- ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು
- ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್ ಅಧಿಕಾರಿಗಳ ಬಣ್ಣ ಬಯಲು
- BMTC ಮಹಿಳಾ DTO ಒಬ್ಬಳು ಟಿಸಿಗಳಿಗೆ ತರಕಾರಿ ತರುವುದಕ್ಕೆ ಬ್ಯಾಗ್ ಕೊಟ್ಟು ಕಳಿಸುತ್ತಾಳೆ
- ಇವರಪ್ಪ ಕೊಟ್ಟಿದ್ದಾನಾ ಟಿಸಿಗಳಿಗೆ ಹಣ – ಈಕೆ ಟಿಸಿಗಳನ್ನು ಮನೆಯಾಳುಗಳಂತೆ ಕಾಣುತ್ತಾಳಂತೆ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕೂ ನಿಗಮಗಳಲ್ಲಿ ಪ್ರತಿ ತಿಂಗಳು ನಿಲ್ದಾಣಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಎಲ್ಲ ಸಂಚಾರ ನಿಯಂತ್ರಕರಿಂದ ಅಧಿಕಾರಿಗಳು ತಲಾ 1000 ರೂಪಾಯಿ ವಸೂಲಿ ಮಾಡುತ್ತಿದ್ದಾರೆ.
ಇದು ಆರೋಪವಲ್ಲ ಪ್ರತಿ ತಿಂಗಳು ನಡೆಯುತ್ತಿರುವುದು ಸತ್ಯ ಎಂದು ನಿಷ್ಠಾವಂತ ಟಿಸಿಗಳು ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಕಣ್ಣೀರು ಹಾಕುವ ಮೂಲಕ ತಮಗಾಗುತ್ತಿರುವ ಕಿರುಕುಳವನ್ನು ವಿಜಯಪಥ ವರದಿಗಾರರ ಬಳಿ ತೋಡಿಕೊಂಡಿದ್ದಾರೆ.
ಇದಕ್ಕೆ ಸಂಬಂಧಪಟ್ಟಂತೆ ಆರ್ಟಿಐ ಕಾರ್ಯಕರ್ತ ಗೋಳೂರು ನಾಗರಾಜ್ ಅವರು ಕೂಡ ಈ ಸಂಬಂಧ KSRTC ವ್ಯವಸ್ಥಾಪಕ ನಿರ್ದೇಶಕಕರಿಗೆ ಪತ್ರ ಬರೆದಿದ್ದು ಬಹುತೇಕ ಎಲ್ಲ ಲಂಚಕೋರರಾದ ವಿಭಾಗೀಯ ನಿಯಂತ್ರಣಾಧಿಕಾರಿಗಳು (DC), ವಿಭಾಗೀಯ ಸಂಚಲನಾಧಿಕಾರಿಗಳ (DTO) ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಾಗರಾಜ್ ಅವರು ಮಾಹಿತಿ ಕಲೆಹಾಕಿದ್ದು ತುಮಕೂರು ವಿಭಾಗದ ತುಮಕೂರು ನಗರದ ಡಿ.ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಸಂಚಾರ ನಿಯಂತ್ರಕರು ಪ್ರತಿ ತಿಂಗಳು 1000 ರೂಪಾಯಿಯನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ವಿಭಾಗೀಯ ಸಂಚಲನಾಧಿಕಾರಿಯವರಿಗೆ ನೀಡಬೇಕೆಂದು ಬೇಸರ ವ್ಯಕ್ತಪಡಿಸಿರುವ ಬಗ್ಗೆ ಎಂಡಿ ಅವರ ಗಮನಕ್ಕೆ ತಂದಿದ್ದಾರೆ.
ಅಲ್ಲದೆ ನಾವು ಪ್ರತಿ ದಿನ ನಮ್ಮ ಕರ್ತವ್ಯ ಏನಿದಿಯೋ ಆ ಕೆಲಸವನ್ನು ಮಾಡಿಕೊಂಡು ಹೋಗುತ್ತೇವೆ ನಿರ್ವಾಹಕರಿಂದ ನಾವು ಐದು ಹತ್ತು ರೂಪಾಯಿಗಳಿಗೆ ಕೈ ಒಡ್ಡುವುದಿಲ್ಲ. ಈಗೀನ ಪರಿಸ್ಥಿತಿಯಲ್ಲಿ ನಿರ್ವಾಹಕರು ಯಾರು ಕೈ ನೀಡಿ ಐದು ಹತ್ತು ರೂಪಾಯಿಗಳನ್ನು ಕೊಡುವುದಿಲ್ಲ.
ಆದರೆ, ಕೆಲವು ಸಂಚಾರ ನಿಯಂತ್ರಕರು ರಾಜಾರೋಷವಾಗಿಯೇ ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಒಬ್ಬೊಬ್ಬರಿಂದ 1000 ರೂಪಾಯಿ ಕೊಡಲೇಬೇಕು ಎಂದು ಧಮ್ಕಿ ಹಾಕುವ ಮುಖಾಂತರ ವಸೂಲಿ ಮಾಡುವ ಮನೋಭಾವನೆ ಹೊಂದಿದ್ದಾರೆ.

ಅದಕ್ಕೆ ತುಮಕೂರು ವಿಭಾಗವನ್ನು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುವುದು ಹೇಗೆ ಎಂದು ಹೇಳಿಕೊಡು ಟ್ರೈನಿಂಗ್ ಶಾಲೆ ಎಂದೇ ಕರೆಯಲಾಗುತ್ತಿದೆ ಹಾಗೂ ಇದು ಭ್ರಷ್ಟರ, ಲಂಚಕೋರರ ತವರು ಮನೆಯಾಗಿದೆ. ಇನ್ನು ಎಲ್ಲ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ನಿಯಂತ್ರಕರು ಪ್ರತಿ ತಿಂಗಳು 1 ಸಾವಿರ ರೂಪಾಯಿ ಕೊಡದಿದ್ದರೆ ಅವರಿಗೆ ಬೆದರಿಕೆ ಹಾಕುತ್ತಾರೆ ಈ ಭ್ರಷ್ಟ ಅಧಿಕಾರಿಗಳ ಚೇಳಗಳು.
ಇನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಹಣ ವಸೂಲಿ ಮಾಡಿ ಕೊಡುವ ಉದ್ದೇಶಕ್ಕಾಗಿ ATS ಮಾಸಪ್ಪ ಎಂಬುವರನ್ನು ನಿಯೋಜಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಯಾರು ನೋಡುವುದಿಲ್ಲ ಎಂಬ ಗಾದೆ ಮಾತಿನಂತೆ ವಿಭಾಗೀಯ ನಿಯಂತ್ರಣಧಿಕಾರಿ ಹಾಗೂ ವಿಭಾಗೀಯ ಸಂಚಲನಾಧಿಕಾರಿಗಳು ಈ ರೀತಿ ಭ್ರಷ್ಟಾಚಾರವೆಸಗುತ್ತಿರುವುದು ಸರಿಯೇ? ಈ ಅಧಿಕಾರಿಗಳ ನಡೆಯಿಂದ ತುಮಕೂರು ವಿಭಾಗದಲ್ಲಿ ಚಾಲಕರು, ನಿರ್ವಾಹಕರು, ಸಂಚಾರ ನಿಯಂತ್ರಕರು ಕರ್ತವ್ಯ ನಿರ್ವಹಿಸುವುದೇ ದೊಡ್ಡ ತಲೆನೋವಾಗುತ್ತಿದೆ.
ಹೀಗಾಗಿ ಮೊದಲು ಈ ಅಧಿಕಾರಿಗಳು ಕೆಳ ಹಂತದ ಅಧಿಕಾರಿಗಳು ಸಿಬ್ಬಂದಿಗಳಿಗೆ ನೀಡುತ್ತಿರುವ ಲಂಚದ ಹಿಂಸೆಯಿಂದ ತಪ್ಪಿಸಿ ನೌಕರರು ಅವರಷ್ಟಕ್ಕೆ ಅವರು ನಿಷ್ಠೆಯಿಂದ ಡ್ಯೂಟಿ ಮಾಡುವ ವಾತಾವರಣ ಸೃಷ್ಟಿಸಬೇಕು ಎಂದು ನಾಗರಾಜ್ ನಿಗಮದ ಎಂಡಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಇನ್ನು ಈ ರೀತಿ ಬರಿ ತುಮಕೂರು ಸಾರಿಗೆ ವಿಭಾಗದಲ್ಲಿ ಮಾತ್ರನೆ ನಡೆಯುತ್ತಿಲ್ಲ. ಇದು 4 ನಿಗಮಗಳಲ್ಲೂ ಇದೆ. ಬಿಎಂಟಿಸಿಯಲ್ಲಿರುವ ಬಹುತೇಕೆ ಡಿಸಿಗಳು ಹಾಗೂ ಡಿಟಿಒಗಳು ಕೂಡ ಇದೇರೀತಿ ವಸೂಲಿ ಮಾಡುತ್ತಿದ್ದು, ಅದರಲ್ಲಿ ಡಿಟಿಒ ಮಹಿಳಾ ಅಧಿಕಾರಿಯೊಬ್ಬಳು ಟಿಸಿಗಳಿಗೆ ಮನೆಗೆ ತರಕಾರಿ ತೆಗೆದುಕೊಂಡು ಬಾ ಎಂದು ಬ್ಯಾಗ್ ಕೊಟ್ಟು ಹಣಕೊಡದೆ ಕಳಿಸುತ್ತಿದ್ದಾಳೆ.
ಅಲ್ಲದೆ ಈಕೆ ಟಿಸಿಗಳನ್ನು ಇವಳ ಮನೆ ಕೆಲದ ಆಳುಗಳ ರೀತಿ ನಡೆಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದ್ದು ಈ ಬಗ್ಗೆ ವಿಜಯಪಥ ವರದಿಗಾರರ ತಂಡ ಸತ್ಯಶೋಧನೆ ಕಾರ್ಯದಲ್ಲಿ ತೊಡಗಿದೆ. ಈಕೆಯ ಲಂಚಾವತಾರ ಹಾಗೂ ಟಿಸಿಗಳಿಂದ ಮನೆಗೆ ತರಕಾರಿ ಇತರೆ ದಿನ ಬಳಕೆಯ ದವಸವನ್ನು ತರಿಸಿಕೊಳ್ಳುತ್ತಿರುವುದು ಸಿಕ್ಕರೆ ಅಂದೆ ಈ ಮಹಿಳಾ ಡಿಟಿಒ ಫೋಟೋ ಸಹಿತ ವರದಿ ಪ್ರಕಟಿಸಲಾಗುವುದು.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...