮಹಿಳೆಯರು ಭಾರಿ ಒತ್ತಡದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ವೇಳೆ ತಾಳ್ಮೆಕಳ್ಳೆದುಕೊಳ್ಳುವುದು ಸಾಮಾನ್ಯ ಆದರೆ, ಒತ್ತಡದ ನಡುವೆ ಆದಷ್ಟು ತಾಳ್ಮೆಯನ್ನು ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಈ ಕಾರ್ಯಕ್ರಮದಲ್ಲಿ, ಎಟಿಎಸ್‌ ದೀಪಾ, ಟಿಐಗಳಾದ ರೂಪಾ, ಮಹದೇವ್‌ ಹೊನ್ನಾಳಿ, ನಿರ್ವಾಹಕಿಯರು, ತಾಂತ್ರಿಕ ಶಿಲ್ಪಿಗಳು, ಕಚೇರಿ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರಿಗೆ ಸಂಸ್ಥೆಯ ಶುಚಿಗಾರರಿಗೆ ಸನ್ಮಾನ  

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಶೇಷವಾಗಿ ಶುಚಿಗಾರರಿಗೆ ಸನ್ಮಾನ ಮಾಡಲಾಯಿತು.

ಈ ಸಮಾರಂಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ.ಮುಲ್ಲಾ, ವಿಭಾಗೀಯ ತಾಂತ್ರಿಕ ಶಿಲ್ಪಿ ಎ.ಎಚ್. ಮಧಬಾವಿ, ವಿಭಾಗೀಯ ಕಚೇರಿಯ ಅಧಿಕಾರಿಗಳು, ಘಟಕ ವ್ಯವಸ್ಥಾಪಕರು, ಕಾರ್ಮಿಕ ಮುಖಂಡರು, ಮಹಿಳಾ ಕಾರ್ಮಿಕರು ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್