NEWSದೇಶ-ವಿದೇಶರಾಜಕೀಯವಿಜ್ಞಾನ

ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿ ಬಗ್ಗೆ ಕ್ರಮಕ್ಕೆ ಒತ್ತಾಯ

ಸರ್ಕಾರ ನೀಡಿರುವ ಜಾಗವನ್ನು ನೀಡಿದ ಉದ್ದೇಶಕ್ಕೆ ಬಳಸಿಕೊಳ್ಳದ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವ   ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಬಿವೃದ್ಧಿ ಮಂಡಳಿಯಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್ ಪೇಟೆ 1 ನೇ ಹಂತದ ಕೈಗಾರಿಕಾ ಪ್ರದೇಶದ ನಿವೇಶನ ಸಂಖ್ಯೆ.1 ಮತ್ತು 2-ಪಾರ್ಟ್ ರಲ್ಲಿ ಒಟ್ಟು 149 ಎಕರೆ 5.5 ಗುಂಟೆ ಜಮೀನನ್ನು ಮೆ. ಬಿ.ಪಿ.ಎಲ್ ಲಿ. ಅವರಿಗೆ ಹಂಚಿಕೆ ಮಾಡಲಾಗಿದೆ.  ಈ ಕಂಪನಿಗೆ ಸರ್ಕಾರ ನೀಡಿರುವ ಜಾಗವನ್ನು ನೀಡಿದ ಉದ್ದೇಶಕ್ಕೆ ಬಳಸಿಕೊಳ್ಳಲಾರದ ಆರೋಪವಿದ್ದು ಪ್ರಸ್ತುತ ಅದು ನ್ಯಾಯಾಲಯದಲ್ಲಿದೆ  ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್   ತಿಳಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ನೆಲಮಂಗಲ ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ , ಬಿ.ಪಿ.ಎಲ್ ಕಂಪನಿಗೆ ನೀಡಿರುವ ಜಾಗದ ಕ್ರಯಪತ್ರವನ್ನು ರದ್ದು ಮಾಡಲು ಕಾನೂನಿನ ಮೊರೆ ಹೋಗುವುದಾಗಿ ಹೇಳಿದರು.

ಸದರಿ ಕಂಪನಿಯು ಹಂಚಿಕೆ ಪಡೆದಿರುವ ವಿಸ್ತೀರ್ಣದಲ್ಲಿ ಶೇಕಡಾ 5.12 ರಷ್ಟು ಜಮೀನನ್ನು ಕಟ್ಟಡಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ತಿಳಿಸಿದರು.

ಮೆ.ಬಿ.ಪಿ.ಎಲ್ ಲಿ. ಕಂಪನಿಯು ಹಂಚಿಕೆ ಪಡೆದಿರುವ ವಿಸ್ತೀರ್ಣದಲ್ಲಿ ಶೇಕಡಾ 5.12 ರಷ್ಟು ಜಮೀನನ್ನು ಕಟ್ಟಡಕ್ಕಾಗಿ ಬಳಸಿಕೊಂಡಿರುತ್ತದೆ. ಕೆ.ಐ.ಎ.ಡಿ.ಬಿ.ಯು  2006 ನವೆಂಬರ್‌  28  ರಂದು ಶುದ್ದ ಕ್ರಯಪತ್ರವನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.

ಕೆ.ಐ.ಎ.ಡಿ.ಬಿ.ಯಿಂದ ಕ್ರಯಪತ್ರ ಪಡೆದ ನಂತರ ಮೆ. ಬಿ.ಪಿ.ಎಲ್ ಲಿ. ಅವರು  ಕೆಲ ಸಂಸ್ಥೆಗಳಿಗೆ ಜಮೀನನ್ನು ಮಾರಾಟ ಮಾಡಿದ್ದು, ಆ  ಕಂಪನಿಗಳ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ