NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಬೆಳಗ್ಗೆ 6ರಿಂದಲೇ ಸರ್ಕಾರಿ ಸಾರಿಗೆ ಬಸ್‌ ಬಂದ್‌… ಬಂದ್‌…: ಸಾರ್ವಜನಿಕರೇ ತುರ್ತು ಕೆಲಸವಿದ್ದರೆ ನಿಮ್ಮ ಸ್ವಂತ ವಾಹನ ಬಳಸುವುದು ಸೂಕ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಮುಖವಾಗಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೂ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ನಾಳೆಯಿಂದ (ಮಾ.24) ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವುದು ಖಚಿತ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ಮಾ.20ರಂದು ಕಾರ್ಮಿಕ ಇಲಾಖೆ ಆಯುಕ್ತರು ರಾಜೀಸಂಧಾನ ಸಭೆ ಕರೆದು ನಾಮ್‌ ಕೇ ವಾಸ್ತೆ ಎಂಬಂತೆ ನಡೆದುಕೊಂಡರು. ಇನ್ನು ಮಾ.21ರಂದು ಬಿಎಂಟಿಸಿ ಅಧಿಕಾರಿಗಳು ಮತ್ತೊಂದು ಸುತ್ತಿನ ಮಾತುಕತೆಗೆ ಕರೆದು ಬೆದರಿಕೆ ಹಾಕಿದ್ದರು. ಹೀಗಾಗಿ ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮಾಡುವುದು ಸಿದ್ಧ ಎಂದು ಹೇಳಿದರು.

ಸಾರಿಗೆ ನೌಕರರನ್ನು ವೇತನ ಆಯೋಗ ಮಾದರಿಯಡಿ ತರಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರಿಗೆ ಸಚಿವರು ಪದೇಪದೆ ಹಳೇ ಮಾತುಗಳನ್ನೇ ಹೇಳುತ್ತಿದ್ದಾರೆ. ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ತೀರ್ಮಾನ ಮಾಡುತ್ತಿಲ್ಲ. ಇನ್ನು ಸರ್ಕಾರ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಇದು. ಇದಿಷ್ಟೇ ಸಾಕು ಎಂಬಂತೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಿಎಂಗೆ ಅಭಿನಂದನೆ ಸಲ್ಲಿಸಿ ಬಂದಿದ್ದಾರೆ.

ಇದೆಲ್ಲವನ್ನು ಗಮನಿಸಿದರೆ, ಸರ್ಕಾರ ನಮ್ಮನ್ನು ಅತ್ಯಂತ ಕೀಳಾಗಿ ನಡೆಸಿಕೊಳ್ಳುತ್ತದೆ. ಇದರಿಂದ ಬೇಸತ್ತಿರುವ ನಮಗೆ ಮುಷ್ಕರ ಮಾಡುವುದು ಬಿಟ್ಟು ಬೇರೆ ದಾರಿ ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬಸ್‌ಬಂದ್‌ ಮಾಡಿ ಮುಷ್ಕರ ಮಾಡುವುದು ಖಚಿತ ಎಂದು ಹೇಳಿದರು.

ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿರುವ ಬಂದ್‌ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6ಗಂಟೆಯಿಂದಲೇ ಬಸ್‌ಗಳು ರಸ್ತೆಗಿಳಿಯುವುದು ಬಹುತೇಕ ಅನುಮಾನವೆ. ಹೀಗಾಗಿ ನಾಡಿನ ಜನರು ತುರ್ತು ಕೆಲಸಗಳಿದ್ದರೆ ನಿಮ್ಮ ಸ್ವಂತ ವಾಹನಗಳನ್ನು ಅವಲಂಬಿಸುವುದು ಒಳ್ಳೆಯದು.

ಮಾ.31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಅಲ್ಲಿಯವರೆಗೂ ಮುಷ್ಕರ ಮುಂದುವರಿದರೆ ವಿದ್ಯಾರ್ಥಿಗಳಿಗೂ ತೊಂದರೆ ಆಗಬಹುದು. ಇಲ್ಲ ಅಷ್ಟರೊಳಗೆ ಸರ್ಕಾರ ನೌಕರರ ಜತೆ ಮಾತುಕತೆ ನಡೆಸಿದರೆ ಬಂದ್‌ ವಾಪಸ್‌ ಪಡೆಯುವ ಸಾಧ್ಯತೆಯೂ ಹೆಚ್ಚಿದೆ.

ಒಟ್ಟಾರೆ, ನಾಳೆ ಬೆಳಗ್ಗೆ 6ಗಂಟೆಯಿಂದ ಸರ್ಕಾರಿ ಬಸ್‌ಗಳು ರಸ್ತೆಗೆ ಇಳಿಯಲ್ಲ. ಈ ಬಂದ್‌ ಸಂಬಂಧ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಬಂದ್‌ನಲ್ಲಿ ಭಾಗವಹಿಸುವುದಕ್ಕಾಗಿಯೇ ಸಾರಿಗೆ ನೌಕರರು ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ಬುಕ್‌ ಮಾಡಿಕೊಂಡಿದ್ದು, ಬಸ್‌ ನಿಲ್ಲಿಸಿ ಮುಷ್ಕರದಲ್ಲಿ ಭಾಗವಹಿಸುವುದಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ