ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಆಗಬೇಕಿರುವ ಬಗ್ಗೆ ಚರ್ಚಿಸಲು ಏ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೌಕರರ ಎಲ್ಲ ಸಂಘಟನೆಗಳ ಸಭೆ ಕರೆದಿದ್ದಾರೆ.
ಈ ಸಂಬಂಧ ಸಾರಿಗೆ ಇಲಾಖೆಯ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಕುರಿತು ಚರ್ಚಿಸುವ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟವೂ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆ ಸಂಬಂಧ ಸಾರಿಗೆ ಸಚಿವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳು ಸೇರಿದಂತೆ ಪ್ರಮುಖರಿಗೆ ಮನವಿ ಸಲ್ಲಿಸಿದ್ದರು.
ಅದರಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಕುರಿತು ಚರ್ಚಿಸಲು ಏ.15ರ ಸಂಜೆ 4.30ಕ್ಕೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಆ ಬಳಿಕ ಅಂದರೆ ಸಂಜೆ 5ಗಂಟೆಗೆ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಭೆ ನಡೆಸಲು ಎಲ್ಲ ಸೂಕ್ತ ಸಿದ್ಧತೆ ಹಾಗೂ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು, ಮಾಹಿತಿಯನ್ನು ತಪ್ಪದೇ ಸರ್ಕಾರಕ್ಕೆ ಒದಗಿಸುವಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್.ಪುಷ್ಪ ಎಂಡಿಗೆಳಿಗೆ ಈ ಮೊದಲೇ ತಿಳಿಸಿದ್ದು ಈಗಾಗಲೇ ಎಂಡಿಗಳು ಅಗತ್ಯ ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಇನ್ನು ನೌಕರರಿಗೆ ಸಿಕ್ಕಿಲ್ಲ. ಜತೆಗೆ ಈಗಾಗಲೇ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆಯ ಅವಧಿ ಮುಗಿದು 14 ತಿಂಗಳು ಕಳೆದರೂ ಆ ಬಗ್ಗೆಯೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರ ಏ.15ರಂದು ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟಗಳ ಸಭೆ ಕರೆದಿದ್ದು ಖುದ್ದು ಮುಖ್ಯಮಂತ್ರಿಗಳೇ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಇನ್ನು ಸಭೆಯಲ್ಲಿ ಸರ್ಕಾರ ಚುನಾವಣಾ ಪೂರ್ವದಲ್ಲಿ ನೌಕರರಿಗೆ ಕೊಟ್ಟಿರುವ ಸರಿ ಸಮಾನ ವೇತನ ಕೊಡಲು ಒಪ್ಪುವ ಬಹುತೇಕ ಎಲ್ಲ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.
Related

You Might Also Like
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...