NEWSರಾಜಕೀಯ

ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು. ಜತೆಗೆ ಸ್ವಾವಲಂಬಿ ಸ್ವಾಭಿಮಾನದ ಬದುಕಿಗೆ ಸೂರು ಅವಶ್ಯಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಸಬಲರಾದರೇ ಮಾತ್ರ ನಾಡಕಟ್ಟಲು ಸಾಧ್ಯ. ಬಡವಾರಾಗಿ ಹುಟ್ಟಿದ ಮೇಲೆ ಬಡವರಾಗಿ ಸಾಯಬೇಕೆಂಬ ನಿಯಮವಿಲ್ಲ ಎಲ್ಲರೂ ಪರಿಶ್ರಮದಿಂದ ಏಳಿಗೆ ಕಾಣಲು ಸಾಧ್ಯ ಎಂದರು.

ಇನ್ನು ಸ್ವಾವಲಂಬಿ ಸ್ವಾಭಿಮಾನದ ಬದುಕಿಗೆ ಸೂರು ಅವಶ್ಯಕ. ಅಶೋಕ್ ನೀಡಿರುವುದು ಕೇವಲ ಹಕ್ಕುಪತ್ರ ಅಲ್ಲ. ಮನಸ್ಸಿನ ನೆಮ್ಮದಿ, ಇದು ಕೇವಲ ನಮ್ಮ ಕಾಯಕ ಅಲ್ಲ ನಮ್ಮ ಪುಣ್ಯ. 1.50 ಲಕ್ಷಕ್ಕಿಂತ ಹೆಚ್ಚು ತಾಂಡಾ ಜನರಿಗೆ ಹಕ್ಕುಪತ್ರ ವಿತರಿಸಿದ್ದೇವೆ ಎಂದು ತಿಳಿಸಿದರು.

ಬಡವರ ಕನಸನ್ನು ನನಸು ಮಾಡುವುದು ನಮ್ಮ ಗುರಿ. ಜನರ ಕ್ಷೇಮಾಭಿವೃದ್ದಿಗಾಗಿ ನಾವು ರಾಜಕೀಯ ಮಾಡುತ್ತಿದ್ದೇವೆ. ಜನರಿಗೆ ಹತ್ತಿರವಾಗುವ ಯೋಜನೆಗಳನ್ನು ನೀಡಿದ್ದೇವೆ. ಜನರ ಸಮಸ್ಯೆ ಪರಿಹಾರಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಜಲಜೀವನ್ ಯೋಜನೆ ಮೂಲಕ ಪ್ರತಿಮನೆಗೂ ಕುಡಿಯುವ ನೀರು ಪೂರೈಸಲಾಗುತ್ತಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ಬಡವರ ಮಕ್ಕಳು ಮುಂದೆ ಬರಬೇಕು ನಿಮ್ಮ ಮಕ್ಕಳು ಶಿಕ್ಷಣ ಪಡೆದು ಈ ವೇದಿಕೆಯಲ್ಲಿ ಕುಳಿತುಕೊಳ್ಳಬೇಕು. ಆತ್ಮಸ್ಥೈರ್ಯದಿಂದ ಮುನ್ನುಗ್ಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ